LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮೋದಿ ಭಾಷಣವನ್ನು ಟೀಕಿಸಿದ್ದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಉಸ್ಮಾನ್ ಘನಿ ಉಚ್ಛಾಟನೆ

ದೆಹಲಿ 25: ಪ್ರಧಾನಿ ನರೇಂದ್ರ ಮೋದಿ ಭಾಷಣವನ್ನು ಟೀಕಿಸಿದ್ದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಉಸ್ಮಾನ್ ಘನಿಯನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ರಾಜಸ್ಥಾನದಲ್ಲಿ ಪ್ರಧಾನಿ ಮೋದಿ ಅವರ ಇತ್ತೀಚಿನ ಹೇಳಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಕ್ಕಾಗಿ ಬಿಜೆಪಿ ಘನಿಯನ್ನು ಪಕ್ಷದಿಂದ ಹೊರಹಾಕಿದೆ.

ಪಕ್ಷದ ವರ್ಚಸ್ಸಿಗೆ ಕಳಂಕ ತಂದ ಆರೋಪದ ಮೇಲೆ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಘನಿ ರಾಜ್ಯದಲ್ಲಿ 25 ಸ್ಥಾನಗಳಲ್ಲಿ 3-4 ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಹೇಳಿದ್ದರು. ರಾಜ್ಯದಲ್ಲಿ ಚುನಾವಣಾ ರ್ಯಾಲಿಗಳಲ್ಲಿ ಪ್ರಧಾನಿ ಮೋದಿ ಮುಸ್ಲಿಮರ ವಿರುದ್ಧ ಮಾಡಿದ ಹೇಳಿಕೆಗಳನ್ನು ಟೀಕಿಸಿದ್ದರು.

ಪ್ರಧಾನಿ ಮೋದಿ ಅವರ ಮುಸ್ಲಿಮರ ವಿರುದ್ಧದ ಹೇಳಿಕೆಯ ಬಗ್ಗೆ ಕೇಳಿದಾಗ ಒಬ್ಬ ಮುಸಲ್ಮಾನನಾಗಿ ಅವರ ಹೇಳಿಕೆ ಬೇಸರ ತಂದಿದೆ ಎಂದಿದ್ದರು. ಬಿಜೆಪಿಗೆ ಮತ ಕೇಳಲು ಮುಸ್ಲಿಮರ ಬಳಿ ಹೋದಾಗ ಸಮುದಾಯದ ಜನರು ಪ್ರಧಾನಿ ಹೇಳಿಕೆ ಬಗ್ಗೆ ಪ್ರಶ್ನೆ ಕೇಳುತ್ತಾರೆ ನಮ್ಮಿಂದ ಉತ್ತರ ಬಯಸುತ್ತಾರೆ ಎಂದಿದ್ದರು.

ಈ ಹೇಳಿಕೆಯ ಬಗ್ಗೆ ಯಾವುದೇ ಕ್ರಮ ಕೈಗೊಂಡರೂ ನಾನು ಹೆಸರುವುದಿಲ್ಲ ಎಂದು ಘನಿ ಹೇಳಿದ್ದರು. ಅವರ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷ ಓಂಕಾರ್ ಸಿಂಗ್ ಅವರು ಘನಿಯನ್ನು ಪಕ್ಷದಿಂದ ಉಚ್ಛಾಟಿಸಿದರು. ಬಿಕಾನೇರ್ ಲೋಕಸಭಾ ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಏಪ್ರಿಲ್ 19ರಂದು ಮತದಾನ ನಡೆದಿತ್ತು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್