Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನ ಗಣತಿ ಜೊತೆಗೆ ಜಾತಿ ಗಣತಿ; ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್​ ದಿನಾಂಕವನ್ನು ಪ್ರಕಟಿಸಲು ಆಗ್ರಹ


ನವದೆಹಲಿ: ಜನ ಗಣತಿ ಜೊತೆಗೆ ಜಾತಿ ಗಣತಿ ನಡೆಸುವುದಾಗಿ ಪ್ರಕಟಿಸಿರುವ ಕೇಂದ್ರ ಸರ್ಕಾದ ನಿರ್ಧಾರವನ್ನು ಸ್ವಾಗತಿಸಿರುವ ಕಾಂಗ್ರೆಸ್​, ಗಣತಿ ನಡೆಸುವ ದಿನಾಂಕವನ್ನು ಪ್ರಕಟಿಸಲು ಆಗ್ರಹಿಸಿದೆ.


ಅಲ್ಲದೇ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿರುವ ಪಕ್ಷವು, "ಡೆಡ್​​ ಲೈನ್​ ನೀಡದೆ ಹೆಡ್​​ ಲೈನ್​​" ನೀಡುವುದರಲ್ಲಿ ನಿಪುಣರು. ಜಾತಿ ಮತ್ತು ಜನ ಗಣತಿ ಯಾವಾಗ ನಡೆಯುತ್ತದೆ ಎಂಬುದರ ದಿನಾಂಕವನ್ನು ಸರ್ಕಾರ ಪ್ರಕಟಿಸಬೇಕು ಎಂದು ಒತ್ತಾಯಿಸಿದೆ.


"ಸರ್ಕಾರದ ಉದ್ದೇಶದ ಬಗ್ಗೆ ಅನೇಕ ಪ್ರಶ್ನೆಗಳು ಉದ್ಭವಿಸುತ್ತವೆ. ಜನಗಣತಿಯನ್ನು ಸಾಧ್ಯವಾದಷ್ಟು ಬೇಗ ಮಾಡಬೇಕು. ಪ್ರಧಾನಿ ಮೋದಿ ಅವರು ಬರಿಯ ಹೆಡ್​ ಲೈನ್​ ನೀಡುತ್ತಾರೆ. ಡೆಡ್​​ ಲೈನ್​ ನೀಡುವುದಿಲ್ಲ. ಮೀಸಲಾತಿಗೆ ಇರುವ ಶೇಕಡಾ 50ರಷ್ಟು ಮಿತಿಯನ್ನು ತೆಗೆದುಹಾಕಬೇಕು. ಇದನ್ನು ಮಾಡಲು ಕೇಂದ್ರಕ್ಕೆ ಏನು ಅಡ್ಡಿ ಇದೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪ್ರಶ್ನಿಸಿದ್ದಾರೆ.


ದೆಹಲಿಯ ಕಾಂಗ್ರೆಸ್​ ಕೇಂದ್ರ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಂವಿಧಾನಕ್ಕೆ ತಿದ್ದುಪಡಿ ತಂದು, ಮೀಸಲಾತಿ ಮೇಲಿನ ಶೇ.50ರಷ್ಟು ಮಿತಿಯನ್ನು ತೆಗೆದುಹಾಕಬೇಕು. ಆಗ ಮಾತ್ರ ಜಾತಿ ಜನಗಣತಿಗೆ ಅರ್ಥ ಬರಲಿದೆ" ಎಂದರು.











Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ