ಇದರಿಂದ ಸಿಡಿದೆದ್ದಿರುವ ವಿಪಕ್ಷ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಸಿದ್ದರಾಮಯ್ಯ ಬಜೆಟ್ ವಿರುದ್ಧ ಕ್ರೋಶ ಹೊರಹಾಕುತ್ತಿವೆ. ಇದೊಂದು ಸಾಬರ ಬಜೆಟ್, ರಂಜಾನ್ ಹಬ್ಬಕ್ಕೆ ಈ ಬಜೆಟ್ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದೆ. ಹಲಾಲ್ ಬಜೆಟ್, ಪಾಕಿಸ್ತಾನ್ ಬಜೆಟ್ ಅಂತೆಲ್ಲಾ ಟೀಕೆಗಳನ್ನು ಮಾಡುತ್ತಿವೆ. ಇದೀಗ ಇದಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಎಲ್ಲಾ ಆರೋಪಗಳಿಗೆ ಸ್ಪಷ್ಟನೆ ನೀಡುವ ಮೂಲಕ ತಿರುಗೇಟು ನೀಡಿದ್ದಾರೆ.
ವಿಪಕ್ಷ ನಾಯಕರಾದ ಆರ್ ಅಶೋಕ್ನಿಂದ ಹಿಡಿದು ಬಿಜೆಪಿ ಶಾಸಕರು, ನಾಯಕರು ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಇದೊಂದು ಅಲ್ಪಸಂಖ್ಯಾತರ ಬಜೆಟ್, ಹಲಾಲ್ ಬಜೆಟ್ ಅಂತೆಲ್ಲಾ ವ್ಯಂಗ್ಯವಾಡಿದ್ದಾರೆ.
ಅಲ್ಲದೇ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯ ಇತ್ತ ಸಿದ್ದರಾಮಯ್ಯನವರು ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಬಜೆಟ್ನ ಸಂಪೂರ್ಣ ವಿವರವನ್ನು ನೀಡಿದರು. ಅಲ್ಲದೇ ಸಾಲದ ಬಜೆಟ್, ಮುಸ್ಲಿಮರ ಬಜೆಟ್ ಎನ್ನುವ ಟೀಕೆಗಳಿಗೆ ತಿರುಗೇಟು ನೀಡಿದರು. ಅಲ್ಲದೇ ಎಸ್ಸಿಪಿ-ಟಿಎಸ್ಪಿ ಹಣದ ಬಗ್ಗೆ ವಿವರಿಸಿದ್ದಾರೆ.