Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ


ಬಳ್ಳಾರಿ, ಮೇ.29: ನಗರದ ಗಡಗಿ ಚೆನ್ನಪ್ಪ ವೃತ್ತದಲ್ಲಿ‌ ಇಂದು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ವಿರುದ್ಧ ಟೈರ್ ಗೆ ಬೆಂಕಿ‌ ಹಚ್ಚಿ, ಪ್ರತಿಕೃತಿ ದಹನ ಮಾಡಿ ಬೃಹತ್ ಪ್ರತಿಭಟನೆ ನಡೆಸಿದರು. ಸರ್ಕಾರದ ಪ್ರತಿಕೃತಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆಶಿ ಮತ್ತು ನಾಗೇಂದ್ರ ಪೋಟೋ ಧಹಿಸಿ, ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕೆಂದು ಬಾಯಿ ಬಡಿದು ಕೊಂಡ ಬಿಜೆಪಿ ಕಾರ್ಯಕರ್ತರು ಮಾನವ ಸರಪಳಿ ಮಾಡಿ. ರಾಜ್ಯದಲ್ಲಿನ ಭ್ರಷ್ಟಾಚಾರ ಅಡಳಿತವನ್ನು ಕೊನೆಗೊಳಿಸಬೇಕು ಎಂದರು.


ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಗೋಲ್ ಮಾಲ್. ನಿಗಮದಲ್ಲಿನ 187 ಕೋಟಿಯಲ್ಲಿನ 94 ಕೋಟಿ ಲೂಟಿ ಹೊಡೆದ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ಭಾಗಿಯಾಗಿದ್ದಾರೆಂದು ಆರೋಪಿಸಿ, ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.


ಭ್ರಷ್ಟಾಚಾರದ ವಹಿವಾಟಿನ‌ ಲೆಕ್ಕ ನೀಡಲಾಗದೇ ನಿಗಮದ ಲೆಕ್ಕಾಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಶೇಖರ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು.


ನಾಗೇಂದ್ರ ಅವರು ನನಗೂ ಅದಕ್ಕೂ ಸಂಬಂಧ ಇಲ್ಲ ಎನ್ನುವುದಾದರೆ ಈ   ಭ್ರಷ್ಟಾಚಾರದಲ್ಲಿ ಲೂಟಿ ಹೊಡೆದವರಾರು ಎಂದು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಪ್ರಶ್ನಿಸಿದರು.


ಪರಿಷತ್ ಸದಸ್ಯ ರವಿ ಕುಮಾರ, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ‌ಮುಖಂಡರಾದ ಡಾ.ಮಹಿಪಾಲ್, ಕೆ.ಎ.ರಾಮಲಿಂಗಪ್ಪ, ಗುರುಲಿಂಗನಗೌಡ, ವೀರಶೇಖರ ರೆಡ್ಡಿ, ಶ್ರೀನಿವಾಸ ಮೋತ್ಕರ್, ಇಬ್ರಾಹಿಂ ಬಾಬು,  ಗುತ್ತಿಗನೂರು ವಿರೂಪಾಕ್ಷಗೌಡ ಮೊದಲಾದವರ ನೇತೃತ್ವದಲ್ಲಿ ಪ್ರತಿಭಟನೆ ನಗರದ  ದುರ್ಗಮ್ಮ ದೇಗುಲದಿಂದ ಆರಂಭಗೊಂಡು ಗಡಗಿ ಚೆನ್ನಪ್ಪ  ವೃತ್ತದ ವರೆಗೂ  ಪ್ರತಿಭಟನಾ ಮೆರವಣಿಗೆ ಆಗಮಿಸಿ ನಂತರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ದೂರು ನೀಡಲಾಯ್ತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ