Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಪಕ್ಷಕ್ಕೆ  ಸೇರ್ಪಡೆ

ಶಿರಸಿ,ಏಪ್ರಿಲ್ 11: ಯಲ್ಲಾಪುರ- ಮುಂಡಗೋಡ ವಿಧಾನಸಭಾ ಕ್ಷೇತ್ರದ  ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್  ಹಾಗೂ ಬೆಂಬಲಿಗರು ತಾಲ್ಲೂಕಿನ ಬನವಾಸಿಯಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ  ಸೇರ್ಪಡೆಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಿರಿಯ ನಾಯಕ, ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಅವರು ವಿವೇಕ್ ಹೆಬ್ಬಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ನೂರಾರು ಬೆಂಬಲಿಗರ ಜೊತೆ ವಿವೇಕ್ ಹೆಬ್ಬಾರ್ ಕೈ ಹಿಡಿದರು.

ಬನವಾಸಿಯ ಟಿಎಂಎಸ್ ಎದುರಿನ ಮೈದಾನದಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಬಿಜೆಪಿಯವರು ನಮ್ಮ ಬೆಂಬಲಿಗರು, ಕಾರ್ಯಕರ್ತರನ್ನ ನಡೆಸಿಕೊಂಡ ರೀತಿಗೆ ಬೇಸರವಾಗಿದೆ. ಇದೇ ಬೇಸರದಿಂದ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ ಎಂದು ಬನವಾಸಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ವಿವೇಕ್ ಹೆಬ್ಬಾರ್ ಹೇಳಿದ್ದಾರೆ.

ಅಲ್ಲದೇ, ನಾವು ಮೂಲತಃ ಕಾಂಗ್ರೆಸ್ ಕುಟುಂಬದವರು, ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಜೀವನ ಸಾಗಿಸುತ್ತಿದ್ದವರಾದ್ದರಿಂದ ನಮ್ಮ ಮನೆಗೆ ವಾಪಸ್ ಬಂದಿದ್ದೇನೆ. ಮುಂದಿನ ದಿನಗಳಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನ ಸದೃಢಗೊಳಿಸುತ್ತೇವೆ. ಲೋಕಸಭಾ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ರನ್ನ ಅತೀ ಹೆಚ್ಚು ಮತಗಳಿಂದ ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದು ನೂತನವಾಗಿ ಕಾಂಗ್ರೆಸ್ ಸೇರ್ಪಡೆಗೊಂಡ ವಿವೇಕ್ ಹೆಬ್ಬಾರ್ ಹೇಳಿದ್ದಾರೆ.

ಕಾಂಗ್ರೆಸ್ ಸೇರ್ಪಡೆ ಬಳಿಕ ನ್ಯೂಸ್​18 ಕನ್ನಡದೊಂದಿಗೆ ಮಾತನಾಡಿದ ವಿವೇಕ್ ಹೆಬ್ಬಾರ್, ವಿಧಾನಸಭಾ ಚುನಾವಣೆಯ ಬಳಿಕ ನಾವು ಅಂದರೆ ಕಳೆದ 2-3 ತಿಂಗಳಿನಿಂದ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ಆಗುತ್ತಿತ್ತು. ಚುನಾವಣೆಯ ಸಂದರ್ಭದಲ್ಲಿ ಪಕ್ಷದಲ್ಲಿರುವ ಕೆಲ ನಾಯಕರು ನಮ್ಮ ತಂದೆಯವರ ವಿರುದ್ಧ ಹೇಗೆ ಕೆಲಸ ಮಾಡಿದರು. ನಮ್ಮನ್ನು ಸೋಲಿಸಲು ಪ್ರಯತ್ನ ಪಟ್ಟ ವ್ಯಕ್ತಿಗಳಿಗೆ ಪಕ್ಷ ಉನ್ನತ, ಜವಾಬ್ದಾರಿಯನ್ನು ಕೊಟ್ಟಿತ್ತು. ಇದರಿಂದ ನಮ್ಮ ಕಾರ್ಯಕರ್ತರಿಗೆ ಬೇಸರ ಆಗಿತ್ತು. ಆದ್ದರಿಂದ ಅನಿವಾರ್ಯವಾಗಿ ಕಾರ್ಯಕರ್ತರ ಒತ್ತಾಯದ ಮೇರೆಗೆ ನಮ್ಮ ಮನೆಗೆ ಬರುವ ನಿರ್ಧಾರ ಮಾಡಿ ಬಂದಿದ್ದೇವೆ ಎಂದು ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ