Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಗೇಂದ್ರ ರಾಜೀನಾಮೆ ಒತ್ತಾಯಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಗದಗ- ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಹಾಗು ಎಸ್.ಟಿ. ಮೋರ್ಚಾ ವತಿಯಿಂದ ಕರ್ನಾಟಕ ಕಾಂಗ್ರೇಸ್ ನೇತೃತ್ವದ
ಸರ್ಕಾರದಲ್ಲಿ ವಾಲ್ಮೀಕಿ ನಿಗಮ ಮಂಡಳಿಯಲ್ಲಿ ಬಹು ಕೋಟಿ ಭ್ರಮಾಂಡ್ ಭ್ರಷ್ಟಾಚಾರ ನಡೆದಿರುತ್ತದೆ. ಇವತ್ತಿನ ವರೆಗೂ ಕಾಂಗ್ರೇಸ್ ಸರ್ಕಾರದ ಮುಖ್ಯಮಂತ್ರಿಗಳು, ಉಪ  ಮುಖ್ಯಮಂತ್ರಿಗಳು, ಗೃಹ ಸಚಿವರು, ಕಾನೂನು ಸಚಿವರು ತಮ್ಮ ಸರ್ಕಾರದ ಸಚಿವರಾದ ನಾಗೇಂದ್ರ ರವರನ್ನು ರಾಜೀನಾಮೆ ಪಡೆಯುವದನ್ನು ಬಿಟ್ಟು ತನಿಖೆ ಆಧಾರಿಸಿ ರಾಜೀನಾಮೆಯನ್ನು ಪಡೆಯುತ್ತೇವೆ ಎಂದು ಕಾಲಹರಣ
ಮಾಡುತ್ತಿದ್ದಾರೆ. ರಾಜ್ಯದ ಹಿತದೃಷ್ಟಿಯಿಂದ ಭ್ರಷ್ಟಾಚಾರದಲ್ಲಿ ಭಾಗಿಯಾದ ನಾಗೇಂದ್ರ ರರನ್ನು ಕೂಡಲೇ ರಾಜೀನಾಮೆ ಪಡೆದು ಸಿಬಿಐ ತನಿಖೆಗೆ ಒಪ್ಪಿಗೆ ಸೂಚಿಸಬೇಕು ಮತ್ತು ಈ ಹಗರಣವನ್ನು ಬಯಲಿಗೆಳೆದು ಪ್ರಾಣವನ್ನು ಬಿಟ್ಟಿರುವ ಚಂದ್ರಶೇಖರ್ ರವರ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವನ್ನು ಕೂಡಲೇ ಮಾಡಬೇಕು.

ಗದಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಹಳೆಯ ಡಿ.ಸಿ.ಕಚೇರಿ ಸರ್ಕಲ್‌ನಲ್ಲಿ ಬೃಹತ್ ಪ್ರತಿಭಟನೆ ಸರ್ಕಾರದ
ವಿರುದ್ಧ ಸಚಿವರ ರಾಜೀನಾಮೆಯನ್ನು ಒತ್ತಾಯಿಸಿ ರಸ್ತೆ ತಡೆಯನ್ನು ಮಾಡಿದರು. ಹಾಗು ಇದು ಸಾಂಕೇತಿಕ ಬಂದ್ ಮುಂದೆ ರಾಜೀನಾಮೆ ಪಡೆಯದಿದ್ದರೆ ಪ್ರತಿ ತಾಲೂಕ ಕೇಂದ್ರ ಗಳಲ್ಲಿ ಕೂಡಾ ರಾಜೀನಾಮೆ ಕೊಡುವವರೆಗೂ ಉಗ್ರ ಪ್ರತೀಭಟಿಸುತ್ತೇವೆ ಎಂದು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ ಅಕ್ಕಿ ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ ರವರು ಮಾತನಾಡಿ ಕರ್ನಾಟಕದ ಕಾಂಗ್ರೇಸ್ ಸರ್ಕಾರ ಭ್ರಷ್ಟರಿಗೆ
ಮಣೆಯನ್ನು ಹಾಕುತ್ತಿದೆ, ಭ್ರಷ್ಟರನ್ನ ರಕ್ಷಿಸುತ್ತಿದೆ. ರಾಜ್ಯದ ಮುಖ್ಯಮಂತ್ರಿ ಮಾತ್ ಮಾತಿಗೂ ನುಡಿದಂತೆ ನಡೆಯುವ ಸರ್ಕಾರ ಎಂದು ಘೋಷಣೆ ಹಾಕುತ್ತಾರೆ. ಆದರೆ  ಭ್ರಷ್ಟ ಕಾಂಗ್ರೇಸ್ ಸರ್ಕಾರವು ಅಧಿಕಾರ ವಹಿಸಿಕೊಂಡು ಒಂದು ವರ್ಷದಿಂದಲು ಕೊಲೆ, ಸುಲಿಗೆ, ಭ್ರಷ್ಟಾಚಾರ ಇವೆಲ್ಲವುಗಳನ್ನು ಹತೋಟೆಗೆ ತರಲು ಸಾಧ್ಯವಾಗಿಲ್ಲಾ ಎಂದರು.

ಬಿಜೆಪಿ ಜಿಲ್ಲಾ ಎಸ್.ಟಿ.ಮೋರ್ಚಾ ವತಿಯಿಂದ ಗದಗ ಜಿಲ್ಲಾಧಿಕಾರಗಳ ಮುಖಾಂತರ ರಾಜ್ಯಪಾಲರಿಗೆ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರದ ಮುಖ್ಯ ಪಾತ್ರವನ್ನು ವಹಿಸಿರುವ ಸಚಿವರು ಹಾಗು ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೂ ಶಿಕ್ಷೆ ಆಗಬೇಕು ಮತ್ತು  ದುರಪಯೋಗವಾದ ಹಣವನ್ನು ಪುನಃ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಜಮೆ ಮಾ ಡಬೇಕು. ಮಾಡದೇ ಇದ್ದಲ್ಲಿ ಕರ್ನಾಟಕ
ಕಾಂಗ್ರೇಸ್ ಸರ್ಕಾರದ ಮುಖ್ಯಮಂತ್ರಿ ಹಾಗು ಎಲ್ಲ ಸಚಿವರ ವಿರುದ್ಧ ಬರುವ ದಿನಮಾನದಲ್ಲಿ ಉಗ್ರವಾದ ಪ್ರತೀಭಟನೆಯನ್ನು ಬಿಜೆಪಿ ಎಸ್.ಟಿ ಮೋರ್ಚಾ ವತಿಯಿಂದ ರಾಜ್ಯವ್ಯಾಪಿ ಪ್ರತೀಭಟಿಸಲಾಗುವದು ಎಂದು ಎಸ್.ಟಿ.ಮೋರ್ಚಾ ಗದಗ ಜಿಲ್ಲಾಧ್ಯಕ್ಷರಾದ ಈಶ್ವರಪ್ಪ ರಂಗಪ್ಪನವರ ಹೇಳಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಪ್ರಮುಖರಾದ ಎಂ.ಎಸ್.ಕರೀಗೌಡ್ರ, ನಗರ ಅಧ್ಯಕ್ಷರಾದ ಅನೀಲ ಅಬ್ಬಿಗೆರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲಿಂಗರಾಜ ಪಾಟೀಲ, ಜಗನ್ನಾಥಸಾ ಭಾಂಡಗೆ, ಅಶೋಕ ಸಂಕಣ್ಣವರ, ಅಶೋಕ ನವಲಗುಂದ, ಅಶೋಕ ಕುಡತಿನಿ, ಸುಧೀರ ಕಾಟಿಗರ, ಗಂಗಾಧರ ಹಬೀಬ, ಶಕ್ತಿ ಕತ್ತಿ, ರಾಗು ಪರಾಪೂರ, ಶಶಿಧರ ದಿಂಡೂರ, ನಾಗರಾಜ ಕುಲಕರ್ಣಿ,
ಸುರೇಶ ಚಿತ್ತರಗಿ, ಸುರೇಶ ಮರಳಪ್ಪನವರ, ವಾಯ್.ಪಿ.ಅಡ್ನೂರ, ಯಲ್ಲಪ್ಪ ಶಿರಿ, ಪ್ರಶಾಂತ ನಾಯ್ಕರ, ನಾಗರಾಜ ತ ಳವಾರ, ವಿಜಯಲಕ್ಷ್ಮೀ ಮಾನ್ವಿ, ಕಮಲಾಕ್ಷೀ ಅಂಗಡಿ, ಯೋಗೇಶ್ವರಿ ಭಾವಿಕಟ್ಟಿ, ಮಾಸರಡ್ಡಿ, ಅಪ್ಪಣ್ಣ ಟೆಂಗಿನಕಾಯಿ, ಮಂಜುನಾಥ ತಳವಾರ, ಲಕ್ಷ್ಮಣ ವಾಲ್ಮೀಕಿ ವಿಶ್ವನಾಥ ಶಿರಿಗಣ್ಣವರ, ಅರವಿಂದ ಅಣ್ಣಿಗೇರಿ, ಅಶೋಕ ಕರೂರ, ಮುತ್ತಣ್ಣ ಮೂಲಿಮನಿ, ರಮೇಶ ಸಜ್ಜಗಾರ, ಪ್ರಕಾಶ
ಕೊತಂಬರಿ, ನವೀನ ಕೊಟೆಕಲ್, ವೆಂಟಕೇಶ ಹಬೀಬ, ರಾಹುಲ ಸಂಕಣ್ಣವರ, ಮಂಜುನಾಥ ಶಾಂತಗೇರಿ, ವಿನೋದ ಹಂಸನೂರ
ಹಾಗು ಬಿಜೆಪಿ ಜಿಲ್ಲೆಯ ಯುವ ಮೋರ್ಚಾ ಹಾಗು ಎಸ್.ಟಿ.ಮೋರ್ಚಾದ ಸರ್ವ ಪದಾಧಿಕಾರಿಗಳು, ಪ್ರಮುಖರುಗಳು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ