Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಡರ್​ ವರ್ಗಾವಣೆ ಮಾಡಿಸಿಕೊಂಡ್ರೆ ಹೊಡೆತ ಗ್ಯಾರೆಂಟಿ: ಸುಪ್ರೀಂ

ನವದೆಹಲಿ, ಮಾರ್ಚ್ 26: ಮಹತ್ವದ ಬೆಳವಣಿಗೆಯೊಂದರಲ್ಲಿ, ಸರ್ಕಾರಿ ಉದ್ಯೋಗಿಯ ಮನವಿಯ ಮೇರೆಗೆ ಮಾಡಲಾಗುವ ವರ್ಗಾವಣೆಯನ್ನು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆ ಎಂದು ಪರಿಗಣಿಸಲಾಗುವುದಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಇದರಿಂದಾಗಿ, ಉದ್ಯೋಗಿಯ ಮನವಿ ಮೇರೆಗೆ ಇನ್ನೊಂದು ಕೇಡರ್ ಅಥವಾ ಇಲಾಖೆಗೆ  ವರ್ಗಾವಣೆ ಮಾಡಿದಲ್ಲಿ, ಆತ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಇಲಾಖೆಯಲ್ಲಿನ ಹಿರಿತನವನ್ನು ಪರಿಗಣಿಸಲಾಗುವುದಿಲ್ಲ. ಸುಪ್ರೀಂ ಕೋರ್ಟ್ ಈ ಆದೇಶ ಪ್ರಕಟಿಸಿರುವುದು ಅನೇಕ ಸರ್ಕಾರಿ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ.





ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ನಿರ್ದಿಷ್ಟ ಹುದ್ದೆಯನ್ನು ಹೊಂದಿರುವ ಸರ್ಕಾರಿ ನೌಕರನನ್ನು ಬೇರೆ ಇಲಾಖೆ ಅಥವಾ ಕೇಡರ್​​ಗೆ ವರ್ಗಾವಣೆ ಮಾಡಿದರೆ, ಆತ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಹುದ್ದೆಯ ಹಿರಿತನ ಸೇರಿದಂತೆ ಅಸ್ತಿತ್ವದಲ್ಲಿರುವ ಸ್ಥಾನಮಾನವನ್ನು ಹೊಂದಿರಲು ಅರ್ಹನಾಗಿರುತ್ತಾನೆ. ಆದಾಗ್ಯೂ, ಒಬ್ಬ ಅಧಿಕಾರಿಯನ್ನು ಆತನ ಸ್ವಂತ ಕೋರಿಕೆಯ ಮೇರೆಗೆ ವರ್ಗಾವಣೆ ಮಾಡಿದರೆ, ಆಗ ಆತ ವರ್ಗಾವಣೆಗೊಂಡ ಇಲಾಖೆಯ ಇತರ ಉದ್ಯೋಗಿಗಳ ಹಕ್ಕುಗಳು ಮತ್ತು ಸ್ಥಿತಿಗತಿಗಳನ್ನು ಗಮನಿಸಿ ಹಿರಿತನ ಪರಿಗಣಿಸಬೇಕಾಗುತ್ತದೆ. ಏಕೆಂದರೆ, ವರ್ಗಾವಣೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಇಲ್ಲದೆ ಇದ್ದರೆ ಆಗ ಹಿಂದಿನ ಹುದ್ದೆಯ ಹಿರಿತನ ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕರ್ನಾಟಕದ ಪ್ರಕರಣದಲ್ಲಿ ಸುಪ್ರೀಂ ತೀರ್ಪು:


ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಮಹತ್ವದ ಆದೇಶ ನೀಡಿದೆ. ಸರ್ಕಾರಿ ಸ್ಟಾಫ್ ನರ್ಸ್ ಒಬ್ಬರು 1985 ರಲ್ಲಿ ಆರೋಗ್ಯ ಸಮಸ್ಯೆಗಳ ಕಾರಣ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಆಗಿ ಕೇಡರ್ ಬದಲಾವಣೆಯನ್ನು ಕೋರಿದ್ದರು. ವೈದ್ಯಕೀಯ ಮಂಡಳಿಯು ಅವರ ಅಸಮರ್ಥತೆಯನ್ನು ದೃಢಪಡಿಸಿದ್ದರಿಂದ ಕರ್ನಾಟಕ ಸರ್ಕಾರ 1989ರಲ್ಲಿ ಅವರನ್ನು ಬೇರೊಂದು ಕೇಡರ್​​ಗೆ ವರ್ಗಾವಣೆ ಮಾಡಿ ಅನುಮೋದನೆ ನೀಡಿತ್ತು. ಆದರೆ, ಅವರ ಸೇವಾ ಹಿರಿತನವನ್ನು 1979 ರ ಬದಲಿಗೆ 1989 ರಿಂದ ನಿಗದಿಪಡಿಸಿತ್ತು. ಇದನ್ನು ಪ್ರಶ್ನಿಸಿದ್ದ ಅವರು 2007ರಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಅಲ್ಲಿ ಅವರ ಪರವಾಗಿ ತೀರ್ಪು ಬಂದಿತ್ತು. ಕರ್ನಾಟಕ ರಾಜ್ಯ ಹಾಗೂ ಕೆ. ಸೀತಾರಾಮುಲು (2010) ಪ್ರಕರಣದ ತೀರ್ಪನ್ನು ಉಲ್ಲೇಖಿಸಿ, ವೈದ್ಯಕೀಯ ಕಾರಣ ಆಧಾರಿತ ವರ್ಗಾವಣೆಗಳನ್ನು ಸಾರ್ವಜನಿಕ ಹಿತಾಸಕ್ತಿ ವರ್ಗಾವಣೆಗಳೆಂದು ಪರಿಗಣಿಸಿ, ಮೂಲ ಸೇವಾ ಹಿರಿತನವನ್ನು ಉಳಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತ್ತು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ