LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫಲ ನೀಡುವುದಿಲ್ಲ: ಸಿ.ಎಂ ಸ್ಪಷ್ಟ ನುಡಿ

ದೆಹಲಿ ಜು 30: ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫಲ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ದೆಹಲಿಯಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ‌ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.

ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರ ಇಲ್ಲ. ಹಣಕಾಸು ಇಲಾಖೆಯ ಪಾತ್ರ ಕೂಡ ಇಲ್ಲ . ಮುಡಾ ವಿಚಾರದಲ್ಲೂ ಕಾನೂನುಬಾಹಿರವಾಗಿ ಏನೂ ನಡೆದಿಲ್ಲ. ಎಲ್ಲವೂ ಕಾನೂನುಬದ್ದವಾಗಿ, ನಿಯಮಗಳ ಪ್ರಕಾರವೇ ನಡೆದಿದೆ ಎನ್ನುವುದನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಸಿದ್ದೇವೆ.

ಪರಿಶಿಷ್ಠ ಪಂಗಡಕ್ಕೆ ಸೇರಿದ ಹಣ ದುರುಪಯೋಗ ಆಗಿಲ್ಲ. ವಾಲ್ಮೀಕಿ ಹಗರಣದಲ್ಲಿ ಹಣ ವಶಪಡಿಸಿಕೊಳ್ಳಲಾಗುತ್ತಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎನ್ನುವುದನ್ನೂ ಅರ್ಥ ಮಾಡಿಸಿದ್ದೇವೆ.

ಬಿಜೆಪಿಯ ಸೇಡಿನ ಮತ್ತು ಅಸೂಯೆಯ ರಾಜಕಾರಣ ಹೈಕಮಾಂಡ್ ಅವರಿಗೂ ಮನವರಿಕೆಯಾಗಿದೆ. ಬಿಜೆಪಿಯ ಪಾದಯಾತ್ರೆಗೆ ಪ್ರತಿಯಾಗಿ ಏನು ಮಾಡಬೇಕು ಎನ್ನುವುದನ್ನು ಬೆಂಗಳೂರಿಗೆ ತೆರಳಿದ ಬಳಿಕ KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಬಜೆಟ್ ಪೂರ್ವ ಸಭೆಯಲ್ಲಿ ರಾಜ್ಯದಿಂದ ಇಟ್ಟಿದ್ದ ಯಾವ ಬೇಡಿಕೆಗಳನ್ನೂ ಈಡೇರಿಸಲಾಗಿಲ್ಲ. ಹೀಗಾಗಿ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎನ್ನುವ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು ಎಂದರು.

ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದು ಬಿಜೆಪಿಯ ಹುನ್ನಾರ. ಆದರೆ ಇದರಲ್ಲಿ ಅವರಿಗೆ ಯಶಸ್ಸು ಸಿಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್