Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆನ್ಸಾರ್ ಪಾಸಾದ ಬ್ಲಡಿ ಬಾಬು ಇದೇ ತಿಂಗಳು ತೆರೆಗೆ 







    ಕೆಟ್ಟದ್ದು ಒಳ್ಳೇದರ ನಡುವಿನ ಹೋರಾಟದಲ್ಲಿ ಒಳ್ಳೆಯದಕ್ಕೆ ಯಾವಾಗಲೂ ಜಯ ಸಿಕ್ಕೇ ಸಿಗುತ್ತದೆ. ಇಂಥ ಕಥೆಗಳನ್ನು ಬೆಳ್ಳಿತೆರೆಮೇಲೆ ಸಾಕಷ್ಟು ನೋಡಿದ್ದೇವೆ. ಸದ್ಯದಲ್ಲೇ ತೆರೆಗೆ ಬರಲು ಸಿದ್ದವಾಗಿರುವ 'ಬ್ಲಡಿ ಬಾಬು' ಕೂಡ ದುಷ್ಟಶಕ್ತಿ ಹಾಗೂ ಆತ್ಮಶಕ್ತಿಯ ನಡುವಿನ ಸಮರದ ಸುತ್ತ ನಡೆಯುವ ಕಥಾಹಂದರದ್ದಾಗಿದೆ.

      ಹಿಂದಿನ ಕಾಲದ ಮಾಟ, ಮಂತ್ರ  ಇಲ್ಲದೆ ಆಧುನಿಕ‌ ಶೈಲಿಯ  ಹಿಪ್ನಟೈಸ್ ಪ್ರಭಾವ  ಇಟ್ಟುಕೊಂಡು 'ಬ್ಲಡಿ ಬಾಬು' ಚಿತ್ರವನ್ನು ನಿರ್ದೇಶಕ ರಾಜೇಶ್ ಮೂರ್ತಿ ಅವರು ನಿರೂಪಿಸಿದ್ದಾರೆ. ದುಷ್ಟನ ಕೈವಶದಲ್ಲಿದ್ದ ನಾಯಕಿಯನ್ನು ನಾಯಕ ತನ್ನ ವಿಲ್ ಪವರ್ ನಿಂದ ಎದುರಿಸಿ ಹೇಗೆ ಬಿಡಿಸಿಕೊಂಡು ಬರುತ್ತಾನೆ ಎನ್ನುವುದೇ ಈ ಚಿತ್ರದ ಪ್ರಮುಖ ಎಳೆ.

     ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡಿದೆ. ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು ಇದೇ ತಿಂಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ಸಿದ್ದತೆ ನಡೆಸಿದೆ‌.

     ಪ್ರಾರಂಭದಿಂದಲೂ  ವಿಭಿನ್ನ ಶೈಲಿಯ ಚಿತ್ರಗಳನ್ನು ನಿರ್ದೇಶಿಸುತ್ತಾ ಬಂದಿರುವ ರಾಜೇಶ್ ಮೂರ್ತಿ ಅವರು  ಮತ್ತೊಂದು ಥ್ರಿಲ್ಲರ್ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. 'ಬ್ಲಡಿಬಾಬು'  ಮಗನಿಗೆ ತಂದೆಯೇ ಆಕ್ಷನ್ ಕಟ್ ಹೇಳಿರೋ ಚಿತ್ರವೂ ಆಗಿದೆ. ಈ ಮೂಲಕ  ಯಶಸ್ವಾ ಎರಡನೇ ಬಾರಿಗೆ ನಾಯಕನಾಗಿ ತೆರೆಮೇಲೆ ಬರುತ್ತಿದ್ದಾರೆ.

     ರಾಜೇಶ್ ಮೂರ್ತಿ ಅವರೇ  ಕಥೆ ಚಿತ್ರಕಥೆ ಬರೆದು  ನಿರ್ದೇಶಿಸಿರೋ ಈ ಚಿತ್ರವನ್ನು   ಏಂಜಲ್ ಡ್ರೀಮ್ಸ್ ಎಂಟರ್ ಟೈನ್ ಮೆಂಟ್ಸ್ ಮೂಲಕ ಡೋಮ್ನಿಕ್ ಅವರು ನಿರ್ಮಿಸಿದ್ದಾರೆ.

     ಸೈಕಲಾಜಿಕಲ್, ಆಕ್ಷನ್ ಥ್ರಿಲ್ಲರ್  ಕಥಾಹಂದರ ಹೊಂದಿರುವ 'ಬ್ಲಡಿ ಬಾಬು' ಚಿತ್ರಕ್ಕೆ  ಬೆಂಗಳೂರು, ನಂದಿ ಹಿಲ್ಸ್ ಹಾಗೂ ಚಿಕ್ಕಮಗಳೂರು ಸುತ್ತಮುತ್ತ 25ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಿಸಲಾಗಿದೆ. ನವನಟಿ  ಸ್ಮಿತಾ ಈ ಚಿತ್ರದ ನಾಯಕಿಯಾಗಿದ್ದು,  ಬಾಲಿವುಡ್ ಖಳನಟ ದಿಲೀಪ್ ಕುಮಾರ್ ಈ ಚಿತ್ರದ ವಿಲನ್  ಪಾತ್ರ ನಿರ್ವಹಿಸಿದ್ದಾರೆ. ನಟ, ರಾಜಕಾರಣಿ ನೆ.ಲ.ನರೇಂದ್ರ ಬಾಬು ಅವರು  ನಾಯಕಿಯ ತಂದೆಯಾಗಿ ಕಾಣಿಸಿಕೊಂಡಿದ್ದಾರೆ.

      ಈ ಹಿಂದೆ ಲಿಪ್ ಸ್ಟಿಕ್ ಮರ್ಡರ್, ಜೋಕರ್ ಜೋಕರ್, ಸೈಕೋಮ್ಯಾಕ್ಸ್ ನಂಥ ಕ್ರೈಂ, ಥ್ರಿಲ್ಲರ್ ಚಿತ್ರಗಳನ್ನೇ ಮಾಡಿಕೊಂಡು ಬಂದಿದ್ದ  ರಾಜೇಶ್ ಮೂರ್ತಿ ಅವರು ಮತ್ತೊಮ್ಮೆ ಆಕ್ಷನ್ ಥ್ರಿಲ್ಲರ್ ಚಿತ್ರಕ್ಕೆ ಕೈ ಹಾಕಿದ್ದಾರೆ.  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿ ಸಂಕಲನದ ಕೆಲಸವನ್ನೂ ನಿರ್ವಹಿಸಿದ್ದಾರೆ. ವಿಭಿನ್ನ ಶೈಲಿಯ 4 ಸಾಹಸ‌ ದೃಶ್ಯಗಳು ಚಿತ್ರದಲ್ಲಿದೆ. ಜೊತೆಗೆ ಈ ಚಿತ್ರದಲ್ಲಿ 3 ಹಾಡುಗಳಿದ್ದು ನಿತೀಶ್ ಕುಮಾರ್  ಸಂಗೀತ ಸಂಯೋಜನೆ ಮಾಡಿದ್ದಾರೆ. ವಿನೋದ್ ಆರ್.  ಛಾಯಾಗ್ರಹಣ  ನಿರ್ವಹಿಸಿದ್ದಾರೆ.


















Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ