ಸಿರುಗುಪ್ಪ : 04:."ತಾಲೂಕಿನ ರೈತರು ತೀವ್ರ ಸಂಕಷ್ಟದಲ್ಲಿದ್ದು, ಸರ್ಕಾರ ತಕ್ಷಣವೇ ಅವರ ನೆರವಿಗೆ ಬರಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ" ಎಂದು ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಎಚ್ಚರಿಸಿದರು.
ನಗರದ ಸರ್ಕಾರಿ ನೌಕರರ ಆವರಣದಲ್ಲಿ ಬಿಜೆಪಿ ತಾಲ್ಲೂಕು ಘಟಕದಿಂದ ಗುರುವಾರ ಆಯೋಜಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರ ಧರಣಿಯಲ್ಲಿ ಮಾತನಾಡಿದರು.
ತಾಲ್ಲೂಕಿನಲ್ಲಿ ಮಳೆ ಅಭಾವ ಹಾಗೂ ನೀರಾವರಿ ಸಮಸ್ಯೆಯಿಂದ ಬೆಳೆಗಳು ಒಣಗುತ್ತಿದ್ದು, ತಕ್ಷಣವೇ ಸಿರುಗುಪ್ಪ ತಾಲೂಕನ್ನು ‘ಬರಪೀಡಿತ ತಾಲೂಕು’ ಎಂದು ಘೋಷಿಸಬೇಕು. ತುಂಗಭದ್ರಾ ನದಿಗೆ ಸಮರ್ಪಕವಾಗಿ ನೀರು ಹರಿಸುವ ಮೂಲಕ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡಬೇಕು. ವೇದಾವತಿ ನದಿಗೆ (ಹಗರಿಗೆ) ಎಲ್ಎಲ್ಸಿ ಕಾಲುವೆ ಮುಖಾಂತರ ತಕ್ಷಣವೇ ನೀರು ಹರಿಸಬೇಕು. ರೈತರು ಕಟ್ಟಿರು ಬೆಳೆ ವಿಮೆ ಪರಿಹಾರ ಹಣವನ್ನು ತಕ್ಷಣವೇ ಜಮಾ ಮಾಡಬೇಕೆಂದು ಒತ್ತಾಯಿಸಿದರು.
ಬಿಜೆಪ ತಾಲ್ಲೂಕು ಅಧ್ಯಕ್ಷ ಕುಂಟ್ನಾಳ ಮಲ್ಲಿಕಾರ್ಜುನ ಸ್ವಾಮಿ, ಬಿಜೆಪಿ ಮುಖಂಡರು, ರೈತ ನಾಯಕರು ಮತ್ತು ಕಾರ್ಯಕರ್ತರು ಇದ್ದರು.
ಸಿರುಗುಪ್ಪ ನಗರದ ಸರ್ಕಾರಿ ನೌಕರರ ಆವರಣದಲ್ಲಿ ಬಿಜೆಪಿ ತಾಲ್ಲೂಕು ಘಟಕದಿಂದ ಗುರುವಾರ ಆಯೋಜಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರ ಧರಣಿಯಲ್ಲಿ ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಮಾತನಾಡಿದರು.