Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಎಎಸ್​ ಕೋಚಿಂಗ್ ನ ಅಕ್ರಮ ಕಟ್ಟಡದ ವಿರುದ್ಧ ಬುಲ್ಡೋಜರ್ ಕ್ರಮ

ದೆಹಲಿಯ ಓಲ್ಡ್​ ರಾಜಿಂದರ್ ನಗರದಲ್ಲಿರುವ ರಾವು ಅವರ ಐಎಎಸ್​ ಕೋಚಿಂಗ್ ಸೆಂಟರ್​ನ ನೆಲಮಾಳಿಗೆಯಲ್ಲಿ ಪ್ರವಾಹದಿಂದಾಗಿ ಮೂವರು ಐಎಎಸ್​ ಆಕಾಂಕ್ಷಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇನ್ನೂ ಐವರನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರರಕಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಕಟ್ಟಡದ ಮಾಲೀಕ ಅಭಿಷೇಕ್ ಗುಪ್ತಾ ಹಾಗೂ ಕೋಚಿಂಗ್ ಸೆಂಟರ್​ನ ಸಂಯೋಜಕ ದೇಶಪಾಲ್​ ಸಿಂಗ್ ಅವರನ್ನು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ರಾವು ಅವರ ಐಎಎಸ್ ಸ್ಟಡಿ ಸೆಂಟರ್ ಬಳಿಯ ಅತಿಕ್ರಮಣಗಳನ್ನು ತೆಗೆದುಹಾಕಲು ಬುಲ್ಡೋಜರ್ ಕ್ರಮ ಪ್ರಾರಂಭವಾಗಿದೆ

ಕಾರ್ಯಾಚರಣೆಗೆ ದೆಹಲಿ ಪೊಲೀಸರು ಈಗಾಗಲೇ ಅನುಮತಿ ನೀಡಿದ್ದರು. ಈ ಘಟನೆಯಲ್ಲಿ ಯಾರೇ ತಪ್ಪು ಮಾಡಿದರೂ ಬಿಡುವುದಿಲ್ಲ ಎಂದು ಉಪ ಪೊಲೀಸ್ ಆಯುಕ್ತ ಎಂ.ಹರ್ಷವರ್ಧನ್ ಹೇಳಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿದ್ದೇವೆ ಮತ್ತು ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ.

ಕಟ್ಟಡದ ವಿವಿಧ ಮಹಡಿಗಳನ್ನು ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸರು ಕಟ್ಟಡದ ರಚನೆ ಮತ್ತು ಪ್ರದೇಶದ ಒಳಚರಂಡಿ ವ್ಯವಸ್ಥೆಯನ್ನು ನಿರ್ವಹಿಸುವಲ್ಲಿ ಸ್ಥಳೀಯ ಪುರಸಭೆಯ ಪಾತ್ರವನ್ನು ಪರಿಶೀಲಿಸುತ್ತಿದ್ದಾರೆ.

ದೆಹಲಿ ಅಗ್ನಿಶಾಮಕ ಸೇವೆಯು ಕಟ್ಟಡ ಮತ್ತು ಅದರ ನೆಲಮಾಳಿಗೆಯನ್ನು ಪರಿಶೀಲಿಸುತ್ತಿದೆ, ಇದನ್ನು ಅಕ್ರಮವಾಗಿ ಗ್ರಂಥಾಲಯವಾಗಿ ಬಳಸಲಾಗುತ್ತಿತ್ತು. ಈ ಪ್ರದೇಶದ ಒಳಚರಂಡಿ ವ್ಯವಸ್ಥೆ ಕುರಿತು ಪೊಲೀಸರು ನಗರಸಭೆ ಅಧಿಕಾರಿಗಳನ್ನು ಪ್ರಶ್ನಿಸಿ ಮಾಹಿತಿ ಕೋರಿ ನೋಟಿಸ್ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವ್ಯವಸ್ಥೆಯನ್ನು ನಿರ್ವಹಿಸುವ ಹೊಣೆ ಹೊತ್ತಿರುವವರನ್ನು ಎಫ್‌ಐಆರ್‌ನಲ್ಲಿ ಆರೋಪಿಗಳೆಂದು ಹೆಸರಿಸಲಾಗಿದೆ.

ಕಾರ್ಯಾಚರಣೆ ನಡೆಸಲು ದೆಹಲಿ ಪೊಲೀಸರು ಪೂರ್ವಾನುಮತಿ ನೀಡಿದ ನಂತರ ಬುಲ್ಡೋಜರ್‌ಗಳು ಕೋಚಿಂಗ್ ಸೆಂಟರ್ ಬಳಿ ಅತಿಕ್ರಮಣಗಳನ್ನು ತೆಗೆದುಹಾಕುತ್ತಿವೆ. ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದು, ಕೋಚಿಂಗ್ ಸೆಂಟರ್‌ನಲ್ಲಿ ಸುರಕ್ಷತೆ ಉಲ್ಲಂಘನೆ ಮತ್ತು ಅಕ್ರಮ ಬೇಸ್‌ಮೆಂಟ್ ಕಾರ್ಯಾಚರಣೆಗಳು ಸಾವಿಗೆ ಕಾರಣವಾಗಿವೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ