Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಚನ್ನಮ್ಮನ ಕಿತ್ತೂರ: ಇಲ್ಲಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪಕ್ಷದಿಂದ ಪೆಟ್ರೋಲ್ ಇಲ್ಲದದ್ವಿ ಚಕ್ರವಾಹನವನ್ನು ಹಗ್ಗ ಕಟ್ಟಿ ಎಳೆಯುವ ಮೂಲಕ ಪ್ರತಿಭಟನೆ ನಡೆಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಕಾರ್ಯಕರ್ತರು. ಚನ್ನಮ್ಮನ ಕಿತ್ತೂರ. ಪೆಟ್ರೋಲ್, ಡಿಜೆಲ್ ಬೆಲೆ ಏರಿಕೆ ಹಿನ್ನಲೆಯಲ್ಲಿ ಬಿಜೆಪಿ ಮಂಡಳ ವತಿಯಿಂದ ಕಿತ್ತೂರಿನ ರಾಷ್ಟ್ರೀಯ ಹೆದ್ದಾರೆ ಪಕ್ಕದ ಚನ್ನಮ್ಮಾಜಿಯ ವರ್ತುಳದಲ್ಲಿ ರಸ್ತೆ ತಡೆ ನಡೆಸಿ ರಾಜ್ಯ ಸರಕಾರದ ವಿರುದ್ದ ಘೋಷಣೆ ಕೂಗಿ ಗುರುವಾರ ಪ್ರತಿಭಟನೆ ನಡೆಸಿದರು.

ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೇಸ್‌ನ್ನು ಹಿನಾಯವಾಗಿ ಸೋಲಿಸಿದ್ದಕ್ಕಾಗಿ ಎಲ್ಲ ದರಗಳನ್ನು ಏರಿಕೆಗೊಳಸಿ ದ್ವೇಷದ ರಾಜಕಾರವನ್ನು ಮಾಡುತ್ತಿದ್ದಾರೆ. ಪ್ರತಿಯೊಬ್ಬರಿಂದ ತೆರಿಗೆಯನ್ನು ವಸೂಲಿ ಮಾಡುವ ಕ್ರಮ ಕೈಗೊಂಡಿದ್ದಾರೆ.

ಮುಖ್ಯ ಮಂತ್ರಿಗಳು ಇಂಧನ ಬೆಲೆ ಏರಿಕೆ ಮಾಡಿದ ರಾಜ್ಯಗಳನ್ನು ಹೋಲಿಕೆ ಮಾಡುವದನ್ನು ಬಿಟ್ಟು ಕಡಿಮೆ ಇದ್ದ ರಾಜ್ಯಗಳ ಹೋಲಿಕೆ ಮಾಡಿ ದರ ಕಡಿಮೆಗೊಳಿಸಬೇಕು ಹೀಗಾದರೆ ನೀವು ಜನರ ಶಾಪದಿಂದ ನಿಮ್ಮ ಕುರ್ಚಿಗಳನ್ನು ಬಿಟ್ಟು ಇಳಿಯಬೇಕಾಗುವದು ಎಂದು ಎಚ್ಚರಿಸಿದರು.

ಮಂಡಳ ಅದ್ಯಕ್ಷ ಬಸವರಾಜ ಪರವಣ್ಣವರ ಮಾತನಾಡಿ ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ಮರಳು ಮಾಡಿ ಸರಕಾರ ರಚಿಸಿ ಈಗ ದರಗಳನ್ನು ಏರಿಕೆ ಮಾಡಿ ಜನರನ್ನು ದಿವಾಳಿಯನ್ನಾಗಿ ಮಾಡುತ್ತಿದೆ. ಈಗಿನ ತಂತ್ರಜ್ಞಾನ ಯುಗದಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸಲು ಎಲ್ಲ ರೈತರು ಡಿಸೈಲ್, ಪೆಟ್ರೋಲ್ ಮೇಲೆ ಅವಲಂಬಿತರಾಗಿದ್ದಾರೆ ಹೀಗಿರುವಾಗ ದರ ಏರಿಕೆ ಮಾಡಿ ಸರಕಾರವು ರೈತರಿಗೆ ಅನ್ಯಾಯ ಮಾಡುತ್ತಿದೆ ತಕ್ಷಣ ದರಗಳನ್ನು ಕಡಿಮೆಗೊಳಿಸಬೇಕು ಇಲ್ಲದಿದ್ದರೆ ಬಿಜೆಪಿಯಿಂದ ನಿರಂತರ ಹೋರಾಟ ನಡೆಸಬೇಕಾಗುತ್ತದೆ ಎಂದರು.

ಬಿಜೆಪಿ ನಾಯಕಿ ಲಕ್ಷ್ಮೀ ಇನಾಮದಾರ ಮಾತನಾಡಿದರು. ಸಂದೀಪ ದೇಶಪಾಂಡೆ, ಎಸ್ ಆರ್ ಪಾಟೀಲ, ನಿಜಲಿಂಗಯ್ಯ  ಹಿರೇಮಠ, ಅರುಣಕುಮಾರ ಬಿಕ್ಕಣ್ಣವರ, ಸರಸ್ವತಿ ಹೈಬತ್ತಿ, ಉಮಾದೇವಿ ಬಿಕ್ಕಣ್ಣವರ, ರವೀರಾಜ ಇನಾಮದಾರ, ಯಲ್ಲಪ್ಪ  ವಕ್ಕುಂದ, ಫಕ್ಕೀರ ಜಾಂಗಟಿ, ಹರ್ಷಾ ಕರೀಕಟ್ಟಿ, ಬಸವರಾಜ
ಪುಟ್ಟಿ, ಕಿರಣ ಪಾಟೀಲ, ಶಿವಾನಂದ ಹನಮಸಾಗರ, ಶ್ಯಾಮ ಶಿಲೇದಾರ, ದಿನೇಶ ವಳಸಂಗ, ನಾಗೇಶ ಬೆಣ್ಣಿ, ಸೇರಿದಂತೆ ಇತರರು ಇದ್ದರು.

ಈ ವಾಹನದ ಮೇಲೆ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ಮಂಡಳ ಅಧ್ಯಕ್ಷ ಡಾ. ಬಸವರಾಜ ಪರವಣ್ಣವರ ಇವರನ್ನು ಈ ವಾಹನದ ಮೇಲೆ ಕೂಡ್ರಿಸಿ ಹಗ್ಗದಿಂದ ಎಳೆಯುವ ಮೂಲಕ ವಿನೂತನ ಪ್ರತಿಭಟನೆಯನ್ನು ನಡೆಸಿ ನಂತರ ಸರಕಾರದ ವಿರುದ್ದ  ಘೋಷಣೆಗಳನ್ನು ಕೂಗುತ್ತ ತಹಶೀಲ್ದಾರ
ಕಚೇರಿಗೆ ತೆರಳಿ ತಹಶೀಲ್ದಾರ ರವೀಂದ್ರ ಹಾದಿಮನಿ ಇವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ