Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ಯಾರಿಸ್‌ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಬಿಜೆಪಿ ಶಾಸಕಿ ಶ್ರೇಯಸಿ ಸಿಂಗ್ ಆಯ್ಕೆ

ಜುಲೈ 26 ರಿಂದ ಪ್ಯಾರಿಸ್‌ನಲ್ಲಿ ಶುರುವಾಗಲಿರುವ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಬಿಜೆಪಿ ಶಾಸಕಿ ಶ್ರೇಯಸಿ ಸಿಂಗ್  ಆಯ್ಕೆಯಾಗಿದ್ದಾರೆ. ಈ ಹಿಂದೆ ಕಾಮನ್‌ವೆಲ್ತ್ ಕ್ರೀಡಾಕೂಟ ಮತ್ತು ಏಷ್ಯನ್ ಗೇಮ್ಸ್​ ಶೂಟಿಂಗ್​ನಲ್ಲಿ ಪದಕ ಗೆದ್ದಿದ್ದ ಶ್ರೇಯಸಿ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್​ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಈ ಹಿಂದೆ ಒಲಿಂಪಿಕ್ಸ್​ಗೆ ಆಯ್ಕೆ ಮಾಡಲಾದ ಶೂಟರ್​ಗಳ ಪಟ್ಟಿಯಲ್ಲಿ ಶ್ರೇಯಸಿ ಸಿಂಗ್ ಅವರ ಹೆಸರು ಇರಲಿಲ್ಲ. ಅಲ್ಲದೆ ಪಿಸ್ತೂಲ್ ಶೂಟರ್ ವಿಭಾಗದಲ್ಲಿ ಪಾಲಕ್ ಅವರು ಅರ್ಹತೆ ಪಡೆದುಕೊಂಡಿದ್ದರು.

ಮತ್ತೊಂದೆಡೆ ಮನು ಪ್ರಭಾಕರ್ ಏರ್ ಪಿಸ್ತೂಲ್ ಮತ್ತು ಸ್ಪೋರ್ಟ್ಸ್ ಪಿಸ್ತೂಲ್ ಎರಡರಲ್ಲೂ ಅಗ್ರಸ್ಥಾನ ಗಳಿಸಿದ್ದರು. ಎರಡು ವಿಭಾಗಗಳಲ್ಲೂ ಆಯ್ಕೆಯಾಗಿದ್ದ ಮನು ಪ್ರಭಾಕರ್​, ಒಂದೇ ಕೋಟಾದಲ್ಲಿ ಎರಡು ಈವೆಂಟ್‌ಗಳಲ್ಲಿ ಸ್ಪರ್ಧಿಸಬಹುದಾಗಿದೆ. ಹೀಗಾಗಿ ಮನು ಬಳಿಯಿದ್ದ ಒಂದು ಕೋಟಾವನ್ನು ಮಹಿಳಾ ಟ್ರ್ಯಾಪ್ ಶೂಟರ್‌ಗಾಗಿ ಬದಲಿಸಲಾಗಿದೆ.

ಈ ಬದಲಾವಣೆಗಾಗಿ ನ್ಯಾಷನಲ್ ರೈಫಲ್ ಅಸೋಸಿಯೇಷನ್ ​​ಆಫ್ ಇಂಡಿಯಾ ( ಎನ್‌ಆರ್‌ಎಐ ) ಇಂಟರ್ನ್ಯಾಷನಲ್ ಶೂಟಿಂಗ್ ಸ್ಪೋರ್ಟ್ಸ್ ಫೆಡರೇಶನ್ (ISSF) ಗೆ ಮನವಿ ಸಲ್ಲಿಸಿತ್ತು. ಇದೀಗ ಈ ಮನವಿಯನ್ನು ಪುರಸ್ಕರಿಸಲಾಗಿದ್ದು, ಅದರಂತೆ ಶ್ರೇಯಸಿ ಸಿಂಗ್​ಗೆ ಮಹಿಳಾ ವಿಭಾಗದ ಶೂಟಿಂಗ್​ ಸ್ಪರ್ಧೆಯಲ್ಲಿ ಅವಕಾಶ ಲಭಿಸಿದೆ.

ಶ್ರೇಯಸಿ ಸಿಂಗ್, ದಿವಂಗತ ಮಾಜಿ ಸಚಿವ ದಿಗ್ವಿಜಯ್ ಸಿಂಗ್ ಅವರ ಪುತ್ರಿ. ಅಲ್ಲದೆ ಬಿಹಾರದ ಜಮುಯಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ. ಇದೀಗ ಒಲಿಂಪಿಕ್ಸ್​ಗೆ ಅರ್ಹತೆ ಪಡೆಯುವ ಮೂಲಕ ಬಿಹಾರದಿಂದ ಆಯ್ಕೆಯಾದ ಏಕೈಕ ಸ್ಪರ್ಧಿ ಎನಿಸಿಕೊಂಡಿದ್ದಾರೆ.

ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸುವುದು ನನ್ನ ತಂದೆಯ ದೊಡ್ಡ ಕನಸಾಗಿತ್ತು. ಇದೀಗ ಈ ಕನಸು ನನಸಾಗಿದೆ. ಒಲಂಪಿಕ್ಸ್‌ನಲ್ಲಿ ದೇಶಕ್ಕಾಗಿ ಚಿನ್ನದ ಪದಕ ಗೆಲ್ಲುವ ವಿಶ್ವಾಸವಿದೆ. ಜುಲೈ 30 ಮತ್ತು 31 ರಂದು ನಡೆಯಲಿರುವ ಸ್ಪರ್ಧೆಯಲ್ಲಿ ದೇಶಕ್ಕಾಗಿ ಚಿನ್ನದ ಪದಕವನ್ನು ಗೆಲ್ಲುವಂತೆ ಪ್ರಾರ್ಥಿಸಲು ಜಮುಯಿ ಜನತೆಗೆ ಶ್ರೇಯಸಿ ಸಿಂಗ್ ಮನವಿ ಮಾಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ