Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುರುಪೌರ್ಣಿಮೆ ಷಟಸ್ಥಲ ಪ್ರಭೋದಕ, ಬ್ರಹ್ಮಶ್ರೀ ಪ್ರಶಸ್ತಿ ಪ್ರದಾನ







ರಾಯಬಾಗ : ಪಟ್ಟಣದ ಹುಕ್ಕೇರಿ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶಾಖಾ ಮಠದಲ್ಲಿ ಗುರುಪೌರ್ಣಿಮೆಯ ನಿಮಿತ್ಯ ಇಂದು ಶ್ರೀಮಠದಲ್ಲಿ ವಿಶೇಷ ಕಾರ್ಯಕ್ರಮಗಳು ಜರುಗಿದವು.





ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳವರ ಪಾದಪೂಜೆಯನ್ನು ಅರುಣ ಐಹೊಳೆ ದಂಪತಿಗಳು ನೆರವೇರಿಸಿ ಗುರು ಗೌರವ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಇಲಕಲ್ ನ ಶ್ರೀ ಅನ್ನದಾನೇಶ್ವರ ಶಿವಲಿಂಗ ಶಾಸ್ತ್ರಿಗಳಿಗೆ "ಷಟಸ್ಥಲ ಪ್ರಭೋದಕ" ಪ್ರಶಸ್ತಿಯನ್ನು ಕಪರಟ್ಟಿ-ಕಳ್ಳಿಗುದ್ದಿ ಹಿರೇಮಠದ ಶ್ರೀ ಬಸವರಾಜ ಸ್ವಾಮಿಗಳಿಗೆ "ಬ್ರಹ್ಮಶ್ರೀ" ಪ್ರಶಸ್ತಿ ಪ್ರದಾನ ಮಾಡಲಾಯಿತು.


ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಸಕರಾದ ಶ್ರೀ ಡಿ ಎಂ ಐಹೋಳೆ, ಹುಕ್ಕೇರಿ ಹಿರೇಮಠ ಎಂದರೆ ಇಡೀ ದೇಶದ ತುಂಬಾ ಹೆಸರು ಮಾಡಿದೆ. ನಮ್ಮೂರಲ್ಲಿಯೂ ಕೂಡ ಹುಕ್ಕೇರಿ ಹಿರೇಮಠದ ಶಾಖೆ ಇದೆ ಎನ್ನುವುದೇ ನಮಗೆ ಹೆಮ್ಮೆ. ಇಲ್ಲಿ ಎಲ್ಲರನ್ನೂ ಕೂಡ ಸಮದೃಷ್ಟಿಯಿಂದ ನೋಡುವ ಅಪರೂಪದ ಗುರುಗಳು ನಮಗೆ ಸಿಕ್ಕಿದ್ದಾರೆ. ಗುರುಪೌರ್ಣಿಮೆ ಎಂದರೆ ಗುರುವನ್ನು ಗೌರವಿಸಿ ಗುರುವಿನ ಆಶೀರ್ವಾದವನ್ನು ಪಡೆಯುವುದು ಎಂದರ್ಥ.


ಷಟಸ್ಥಲ ಪ್ರಭೋದಕ  ಪ್ರಶಸ್ತಿಯನ್ನು ಪಡೆದ ಶ್ರೀ ಅನ್ನದಾನೇಶ್ವರ ಶಿವಲಿಂಗ ಶಾಸ್ತ್ರಿಗಳು ಮಾತನಾಡಿ, ಶ್ರೀಮಠದಿಂದ ನಮಗೆ ಷಟಸ್ಥಲ ಪ್ರಭೋದಕ ಪ್ರಶಸ್ತಿಯನ್ನು ಗುರುಗಳು ಅನುಗ್ರಹಿಸಿದ್ದಾರೆ. ನಾವು ಪ್ರಶಸ್ತಿಯನ್ನು ಪಡೆದುಕೊಳ್ಳುವುದು ಅಷ್ಟೇ ಅಲ್ಲ, ಅದನ್ನು ಅರಿತು ಆಚರಿಸಿ ಷಟಸ್ಥಲಗಳ ತತ್ವವನ್ನು ಬದುಕಿನಲ್ಲಿ ರೂಢಿಸಿಕೊಳ್ಳುವ ಅವಶ್ಯಕತೆ ಇದೆ. ನಾನು ಖಂಡಿತ ಮಾಡುತ್ತೇನೆ ಎಂದರು.


ಬ್ರಹ್ಮಶ್ರೀ ಪ್ರಶಸ್ತಿಯನ್ನು ಪಡೆದ ಕಪರಟ್ಟಿ-ಕಳ್ಳಿಗುದ್ದಿ ಹಿರೇಮಠದ ಶ್ರೀ ಬಸವರಾಜ್ ಸ್ವಾಮಿಗಳು ಮಾತನಾಡಿ, ಬ್ರಹ್ಮಶ್ರೀ ಪ್ರಶಸ್ತಿಯನ್ನು ಅನುಗ್ರಹಿಸಿದ್ದಾರೆ. ಅದರಂತೆ ನಾವು ನಡೆದುಕೊಂಡು ಸಮಾಜಕ್ಕೆ ಮಾರ್ಗದರ್ಶನ ಮಾಡುತ್ತೇವೆ ಎಂದರು.


ಸಾನಿಧ್ಯ ವಹಿಸಿ ಮಾತನಾಡಿದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರು ಗುರುಪೌರ್ಣಿಮೆ ಎಂದರೆ ಬೇರೆ ಬೇರೆ ಕಡೆಗೆ ಹೋಗಿ ಬರುವುದಷ್ಟೇ ಅಲ್ಲ, ನಮ್ಮಲ್ಲಿರುವ ಮಠಗಳಲ್ಲಿ ಕೂಡ ಹೋಗಿ ಗುರುಗಳನ್ನು ಗೌರವಿಸಬೇಕು ಎಂದರು.


ಹುಕ್ಕೇರಿ ಹಿರೇಮಠದ ಗುರುಕುಲದ ಮುಖ್ಯಸ್ಥ ಸಂಪತ್ ಕುಮಾರ ಶಾಸ್ತ್ರೀ ಗಳು ವೇದಘೋಷ ಮಾಡಿದರು. ರಾಯಭಾಗ ಹಿರೇಮಠದ ಪ್ರದಾನ ಅರ್ಚಕ ನಿಂಗಯ್ಯ ಸ್ವಾಮಿ ಸ್ವಾಗತಿಸಿದರು. ಇದೆ ಸಂದರ್ಭದಲ್ಲಿ ನಿಶಾಂತ ಸ್ವಾಮಿ, ಉದಯಕುಮಾರ್ ಶಾಸ್ತ್ರೀಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಪೂಜೇರಿ ಸರ್ ನಿರೂಪಿಸಿದರು.  ಸದಾಶಿವ ಘೋರ್ಪಡೆ, ಸದಾನಂದ ಹಾಳಿoಗಳಿ, ಅರುಣ ಐಹೊಳೆ, ವಿವೇಕ್ ಯಮಕನಮರಡಿ, ಎಸ್ ಎಸ್ ಕಾಂಬಳೆ, ಡಾ. ಗಾಯತ್ರಿ ಎಸ್ ಬಾನೆ, ಶ್ರೀಮತಿ ಸುಶೀಲಾ ಡಿ ಐಹೊಳೆ, ಮಹೇಶ್ ಕರಮಡಿ, ಭಾರತಿ ಲೋಹಾರ, ಎಸ್ ಎಸ್ ಅಮರಶೆಟ್ಟಿ, ಸಂಜು ಮೈಶಾಳಿ, ಅಶೋಕ್ ದೇಶಿoಗೆ ಹಾಗೂ ಹುಕ್ಕೇರಿ ಹಿರೇಮಠದ ಸದ್ಭಕ್ತರು ಉಪಸ್ಥಿತರಿದ್ದರು.


















One attachment • Scanned by Gmail


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ