ಸೋಮಣ್ಣ ಮನೆ ಪೂಜೆಗೆ ಹೋಗುತ್ತಿದ್ದೇವೆ ಎಂದು ಎರಡೂ ಬಣದ ನಾಯಕರು ಹೇಳಿದ್ದರೆ, ಅತ್ತ ‘ನಾನು ಯಾರನ್ನೂ ಕರೆದಿಲ್ಲ’ ಎಂದು ಸೋಮಣ್ಣ ಖಡಾಖಂಡಿತವಾಗಿ ಹೇಳಿದ್ದಾರೆ. ಹೀಗಾಗಿ, ಹೈಕಮಾಂಡ್ ಭೇಟಿಗೆ ಇಬ್ಬರೂ ಮುಂದಾಗಿದ್ದಾರಾ ಎಂಬ ಅನುಮಾನ ಸಹಜವಾಗಿ ಮೂಡಿದೆ. ದಾವಣಗೆರೆ ಪ್ರವಾಸಕ್ಕೆ ಹೋಗುತ್ತಿದ್ದ ವಿಜಯೇಂದ್ರಗೆ ಹೈಕಮಾಂಡ್ನಿಂದ ಬುಲಾವ್ ಬಂದಿದೆ. ಹೀಗಾಗಿ ದಾವಣಗೆರೆ ಪ್ರವಾಸ ರದ್ದು ಮಾಡಿದ ದೆಹಲಿ ವಿಮಾನ ಹತ್ತಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಯತ್ನಾಳ್ ಬಣದ ಮೀಟಿಂಗ್: ಯತ್ನಾಳ್ ಬಣ ದೆಹಲಿಯಿಂದ ವಾಪಸ್ ಆಗಿ ವಾರವೂ ಆಗಿಲ್ಲ. ದಾವಣಗೆರೆಯ ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಗೆಸ್ಟ್ ಹೌಸ್ನಲ್ಲಿ ಯತ್ನಾಳ್ ಬಣದ ನಾಯಕರು ಭಾನುವಾರ ಸಭೆ ಸೇರಿದ್ದಾರೆ. ಮುಂದಿನ ಹೋರಾಟಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಂಸದ ಬಸವರಾಜ್ ಬೊಮ್ಮಾಯಿ ಜೊತೆಗೆ ವಾಲ್ಮೀಕಿ ಜಾತ್ರೆಯ ವೇದಿಕೆ ಹಂಚಿಕೊಂಡಿದ್ದಾರೆ. ಬೊಮ್ಮಾಯಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ತಟಸ್ಥ ಬಣವೂ ಪರಿವರ್ತನೆಯಾಗಿದೆ ಎಂದಿದ್ದಾರೆ.