LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕೇಡರ್​ ವರ್ಗಾವಣೆ ಮಾಡಿಸಿಕೊಂಡ್ರೆ ಹೊಡೆತ ಗ್ಯಾರೆಂಟಿ: ಸುಪ್ರೀಂ

ನವದೆಹಲಿ, ಮಾರ್ಚ್ 26: ಮಹತ್ವದ ಬೆಳವಣಿಗೆಯೊಂದರಲ್ಲಿ, ಸರ್ಕಾರಿ ಉದ್ಯೋಗಿಯ ಮನವಿಯ ಮೇರೆಗೆ ಮಾಡಲಾಗುವ ವರ್ಗಾವಣೆಯನ್ನು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆ ಎಂದು ಪರಿಗಣಿಸಲಾಗುವುದಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಇದರಿಂದಾಗಿ, ಉದ್ಯೋಗಿಯ ಮನವಿ ಮೇರೆಗೆ ಇನ್ನೊಂದು ಕೇಡರ್ ಅಥವಾ ಇಲಾಖೆಗೆ  ವರ್ಗಾವಣೆ ಮಾಡಿದಲ್ಲಿ, ಆತ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಇಲಾಖೆಯಲ್ಲಿನ ಹಿರಿತನವನ್ನು ಪರಿಗಣಿಸಲಾಗುವುದಿಲ್ಲ. ಸುಪ್ರೀಂ ಕೋರ್ಟ್ ಈ ಆದೇಶ ಪ್ರಕಟಿಸಿರುವುದು ಅನೇಕ ಸರ್ಕಾರಿ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ.





ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ನಿರ್ದಿಷ್ಟ ಹುದ್ದೆಯನ್ನು ಹೊಂದಿರುವ ಸರ್ಕಾರಿ ನೌಕರನನ್ನು ಬೇರೆ ಇಲಾಖೆ ಅಥವಾ ಕೇಡರ್​​ಗೆ ವರ್ಗಾವಣೆ ಮಾಡಿದರೆ, ಆತ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಹುದ್ದೆಯ ಹಿರಿತನ ಸೇರಿದಂತೆ ಅಸ್ತಿತ್ವದಲ್ಲಿರುವ ಸ್ಥಾನಮಾನವನ್ನು ಹೊಂದಿರಲು ಅರ್ಹನಾಗಿರುತ್ತಾನೆ. ಆದಾಗ್ಯೂ, ಒಬ್ಬ ಅಧಿಕಾರಿಯನ್ನು ಆತನ ಸ್ವಂತ ಕೋರಿಕೆಯ ಮೇರೆಗೆ ವರ್ಗಾವಣೆ ಮಾಡಿದರೆ, ಆಗ ಆತ ವರ್ಗಾವಣೆಗೊಂಡ ಇಲಾಖೆಯ ಇತರ ಉದ್ಯೋಗಿಗಳ ಹಕ್ಕುಗಳು ಮತ್ತು ಸ್ಥಿತಿಗತಿಗಳನ್ನು ಗಮನಿಸಿ ಹಿರಿತನ ಪರಿಗಣಿಸಬೇಕಾಗುತ್ತದೆ. ಏಕೆಂದರೆ, ವರ್ಗಾವಣೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಇಲ್ಲದೆ ಇದ್ದರೆ ಆಗ ಹಿಂದಿನ ಹುದ್ದೆಯ ಹಿರಿತನ ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕರ್ನಾಟಕದ ಪ್ರಕರಣದಲ್ಲಿ ಸುಪ್ರೀಂ ತೀರ್ಪು:


ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಮಹತ್ವದ ಆದೇಶ ನೀಡಿದೆ. ಸರ್ಕಾರಿ ಸ್ಟಾಫ್ ನರ್ಸ್ ಒಬ್ಬರು 1985 ರಲ್ಲಿ ಆರೋಗ್ಯ ಸಮಸ್ಯೆಗಳ ಕಾರಣ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಆಗಿ ಕೇಡರ್ ಬದಲಾವಣೆಯನ್ನು ಕೋರಿದ್ದರು. ವೈದ್ಯಕೀಯ ಮಂಡಳಿಯು ಅವರ ಅಸಮರ್ಥತೆಯನ್ನು ದೃಢಪಡಿಸಿದ್ದರಿಂದ ಕರ್ನಾಟಕ ಸರ್ಕಾರ 1989ರಲ್ಲಿ ಅವರನ್ನು ಬೇರೊಂದು ಕೇಡರ್​​ಗೆ ವರ್ಗಾವಣೆ ಮಾಡಿ ಅನುಮೋದನೆ ನೀಡಿತ್ತು. ಆದರೆ, ಅವರ ಸೇವಾ ಹಿರಿತನವನ್ನು 1979 ರ ಬದಲಿಗೆ 1989 ರಿಂದ ನಿಗದಿಪಡಿಸಿತ್ತು. ಇದನ್ನು ಪ್ರಶ್ನಿಸಿದ್ದ ಅವರು 2007ರಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಅಲ್ಲಿ ಅವರ ಪರವಾಗಿ ತೀರ್ಪು ಬಂದಿತ್ತು. ಕರ್ನಾಟಕ ರಾಜ್ಯ ಹಾಗೂ ಕೆ. ಸೀತಾರಾಮುಲು (2010) ಪ್ರಕರಣದ ತೀರ್ಪನ್ನು ಉಲ್ಲೇಖಿಸಿ, ವೈದ್ಯಕೀಯ ಕಾರಣ ಆಧಾರಿತ ವರ್ಗಾವಣೆಗಳನ್ನು ಸಾರ್ವಜನಿಕ ಹಿತಾಸಕ್ತಿ ವರ್ಗಾವಣೆಗಳೆಂದು ಪರಿಗಣಿಸಿ, ಮೂಲ ಸೇವಾ ಹಿರಿತನವನ್ನು ಉಳಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ