Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆ

ಇರಾನ್, ಜೂನ್ 24: ಇರಾನ್(Iran) ಮೇಲೆ ಇಸ್ರೇಲ್ ದಾಳಿಯೊಂದಿಗೆ ಆರಂಭವಾದ ಯುದ್ಧಕ್ಕೆ ವಿರಾಮ ಘೋಷಿಸಲಾಗಿದೆ. ಇದೀಗ ಟ್ರಂಪ್ ಆಡಳಿತವು ಮಧ್ಯಪ್ರಾಚ್ಯದಲ್ಲಿ ಯಾವುದೇ ಮಿಲಿಟರಿ ಹಸ್ತಕ್ಷೇಪವನ್ನು ಬಯಸುವುದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮವನ್ನು ಘೋಷಿಸಿದ್ದಾರೆ.





ಇರಾನ್ ಅಧಿಕೃತವಾಗಿ ಇಸ್ರೇಲ್ ಜೊತೆ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ. ಸಿಎನ್ಎನ್ ವರದಿಯ ಪ್ರಕಾರ, ಕತಾರ್‌ನಲ್ಲಿರುವ ಅಮೆರಿಕದ ಮೇಲೆ ಇರಾನ್ 6 ಕ್ಷಿಪಣಿಗಳನ್ನು ಹಾರಿಸಿದ ನಂತರ ಕದನ ವಿರಾಮ ಘೋಷಿಸುವ ನಿರ್ಧಾರ ಬಂದಿದೆ . ಅಮೆರಿಕದ ದಾಳಿಗೆ ಪ್ರತಿಕ್ರಿಯೆಯಾಗಿ ಇರಾನ್ ಈ ಕ್ಷಿಪಣಿಗಳನ್ನು ಹಾರಿಸಿತ್ತು. ಇರಾನ್‌ನಿಂದ ಬಲವಾದ ಪ್ರತಿದಾಳಿಯ ನಂತರ, ಎಲ್ಲಾ ಮಧ್ಯಪ್ರಾಚ್ಯ ದೇಶಗಳಲ್ಲಿ ಕೋಲಾಹಲ ಉಂಟಾಯಿತು. ಎಲ್ಲಾ ದೇಶಗಳು ಪ್ರತಿಕ್ರಿಯಿಸಿದ್ದವು.

ಕತಾರ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯನ್ನು ಸೌದಿ ಅರೇಬಿಯಾ ಖಂಡಿಸಿತ್ತು. ಕತಾರ್‌ಗೆ ಸೌದಿ ತನ್ನ ಸಂಪೂರ್ಣ ಬೆಂಬಲವನ್ನು ಘೋಷಿಸಿತ್ತು. ಕತಾರ್‌ನಲ್ಲಿರುವ ಅಮೆರಿಕದ ನೆಲೆಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿ ಸ್ವೀಕಾರಾರ್ಹವಲ್ಲ ಮತ್ತು ಅದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಸೌದಿ ಹೇಳಿತ್ತು. ಇದಕ್ಕೂ ಮೊದಲು, ರಷ್ಯಾದ ಪರವಾಗಿ ಮೆಡ್ವೆಡೆವ್, ರಷ್ಯಾ ಇರಾನ್‌ಗೆ ಪರಮಾಣು ಶಸ್ತ್ರಾಸ್ತ್ರಗಳನ್ನು ನೀಡುವ ಉದ್ದೇಶವನ್ನು ಹೊಂದಿಲ್ಲ, ಆದರೆ ಇತರ ದೇಶಗಳು ಅವುಗಳನ್ನು ನೀಡಬಹುದು ಎಂದು ಹೇಳಿದ್ದರು.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ