Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಪುಟದ ಸದಸ್ಯರೊಬ್ಬರು ಯತ್ನಾಳ್ ಗೆ ಹನಿಟ್ರ್ಯಾಪ್‌ ವಿಚಾರ ಪ್ರಸ್ತಾಪಿಸಲು ಹೇಳಿದ್ರು: ಬಿಜೆಪಿ ಶಾಸಕ ಸುರೇಶ್‌ಗೌಡ

ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿರುವ ವಿಷಯವನ್ನು ಪ್ರಸ್ತಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸದಸ್ಯರೊಬ್ಬರು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸೂಚಿಸಿದ್ದಾರೆ ಎಂದು ತುಮಕೂರು ಗ್ರಾಮೀಣ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಶುಕ್ರವಾರ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರ ಆಪ್ತರು ಯತ್ನಾಳ್ ಅವರಿಗೆ ಚಿಟ್ ಕಳುಹಿಸಿದ್ದು ಏಕೆ ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಏನಾಗುತ್ತಿದೆ ಎಂದು ಅವರು ಅಚ್ಚರಿ ವ್ಯಕ್ತಪಡಿಸಿದರು

ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ, ಆಡಳಿತ ಪಕ್ಷದ ಕಡೆಯಿಂದ ಚೀಟಿ, ನಮ್ಮ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಂತು. ಅದಾದ ನಂತರವೇ ಯತ್ನಾಳ್ ಅವರು ಈ ವಿಚಾರಕ್ಕೆ ಸಂಬಂಧ ಮಾತನಾಡಲು ಆರಂಭಿಸಿದ್ದು ಎಂದು ಆರೋಪಿಸಿದ್ದಾರೆ.ಆಡಳಿತ ಪಕ್ಷದ ಯಾರು ಯತ್ನಾಳ್ ಅವರಿಗೆ ಚೀಟಿ ಕಳುಹಿಸಿಕೊಟ್ಟಿದ್ದು, ಅದರ ತನಿಖೆಯಾಗಬೇಕು. ಇದು ಎಲ್ಲರಿಗೂ ಅಗೌರವ ಕೊಡುವ ಮತ್ತು ಗಂಭೀರ ವಿಚಾರ ಇದಾಗಿದೆ. ಸ್ಪೀಕರ್ ಅವರು ಇದರ ಬಗ್ಗೆ ಗಮನ ಕೊಡಬೇಕು, ಇದನ್ನು ತನಿಖೆಗೆ ಒಳಪಡಿಸಬೇಕು. ಇದರಿಂದಾಗಿ, ಚೀಟಿ ಕಳುಹಿಸಿದ ಸಚಿವರು ಯಾರು ಎನ್ನುವುದು ರಾಜ್ಯದ ಜನತೆಗೆ ಗೊತ್ತಾಗಬೇಕು ಎಂದು ಸುರೇಶ್ ಗೌಡ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪಾರ್ಟಿಯಲ್ಲಿ ಏನಾಗುತ್ತಿದೆ ಎನ್ನುವುದು ಗೊತ್ತಾಗಬೇಕಿದೆ, ಇದನ್ನು ಕಡೆಗಣಿಸುವಂತಿಲ್ಲ. ಚೀಟಿ ಕಳುಹಿಸಿದವರು ಯಾರು, ಮುಖ್ಯಮಂತ್ರಿಗಳಿಗೆ ಆಪ್ತರಾಗಿರುವವರಾ ಎನ್ನುವ ಪ್ರಶ್ನೆಯನ್ನು ಸುರೇಶ್ ಗೌಡ ಎತ್ತಿದರು. ಆಗ ಮಧ್ಯ ಪ್ರವೇಶಿಸಿದ ಸಿಎಂ ಸಿದ್ದರಾಮಯ್ಯ, ಸುನೀಲ್ ಕುಮಾರ್ ಏನೋ ಈ ವಿಚಾರವನ್ನು ಪ್ರಸ್ತಾವಿಸಿದರು. ಎಲ್ಲರೂ ಈ ವಿಚಾರದ ಬಗ್ಗೆ ಮಾತನಾಡಬೇಕಾ ಎಂದು ಸುರೇಶ್ ಗೌಡ ಅವರನ್ನು ಕೂರಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*