LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗ್ಯಾರಂಟಿಗೆ SCP-TSP ಹಣ ಬಳಕೆ; ಸರ್ಕಾರ ವಿರುದ್ಧ ಬಿಜೆಪಿ ಆಕ್ರೋಶ

ಮೈಸೂರು: ಎಸ್‌ಸಿಪಿ/ಟಿಎಸ್‌ಪಿ ಉಪಯೋಜನೆಯಡಿ ಎಸ್‌ಸಿ/ಎಸ್‌ಟಿಗಳಿಗೆ ಮೀಸಲಿಟ್ಟ 25,000 ಕೋಟಿ ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದು, ಈ ಮೂಲಕ ತಳ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.

ಮೈಸೂರಿನ ಬಿಡೆಪಿ ಕಚೇರಿಯಲ್ಲಿ ಗುರುವಾರ ಎಸ್‌ಸಿ/ಎಸ್‌ಟಿ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಬಿ.ಶ್ರೀರಾಮುಲು ಅವರು, ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮೀಸಲಿಟ್ಟಿದ್ದ ಶೇ.24 ಹಣವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದೆ. ಈ ಮೂಲಕ ತಳ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಕಿಡಿಕಾರಿದರು.

ನಮ್ಮ ಪಕ್ಷ ಗ್ಯಾರಂಟಿ ಯೋಜನೆಗಳ ವಿರುದ್ಧವಿಲ್ಲ. ಆದರೆ, ರಾಜ್ಯ ಸರ್ಕಾರ ಗ್ಯಾರಂಟಿಗಳಿಗೆ ಅಗತ್ಯವಿರುವ 56,000 ಕೋಟಿಗಳಷ್ಟು ಹಣವನ್ನು ಪ್ರತ್ಯೇಕ ಮೀಸಲಿಡಬೇಕು ಮತ್ತು ಎಸ್‌ಸಿ/ಎಸ್‌ಟಿ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಶೇ 24.8 ರಷ್ಟು ಹಣವನ್ನು ಬಳಸಬಾರದು ಎಂದು ಹೇಳಿದರು.

ರಾಜ್ಯ ಸರ್ಕಾರ ವಿವಿಧ ಅಭಿವೃದ್ಧಿ ನಿಗಮಗಳ ಹಣ ಕಡಿತಗೊಳಿಸುವ ಮೂಲಕ ದಲಿತರ ಕಲ್ಯಾಣಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಗ್ಯಾರಂಟಿ ಹೆಸರಿನಲ್ಲಿ ಜನರನ್ನು ಯಾಮಾರಿಸುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ರಾಜ್ಯದ ಖಜಾನೆ ಖಾಲಿಯಾಗಿದೆ. ಈ ಮೂಲಕ ಜರನ್ನು ಭಿಕ್ಷುಕರನ್ನಾಗಿಸಿದೆ. ಕೆಳಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂತೆ ಸರ್ಕಾರ ವರ್ತಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರದ ಜನ ವಿರೋಧಿ ನಿಲುವಿನ ವಿರುದ್ಧ ಬೃಹತ್ ಜನಾಂದೋಲನ ನಡೆಸಲಾಗುತ್ತಿದೆ. ಬಜೆಟ್ ಮಂಡನೆ ವೇಳೆ ಗ್ಯಾರಂಟಿ ಯೋಜನೆಗೆ ಪ್ರತ್ಯೇಕವಾಗಿ ಹಣ ಮೀಸಲಿಡಿ. ಒಂದು ಕೈಲಿ ಕೊಟ್ಟು ಮತ್ತೊಂದು ಕೈಯಿಂದ ಕಿತ್ತುಕೊಳ್ಳುವ ಕೆಲಸ ಮಾಡಬೇಡಿ. ದೇಶದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯವಾಗಿರುವ ಕರ್ನಾಟಕವು ಎಸ್‌ಸಿ/ಎಸ್‌ಟಿಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಕಸಿದುಕೊಳ್ಳುವ ಬದಲು ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕು. ಗೃಹಲಕ್ಷ್ನೀ ಯೋಜನೆ ಹಣವನ್ನು ಸರ್ಕಾರ ಬಿಡುಗಡೆ ಮಾಡುತ್ತಿಲ್ಲ. ಚುನಾವಣೆಯ ಸಮಯದಲ್ಲಿ ಮಾತ್ರ ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡುತ್ತದೆ ಎಂದು ಕಿಡಿಕಾರಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ