LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ತಮಿಳುನಾಡಿನ ಬೇಡಿಕೆ ತಿರಸ್ಕರಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ

ನವದೆಹಲಿ: ಬಾಕಿ ಇರುವ ನೀರನ್ನು ಬಿಡುಗಡೆ ಮಾಡಲು ಮತ್ತು ರಾಜ್ಯಕ್ಕೆ ಕಾವೇರಿ ನದಿ ನೀರು ಹರಿವಿನಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂಬ ತಮಿಳುನಾಡಿನ ಬೇಡಿಕೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಗುರುವಾರ ತಿರಸ್ಕರಿಸಿದೆ.




ಉಭಯ ರಾಜ್ಯಗಳು ತಮ್ಮ ಕುಡಿಯುವ ನೀರಿನ ಅವಶ್ಯಕತೆಗೆ ಆದ್ಯತೆ ನೀಡುವಂತೆ ಸಮಿತಿ ಆದೇಶಿಸಿದೆ. ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಯನ್ನು ಹಂಚಿಕೊಳ್ಳುವ ಉಭಯ ರಾಜ್ಯಗಳಲ್ಲಿ ನೀರಿನ ಕೊರತೆಯನ್ನು ನಿವಾರಿಸಿದೆ. ಪ್ರತಿ ದಿನ ಕೇವಲ 150 ಕ್ಯೂಸೆಕ್ ನೀರು ಬರುತ್ತಿದ್ದ ಅಂತರರಾಜ್ಯ ಗಡಿ ಬಿಂದು ಬಿಳಿಗುಂಡ್ಲುವಿಗೆ ಕಳೆದ ಐದು ದಿನಗಳಿಂದ ದಿನಕ್ಕೆ ಸುಮಾರು 1,100 ಕ್ಯೂಸೆಕ್ ನೀರು ಬರುತ್ತಿದೆ.








96ನೇ ಸಭೆಯ ಅಧ್ಯಕ್ಷತೆಯ ನಂತರ ಟಿಎನ್ಐಇ ಜೊತೆಗೆ ಮಾತನಾಡಿದ ಸಿಡಬ್ಲ್ಯುಆರ್‌ಸಿ ಅಧ್ಯಕ್ಷ ವಿನೀತ್ ಗುಪ್ತಾ, ಎರಡೂ ರಾಜ್ಯಗಳು ತಮ್ಮ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ಆಯಾ ಜಲಾಶಯಗಳಲ್ಲಿ ಸಾಕಷ್ಟು ನೀರನ್ನು ಹೊಂದಿವೆ ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ ಮಾರ್ಪಡಿಸಿದ ಕಾವೇರಿ ಜಲವಿವಾದ ನ್ಯಾಯಮಂಡಳಿಯ (ಸಿಡಬ್ಲ್ಯುಡಿಟಿ) ಅಂತಿಮ ತೀರ್ಪಿನ ಪ್ರಕಾರ, ಪರಿಸರ ಹರಿವನ್ನು ಕಾಪಾಡಿಕೊಳ್ಳುವಂತೆ ಕರ್ನಾಟಕಕ್ಕೆ ಸಮಿತಿ ಆದೇಶಿಸಿದೆ.

ಸಿಡಬ್ಲ್ಯುಡಿಟಿ ಪ್ರಕಾರ, ಕರ್ನಾಟಕವು ಫೆಬ್ರುವರಿಯಿಂದ ಮೇವರೆಗೆ ದಿನಕ್ಕೆ ಸುಮಾರು 1,000 ಕ್ಯೂಸೆಕ್‌ ನೀರು ಬಿಡುವ ಮೂಲಕ ಬಿಳಿಗುಂಡ್ಲುವಿನಲ್ಲಿ ಪರಿಸರದ ಹರಿವನ್ನು ಕಾಪಾಡಿಕೊಳ್ಳಬೇಕು. ಈ ಆದೇಶವು ಸಾಮಾನ್ಯ ವರ್ಷಕ್ಕೆ ಅನ್ವಯವಾಗುತ್ತದೆ ಮತ್ತು ಬರದಿಂದ ತತ್ತರಿಸಿರುವ 2023-24 ರಂತಹ ಸಂಕಷ್ಟದ ವರ್ಷಕ್ಕೆ ಅಲ್ಲ ಎಂದಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿಗೆ (ಸಿಡಬ್ಲ್ಯುಆರ್‌ಸಿ) ಸಲ್ಲಿಸಿರುವ ಅರ್ಜಿಯಲ್ಲಿ, ತಮಿಳುನಾಡು ರಾಜ್ಯವು ಸಂಕಷ್ಟದ ವರ್ಷಗಳಲ್ಲಿ ನೀರು ಹಂಚಿಕೆ ಮಾಡಲು ವೈಜ್ಞಾನಿಕವಾಗಿ ಆಧಾರಿತ ಸೂತ್ರಕ್ಕಾಗಿ ವಿನಂತಿ ಮಾಡಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್