LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಧರ್ಮಸ್ಥಳ ಪ್ರಕರಣ ತನಿಖೆ ಅಸಮರ್ಪಕ; ಕೇಂದ್ರಕ್ಕೆ ಪೂರ್ಣ ಮಾಹಿತಿ: ಬಿವೈ ವಿಜಯೇಂದ್ರ

ಬೆಂಗಳೂರು/ನವದೆಹಲಿ: ಧರ್ಮಸ್ಥಳದ ವಿಚಾರವಾಗಿ ಷಡ್ಯಂತ್ರ ನಡೆಯುತ್ತಿದೆ. ಇದರ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂಬ ವಿಚಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇವೆ. ಎಲ್ಲ ವಿಚಾರಗಳನ್ನೂ ಅವರು ಆಲಿಸಿದ್ದಾರೆ. ಅವರ ಗಮನಕ್ಕೆ ತರುವ ಕೆಲಸವನ್ನು ಬಿಜೆಪಿ ನಿಯೋಗ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.


ನವದೆಹಲಿಯಲ್ಲಿ ಸೋಮವಾರ ರಾತ್ರಿ ಅಮಿತ್​ ಶಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿರೋಧ ಪಕ್ಷದ ನಾಯಕರುಗಳಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಧರ್ಮಸ್ಥಳ ಚಲೋ ಉಸ್ತುವಾರಿ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್, ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷ ಸತೀಶ್ ಕುಂಪಲ ಅವರನ್ನು ಒಳಗೊಂಡ ಎಲ್ಲ ರಾಜ್ಯ ಬಿಜೆಪಿ ನಿಯೋಗ ಗೃಹ ಸಚಿವರನ್ನು ಭೇಟಿ ಮಾಡಿದ್ದೇವೆ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್