LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆ

ಇರಾನ್, ಜೂನ್ 24: ಇರಾನ್(Iran) ಮೇಲೆ ಇಸ್ರೇಲ್ ದಾಳಿಯೊಂದಿಗೆ ಆರಂಭವಾದ ಯುದ್ಧಕ್ಕೆ ವಿರಾಮ ಘೋಷಿಸಲಾಗಿದೆ. ಇದೀಗ ಟ್ರಂಪ್ ಆಡಳಿತವು ಮಧ್ಯಪ್ರಾಚ್ಯದಲ್ಲಿ ಯಾವುದೇ ಮಿಲಿಟರಿ ಹಸ್ತಕ್ಷೇಪವನ್ನು ಬಯಸುವುದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮವನ್ನು ಘೋಷಿಸಿದ್ದಾರೆ.





ಇರಾನ್ ಅಧಿಕೃತವಾಗಿ ಇಸ್ರೇಲ್ ಜೊತೆ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ. ಸಿಎನ್ಎನ್ ವರದಿಯ ಪ್ರಕಾರ, ಕತಾರ್‌ನಲ್ಲಿರುವ ಅಮೆರಿಕದ ಮೇಲೆ ಇರಾನ್ 6 ಕ್ಷಿಪಣಿಗಳನ್ನು ಹಾರಿಸಿದ ನಂತರ ಕದನ ವಿರಾಮ ಘೋಷಿಸುವ ನಿರ್ಧಾರ ಬಂದಿದೆ . ಅಮೆರಿಕದ ದಾಳಿಗೆ ಪ್ರತಿಕ್ರಿಯೆಯಾಗಿ ಇರಾನ್ ಈ ಕ್ಷಿಪಣಿಗಳನ್ನು ಹಾರಿಸಿತ್ತು. ಇರಾನ್‌ನಿಂದ ಬಲವಾದ ಪ್ರತಿದಾಳಿಯ ನಂತರ, ಎಲ್ಲಾ ಮಧ್ಯಪ್ರಾಚ್ಯ ದೇಶಗಳಲ್ಲಿ ಕೋಲಾಹಲ ಉಂಟಾಯಿತು. ಎಲ್ಲಾ ದೇಶಗಳು ಪ್ರತಿಕ್ರಿಯಿಸಿದ್ದವು.

ಕತಾರ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯನ್ನು ಸೌದಿ ಅರೇಬಿಯಾ ಖಂಡಿಸಿತ್ತು. ಕತಾರ್‌ಗೆ ಸೌದಿ ತನ್ನ ಸಂಪೂರ್ಣ ಬೆಂಬಲವನ್ನು ಘೋಷಿಸಿತ್ತು. ಕತಾರ್‌ನಲ್ಲಿರುವ ಅಮೆರಿಕದ ನೆಲೆಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿ ಸ್ವೀಕಾರಾರ್ಹವಲ್ಲ ಮತ್ತು ಅದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಸೌದಿ ಹೇಳಿತ್ತು. ಇದಕ್ಕೂ ಮೊದಲು, ರಷ್ಯಾದ ಪರವಾಗಿ ಮೆಡ್ವೆಡೆವ್, ರಷ್ಯಾ ಇರಾನ್‌ಗೆ ಪರಮಾಣು ಶಸ್ತ್ರಾಸ್ತ್ರಗಳನ್ನು ನೀಡುವ ಉದ್ದೇಶವನ್ನು ಹೊಂದಿಲ್ಲ, ಆದರೆ ಇತರ ದೇಶಗಳು ಅವುಗಳನ್ನು ನೀಡಬಹುದು ಎಂದು ಹೇಳಿದ್ದರು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್