LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮುಡಾ ಹಗರಣ ಖಂಡಿಸಿ ಬಿಜೆಪಿ ಪ್ರತಿಭಟನೆ: ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಬೆಂಗಳೂರು, ಜುಲೈ 12: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಖಂಡಿಸಿ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಕಮಲ ಪಾಳೆಯ ಕಿಡಿ ಕಾರಿದೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಟೀಕಿಸಿದೆ.

‘ಮುಡಾ ಹಗರಣ ಖಂಡಿಸಿ, ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಹಾಗೂ ಪಕ್ಷದ ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರನ್ನು ಬೆಂಗಳೂರಿನಲ್ಲೇ ರಣಹೇಡಿ ಕಾಂಗ್ರೆಸ್ ಸರ್ಕಾರ ಬಂಧಿಸಿದೆ. ಮಾತೆತ್ತಿದರೆ ಸಂವಿಧಾನ ರಕ್ಷಣೆ, ಅಭಿವ್ಯಕ್ತಿ ಸ್ವಾತಂತ್ರ್ಯವೆಂದು ಬಡಾಯಿಕೊಚ್ಚಿಕೊಳ್ಳುವ ಸಿಎಂ ಸಿದ್ದರಾಮಯ್ಯನವರು ತಮ್ಮ ಕುರ್ಚಿ ಉಳಿಸಿಕೊಳ್ಳಲು, ವಿಪಕ್ಷಗಳ ಹೋರಾಟ ಹತ್ತಿಕ್ಕುವ ಮೂಲಕ ಸರ್ವಾಧಿಕಾರಿ ನಡೆ ಪ್ರದರ್ಶನ ಮಾಡಿದ್ದಾರೆ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಮುಡಾ ಹಗರಣದಲ್ಲಿ ತಮ್ಮ ಪಾತ್ರವಿರುವುದನ್ನು ಒಪ್ಪಿಕೊಳ್ಳದ ಸಿಎಂ ಸಿದ್ದರಾಮಯ್ಯನವರು, ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ದೇಶದ ಜನರ ದಾರಿ ತಪ್ಪಿಸಲು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಕೈಯಲ್ಲಿ ಸಂವಿಧಾನ ಪ್ರತಿ ಪ್ರದರ್ಶನ ಮಾಡುತ್ತಾರೆ. ಶ್ರೇಷ್ಠ ಸಂವಿಧಾನವೇ ವಿಪಕ್ಷಗಳಿಗೆ ಅನ್ಯಾಯದ ವಿರುದ್ಧ ಪ್ರತಿಭಟಿಸುವ, ಹೋರಾಟ ನಡೆಸುವ ಸ್ವಾತಂತ್ರ್ಯ ನೀಡಿದೆ ಎಂಬ ಅರಿವಿಲ್ಲ ಎಂದು ಬಿಜೆಪಿ ಉಲ್ಲೇಖಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್