LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಿಎಸ್​ಐ ಪರಶುರಾಮ ಸಾವ ಪ್ರಕರಣದಲ್ಲಿ ಸಿಬಿಐಗೆ ನೀಡುವ ಅರ್ಹತೆ ಇಲ್ಲ

ಕೊಪ್ಪಳ, ಆಗಸ್ಟ್​​​ 07: ಯಾದಗಿರಿ ಪಿಎಸ್​ಐ ಪರಶುರಾಮ  ಅನುಮಾನಾಸ್ಪದ ಸಾವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪರಶುರಾಮ ಪತ್ನಿಗೆ ಇಲಾಖೆಯಲ್ಲಿ ಸೂಕ್ತವಾದ ಕೆಲಸ ಕೊಡುತ್ತೇವೆ. ರಾಯಚೂರು ಕೃಷಿ ವಿವಿ ಅಥವಾ ಜೆಸ್ಕಾಂನಲ್ಲಿ ಕೆಲಸ ಕೊಡುವಂತೆ ಕೇಳಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ  ಅವರ ಜೊತೆ ಮಾತನಾಡುತ್ತೇನೆ. ಗೃಹ ಇಲಾಖೆ ಹಾಗೂ ಸರ್ಕಾರದಿಂದ 50 ಲಕ್ಷ ಹಣ ನೀಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಘೋಷಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂದು (ಆ.07) ಮೃತ ಪಿಎಸ್​ಐ ಪರಶುರಾಮ ಅವರ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕ ಮತ್ತು ಅವರ ಪುತ್ರನ ಮೇಲೆ ಆರೋಪ ಮಾಡಿದ್ದಾರೆ. ತನಿಖೆಗೆ ಆದೇಶ ಮಾಡಿದ್ದೇನೆ. ಆರೋಪ ಕೇಳಿಬಂದ ದಿನವೇ ಸಿಐಡಿ ತನಿಖೆಗೆ ಪ್ರಕರಣವನ್ನು ನೀಡಿದ್ದೇವೆ. ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಯಾರು ಕೂಡ ಹಣ ತೆಗೆದುಕೊಂಡು ವರ್ಗಾವಣೆ ಮಾಡಲ್ಲ. ವರ್ಗಾವಣೆಗೆ ಎರಡು ವರ್ಷ ನಿಗದಿ ಮಾಡಿದ್ದೇವೆ ಎಂದು ತಿಳಿಸಿದರು.


ನಾನು ವಿರೋಧ ಪಕ್ಷದವರಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಲ್ಲ. ಸಿಬಿಐಗೆ ನೀಡುವ ಅರ್ಹತೆ ಈ ಪ್ರಕರಣದಲ್ಲಿ ಇಲ್ಲ. ಆದರೆ ಕುಟುಂಬಕ್ಕೆ ನ್ಯಾಯ ದೊರಕಿಸುವ ಕೆಲಸ ಮಾಡುತ್ತೇವೆ. ಅವರಿಗೆ ನ್ಯಾಯ ಸಿಗದೆ ಇದ್ದರೆ ಮುಂದೆ ನೋಡೋಣ. ಪರಶುರಾಮ ಅವರು ಏಳು ತಿಂಗಳಲ್ಲೇ ಹೇಗೆ ವರ್ಗಾವಣೆಯಾದರು ಅಂತ ನನಗೆ ಗೊತ್ತಿಲ್ಲ. ಅವದಿಗೂ ಮೊದಲೇ ವರ್ಗಾವಣೆ ಬಗ್ಗೆ ಕೂಡ ಸಿಐಡಿ ತನಿಖೆಯಲ್ಲಿ ಹೊರಗೆ ಬರುತ್ತದೆ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್