ಇನ್ನು ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಂಡಿದ್ದ ಪೊಲೀಸರು, ಪ್ರತಿಭಟನಾಕಾರನ್ನು ತಡೆದರು. ಈ ವೇಳೆ ತಳ್ಳಾಟ, ನೂಕಾಟವೂ ನಡೆಯಿತು.
ಎರಡು ದಿನ ಹಿಂದಷ್ಟೇ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಪ್ರತಿಭಟನೆ ಮಾಡಲಿ. ಒಳ್ಳೆ ರೀತಿಯಲ್ಲಿ ಆತಿಥ್ಯ ಕೊಡುತ್ತೇನೆ ಎಂದಿದ್ದರು. ಇದೀಗ ಅದರಂತೆಯೇ ಮುತ್ತಿಗೆ ಹಾಕಲು ಬಂದ ಬಿಜೆಪಿ ನಾಯಕರಿಗೆ ಎಳನೀರು, ಕಾಫಿ, ಟೀ ವ್ಯವಸ್ಥೆ ಮಾಡಲಾಗಿದ್ದು ಗಮನ ಸೆಳೆಯಿತು.
ಕಲಬುರಗಿಯಲ್ಲಿ ಪ್ರಿಯಾಂಕ್ ವಿರುದ್ಧ ಪ್ರತಿಭಟನೆ ನಡೆದರೆ, ಮಂಡ್ಯದಲ್ಲಿ ಪರವಾಗಿ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಿಟಿ.ರವಿ ಫೋಟೋಗೆ ಮಸಿ ಬಳಿದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.
ಪ್ರತಿಭಟನೆಯಲ್ಲಿ ಭಾಗಿ ಆಗುವಂತೆ ಸಂತ್ರಸ್ತರ ಕುಟುಂಬಸ್ಥರಿಗೆ ಬಿಜೆಪಿ ಒತ್ತಡ ಹಾಕಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ. ತಮ್ಮ ವಿರುದ್ಧವಾಗಿ ಹೇಳಿಕೆ ಕೊಡುವಂತೆಯೂ ಬಿಜೆಪಿಯವರು ಒತ್ತಡ ಹೇರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.