Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯನ್ನು ಸೋಲಿಸಲು ನಮ್ಮ ಭರವಸೆಗಳೇ ಬ್ರಹ್ಮಾಸ್ತ್ರ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ02: ಕರ್ನಾಟಕ ಸರ್ಕಾರದ ಐದು ಭರವಸೆಗಳು ಮತ್ತು ಅಖಿಲ ಭಾರತ ಮಟ್ಟದಲ್ಲಿ ಕಾಂಗ್ರೆಸ್ ನೀಡಿದ ಐದು ನ್ಯಾಯ ಹಾಗೂ 25 ಭರವಸೆಗಳು ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು 'ಬ್ರಹ್ಮಾಸ್ತ್ರ' ಆಗಲಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ನಮ್ಮ ಜನಪರ ಪ್ರಣಾಳಿಕೆ ನೋಡಿ ಪ್ರಧಾನಿ ಮೋದಿಯವರು ನಿರಾಶರಾಗಿದ್ದಾರೆ. ಹೀಗಾಗಿ ಪದೇ ಪದೇ ಕಾಂಗ್ರೆಸ್ ಪಕ್ಷವನ್ನು ಹೀಯಾಳಿಸಲು ಪ್ರಾರಂಭಿಸಿದ್ದಾರೆ. ಆ ಭಗವಂತನನ್ನು ದಿನಕ್ಕೆ ಎಷ್ಟು ಬಾರಿ ಅವರು ನೆನಸುತ್ತಾರೆ ಗೊತ್ತಿಲ್ಲಾ, ಆದರೆ ಅದಕ್ಕಿಂತ ಹೆಚ್ಚು ಬಾರಿ ಅವರು ಕಾಂಗ್ರೆಸ್ ಪಕ್ಷವನ್ನ ಹೀಯಾಳಿಸೋದು ಸತ್ಯಪ್ರತಿ ದಿನ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ನನ್ನನ್ನ ದೂಷಿಸುತ್ತಾರೆ. ಈ ಮೂಲಕ ಜನರಲ್ಲಿ ನಮ್ಮ ವಿರುದ್ದ ದ್ವೇಷ ಹುಟ್ಟಿಸುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.

ಜಾರಿಗೆ ತರಲು ಸಾಧ್ಯವಾಗದ ಆಶ್ವಾಸನೆಗಳನ್ನು ಪ್ರಧಾನಿ ನೀಡಲಾರಂಭಿಸಿದ್ದಾರೆ. 2014 ಮತ್ತು 2019ರಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದಾರೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಠೇವಣಿ ಇಟ್ಟಿರುವ ಕಪ್ಪುಹಣದಿಂದ ಪ್ರತಿಯೊಬ್ಬ ನಾಗರಿಕರಿಗೆ 15 ಲಕ್ಷ ರೂ ಹಣವನ್ನು ಖಾತೆಗೆ ಹಾಕುವುದಾಗಿ ಹೇಳಿದ್ದರು, ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹಾಗೂ ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಆದರೆ ‘ಮೋದಿ ಸುಳ್ಳಿನ ಸರದಾರ’ ಎಂಬುದನ್ನು ಮೋದಿ ಸಾಬೀತು ಮಾಡಿದ್ದಾರೆ ಎಂದು ಖರ್ಗೆ ಆರೋಪಿಸಿದರು.

ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 371ಜೆ ವಿಧಿಯನ್ನು ತಿದ್ದುಪಡಿ ಮಾಡುವಲ್ಲಿ ದಿವಂಗತ ಧರ್ಮ್ ಸಿಂಗ್ ಹಾಗೂ ಕಾಂಗ್ರೆಸ್‌ ನಾಯಕರ ಪಾತ್ರ ಪ್ರಮುಖವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಮೋದಿ ಸರ್ಕಾರ ಬರ ಪರಿಹಾರ ಘೋಷಣೆಯಲ್ಲಿ ವಿಳಂಬ ಮಾಡುವ ಮೂಲಕ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. “ನಾವು ಬರ ಪರಿಹಾರವನ್ನು ಪಡೆಯಲು ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕು. ಇದೀಗ ಕೇಂದ್ರವು ಪರಿಹಾರವಾಗಿ ಅಲ್ಪ ಮೊತ್ತವನ್ನು ಬಿಡುಗಡೆ ಮಾಡಿದೆ. ಈ ವಿಚಾರವನ್ನು ಕರ್ನಾಟಕ ಸುಪ್ರೀಂ ಕೋರ್ಟ್‌ನ ಗಮನಕ್ಕೆ ತಂದಿದೆ ಎಂದು ಸಿಎಂ ಹೇಳಿದರು. ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಮೋದಿ ವಿವಿಧ ಜಾತಿ, ಸಮುದಾಯಗಳ ನಡುವೆ ದ್ವೇಷ ಉಂಟು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ