Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಸಾಯನಿಕ ಗೊಬ್ಬರ ತಗ್ಗಿಸಿ, ಸಾವಯವ ಕೃಷಿಗೆ ಆದ್ಯತೆ ನೀಡಲು ಕರೆ

ದಮ್ಮೂರು ಗ್ರಾಮದಲ್ಲಿ ‘ಖೇತ್ ಬಚಾವೋ, ಧರ್ತಿ ಮಾತಾ ಬಚಾವೋ’ ಅಭಿಯಾನ



ಬಳ್ಳಾರಿ,ಜೂ.24 : ಪ್ರಸ್ತುತ ದಿನಗಳಲ್ಲಿ ಮಣ್ಣಿನ ಆರೋಗ್ಯ ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. ರೈತರು ಅತಿಯಾಗಿ ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಮಾಡುವುದನ್ನು ತಗ್ಗಿಸಬೇಕು ಮತ್ತು ಭೂಮಿಯ ಫಲವತ್ತತೆ ಹೆಚ್ಚಿಸಲು ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ಕರೆ ನೀಡಿದರು.
ಕೋಳೂರು ಹೋಬಳಿಯ ದಮ್ಮೂರು ಗ್ರಾಮದ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಇತ್ತೀಚೆಗೆ ಕೃಷಿ ಇಲಾಖೆ, ಬಳ್ಳಾರಿ ಹಾಗೂ ಕೃಷಿ ವಿಜ್ಞಾನ ಕೇಂದ್ರ (ಕೆ.ವಿ.ಕೆ) ಹಗರಿ ಇವರ ಜಂಟಿ ಸಹಯೋಗದೊಂದಿಗೆ ಆಯೋಜಿಸಿದ್ದ ‘ಖೇತ್ ಬಚಾವೋ ಅಭಿಯಾನ್, ಧರ್ತಿ ಮಾತಾ ಬಚಾವೋ’ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೆ.ವಿ.ಕೆ ಹಗರಿಯ ಕೃಷಿ ವಿಜ್ಞಾನಿ ಡಾ.ರವಿ ಅವರು ಮಾತನಾಡಿ, ಸಸ್ಯಗಳ ಸಮೃದ್ಧ ಬೆಳವಣಿಗೆಗೆ ಒಟ್ಟು 16 ಅತ್ಯಗತ್ಯ ಪೋಷಕಾಂಶಗಳ ಅವಶ್ಯಕತೆಯಿರುತ್ತದೆ. ಇವುಗಳಲ್ಲಿ ಕೆಲವು ಮಣ್ಣಿನಲ್ಲಿ ಲಭ್ಯವಿದ್ದರೆ, ಇನ್ನು ಕೆಲವು ವಾತಾವರಣದಿಂದ ದೊರೆಯುತ್ತವೆ. ಹಾಗಾಗಿ ರೈತರು ಕಡ್ಡಾಯವಾಗಿ ಮಣ್ಣು ಪರೀಕ್ಷೆ ಮಾಡಿಸಿ, ಅದರಿಂದ ಬರುವ ಫಲಿತಾಂಶದ ಆಧಾರದ ಮೇಲೆಯೇ ರಸಗೊಬ್ಬರಗಳನ್ನು ಸಮರ್ಪಕವಾಗಿ ಬಳಸಬೇಕು ಎಂದು ವೈಜ್ಞಾನಿಕ ಮಾಹಿತಿ ನೀಡಿದರು.
ಇನ್ನೋರ್ವ ವಿಜ್ಞಾನಿ ಡಾ.ನವೀನ್ ಅವರು ಮಾತನಾಡಿ, ಮನೆಯಲ್ಲೇ ತಯಾರಿಸಬಹುದಾದ ಪಂಚಗವ್ಯ, ಜೀವಾಮೃತ ಹಾಗೂ ಬೀಜಾಮೃತದಂತಹ ಸಾವಯವ ಕೃಷಿ ಪರಿಕರಗಳನ್ನು ಬಳಸುವುದರಿಂದ ಕೃಷಿ ವೆಚ್ಚವನ್ನು ಗಣನೀಯವಾಗಿ ತಗ್ಗಿಸಬಹುದು. ಜೊತೆಗೆ ನಮ್ಮ ಮುಂದಿನ ಪೀಳಿಗೆಗೆ ವಿಷಮುಕ್ತ ಆಹಾರವನ್ನು ನೀಡಲು ಸಾಧ್ಯವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಕೃಷಿ ಅಧಿಕಾರಿ ಬಸವರಾಜ್ ಅವರು ಕೃಷಿ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಯೋಜನೆಗಳು ಹಾಗೂ ಸಹಾಯಧನಗಳ ಬಗ್ಗೆ ರೈತರಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.
ರೈತ ಸಂಪರ್ಕ ಕೇಂದ್ರದ ಅಧಿಕಾರಿ ಡಾ.ಅರುಣಾ ಅವರು ತೊಗರಿ ಬೆಳೆಯಲ್ಲಿ ಬೀಜೋಪಚಾರ ಮಾಡುವ ಸುಲಭ ವಿಧಾನಗಳು ಮತ್ತು ಅದರ ಮಹತ್ವವನ್ನು ರೈತರಿಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕ ಗರ್ಜಪ್ಪ, ಪ್ರಮುಖರಾದ ದಯಾನಂದ, ಉಮೇಶ್, ಕೃಷಿ ಅಧಿಕಾರಿ ಯೇಸುಬಾಬು, ಆತ್ಮ ಸಂಸ್ಥೆಯ ಸಿಬ್ಬಂದಿಯಾದ ಕವಿತಾ, ರೇಣುಕಾರಾಧ್ಯ, ರೈತರಾದ ಆದಿನಾರಾಯಣ ರೆಡ್ಡಿ, ಶಂಕರ ಗೌಡ, ಜೆ. ನಾರಾಯಣ ರೆಡ್ಡಿ, ರೇವಣಸಿದ್ಧಯ್ಯ ಸ್ವಾಮಿ, ಮಾಣಿಕ್ಯ ರೆಡ್ಡಿ ಹಾಗೂ ಸ್ಥಳೀಯ ಕೃಷಿ ಸಖಿಯರು ಉಪಸ್ಥಿತರಿದ್ದರು.
ದಮ್ಮೂರು ಮತ್ತು ಕೋಳೂರು ಗ್ರಾಮದ ನೂರಾರು ಪ್ರಗತಿಪರ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಕೃಷಿ ತಜ್ಞರಿಂದ ಸೂಕ್ತ ಮಾಹಿತಿ ಹಾಗೂ ಮಾರ್ಗದರ್ಶನ ಪಡೆದುಕೊಂಡರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಜನಮೆಚ್ಚಿದ ಮಹಿಳಾ ನಾಯಕಿ" ಪ್ರಶಸ್ತಿಗೆ ಭಾಜನರಾದ ಗಾಲಿ ಲಕ್ಷ್ಮಿ ಅರುಣಾ ಜನಾರ್ದನ ರೆಡ್ಡಿ ಡಾ.  ಶ್ಯಾಮ ಪ್ರಸಾದ ಮುಖರ್ಜಿ ತ್ಯಾಗ ಬಲಿದಾನ ಬಹಳ ದೊಡ್ಡದುಪುಸ್ತಕ ಖರೀದಿ ಯೋಜನೆಗೆ ಮರುಚಾಲನೆ ನೀಡಿ :  ಕಸಾಪ ಜಿಲ್ಲಾಧ್ಯಕ್ಷ ನಿಷ್ಠಿ  ರುದ್ರಪ್ಪ  ಮನವಿನಗರ-ಗ್ರಾಮೀಣದ ಪ್ರತಿ ಮಗುವಿಗೂ ತಲುಪಲಿ ಪೋಲಿಯೋ ಲಸಿಕೆಜೂ.27 ರಂದು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮರಾಸಾಯನಿಕ ಗೊಬ್ಬರ ತಗ್ಗಿಸಿ, ಸಾವಯವ ಕೃಷಿಗೆ ಆದ್ಯತೆ ನೀಡಲು ಕರೆಬಳ್ಳಾರಿ: ಸರಳಾದೇವಿ ಕಾಲೇಜಿನಲ್ಲಿ ‘ಎಸ್.ಐ.ಆರ್’ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿಬಳ್ಳಾರಿ: ಜೂ.27 ರಂದು ಸಂತಕವಿ ಕನಕದಾಸರ ಕುರಿತ ಸಂಗೀತ-ನೃತ್ಯ ರೂಪಕ ‘ಮುತ್ತು ಬಂದಿದೆ ಕೇರಿಗೆ’ ಪ್ರದರ್ಶನಮಹಾಲಿಂಗಪುರದಲ್ಲಿ ಐಸಿರಿ ನೇತ್ರಾಲಯ ಉದ್ಘಾಟನೆ ನಾಳೆ: ಏಮ್ಸ್ ದೆಹಲಿಯ ತಜ್ಞ ವೈದ್ಯರಿಂದ ಅತ್ಯಾಧುನಿಕ ನೇತ್ರ ಚಿಕಿತ್ಸೆಮಾದಕ ವ್ಯಸನ ಬದುಕಿಗೆ ಮಾರಕ, ನಿರ್ವ್ಯಸನ ಆರೋಗ್ಯಕ್ಕೆ ಪೂರಕ