Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಬಿಜೆಪಿಯದು ಒಡೆದು ಆಳುವ ರಾಜಕಾರಣ: ಮೋದಿ ಮುಸ್ಲಿಂ ಲೀಗ್‌ ಹೇಳಿಕೆಗೆ ಕಾಂಗ್ರೆಸ್ ಟಾಂಗ್




ನವದೆಹಲಿ,ಏ.06: ಪಕ್ಷದ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಮುದ್ರೆ ಇದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಕಾಂಗ್ರೆಸ್ ಶನಿವಾರ ತಿರುಗೇಟು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚರಿತ್ರೆಯ ಅರಿವು ಇಲ್ಲ. ಏಕೆಂದರೆ 1940ರ ದಶಕದ ಆರಂಭದಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರೇ ಬಂಗಾಳದಲ್ಲಿ ಮುಸ್ಲಿಂ ಲೀಗ್ ಜೊತೆ ಸಮ್ಮಿಶ್ರ ಸರ್ಕಾರದ ಭಾಗವಾಗಿದ್ದರು. ಬಿಜೆಪಿಯು "ಒಡೆದು ಆಳುವ ರಾಜಕಾರಣ" ಮಾಡುತ್ತಿದೆ ಎಂದು ಆರೋಪಿಸಿದೆ.




ಸಹರಾನ್‌ಪುರದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಮುದ್ರೆ ಇದೆ, ಆದರೆ ಅದರಲ್ಲಿ ಎಡಪಂಥೀಯರ ಪ್ರಾಬಲ್ಯವಿದೆ ಎಂದು ಹೇಳಿದ್ದರು.

ಪ್ರಧಾನಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, "ಪ್ರಧಾನಿ ಅವರಿಗೆ ಅವರ ಇತಿಹಾಸ ತಿಳಿದಿಲ್ಲ, ವಾಸ್ತವವಾಗಿ, ಆಗ ಹಿಂದೂ ಮಹಾಸಭಾದ ಅಧ್ಯಕ್ಷರಾಗಿದ್ದವರು ಮುಖರ್ಜಿಯ ಹೊರತು ಬೇರೆ ಯಾರೂ ಅಲ್ಲ, ಅವರು ಸ್ವತಃ ಬಂಗಾಳದಲ್ಲಿ ಮುಸ್ಲಿಂ ಲೀಗ್‌ ಜೊತೆಗಿನ ಸಮ್ಮಿಶ್ರ ಸರ್ಕಾರದ ಭಾಗವಾಗಿದ್ದರು. ಸಿಂಧ್ ಹಾಗೂ ವಾಯುವ್ಯ ಪ್ರದೇಶದಲ್ಲೂ ಮುಸ್ಲಿಂ ಲೀಗ್ ಜೊತೆಗೆ ಹಿಂದೂ ಮಹಾಸಭಾ ಹೊಂದಾಣಿಕೆ ಮಾಡಿಕೊಂಡಿತ್ತು ಎಂದು ತಿರುಗೇಟು ನೀಡಿದರು. ಒಡೆದು ಆಳುವ ರಾಜಕಾರಣದಲ್ಲಿ ನಂಬಿಕೆ ಮತ್ತು ಆಚರಣೆ ಮಾಡುತ್ತಿರುವುದು ಬಿಜೆಪಿಯೇ ಹೊರತು ಕಾಂಗ್ರೆಸ್ ಅಲ್ಲ ಎಂದು ರಮೇಶ್ ಹೇಳಿದ್ದಾರೆ.








ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಅವರ ಸಮ್ಮುಖದಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿತ್ತು. ಪ್ರಣಾಳಿಕೆಗೆ ನ್ಯಾಯ ಪತ್ರ ಎಂದು ಹೆಸರಿಟ್ಟಿರುವ ಕಾಂಗ್ರೆಸ್, 25 ಗ್ಯಾರಂಟಿಗಳನ್ನು ಘೋಷಿಸಿದೆ.

 












Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ