ಬಳ್ಳಾರಿ. ಸೆ. 15:.ಭಕ್ತಿಯೊಂದಿಗೆ ಪ್ರಕೃತಿಯನ್ನು ಎಲ್ಲರೂ ಗೌರವಿಸಬೇಕು. ಮಣ್ಣಿನ ಗಣೇಶ ಮೂರ್ತಿಗಳನ್ನು ಬಳಸುವ ಮೂಲಕ ಜಲಮೂಲಗಳನ್ನು ಸಂರಕ್ಷಿಸೋಣ ಹಾಗೂ ಪರಿಸರ ಮಾಲಿನ್ಯವನ್ನು ತಡೆಯೋಣ ಎಂದು ಶ್ರೀ ವಾಸವಿ ಎಜ್ಯುಕೇಶನ್ ಟ್ರಸ್ಟ್ ನ ಗೌರವಾನ್ವಿತ ಅಧ್ಯಕ್ಷರಾದ ಜಯಪ್ರಕಾಶ ಜೆ. ಗುಪ್ತರವರು ಕರೆ ನೀಡಿದರು .
ಅವರು ನಗರದ ಶ್ರೀವಾಸವಿ ವಿದ್ಯಾಲಯದಲ್ಲಿ ನಡೆದ ಗಣೇಶ ಚತುರ್ಥಿಯ ಸಂಭ್ರಮದಲ್ಲಿ ಮುಖ್ಯ ಅಥಿತಿಗಳಾಗಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ,
ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮಹತ್ವ ಮತ್ತು ಮಣ್ಣಿನ ಗಣೇಶ ಮೂರ್ತಿಗಳನ್ನು ಬಳಸುವುದರಿಂದ ಜಲಮಾಲಿನ್ಯವನ್ನು ಕಡಿಮೆ ಮಾಡಬಹುದು ಹಾಗೂ ನಮ್ಮ ಪರಿಸರವನ್ನು ಸಂರಕ್ಷಿಸಬಹುದು. ಹಬ್ಬವನ್ನು ಸಂಭ್ರಮದಿಂದ ಆಚರಿಸುವುದರ ಜೊತೆಗೆ ಪ್ರಕೃತಿಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು. A
ವಿದ್ಯಾರ್ಥಿಗಳು ತಮ್ಮ ಕಲ್ಪನಾ ಶಕ್ತಿ ಹಾಗೂ ಕಲಾತ್ಮಕ ಪ್ರತಿಭೆಯಿಂದ ವಿವಿಧ ರೀತಿಯ ಆಕರ್ಷಕ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ನಿರ್ಮಿಸಿ ಪ್ರದರ್ಶಿಸಿದರು. ಈ ವಿನೂತನ ಪ್ರಯತ್ನವು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿತು. ಇದರ ಮೂಲಕ ಪ್ರಕೃತಿಯ ಸಂರಕ್ಷಣೆ, ನೀರಿನ ಮೂಲಗಳ ಕಾಳಜಿ ಹಾಗೂ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಹಬ್ಬಗಳನ್ನು ಆಚರಿಸುವ ಮಹತ್ವವನ್ನು ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು.
ಶಿಕ್ಷಣ ಇಲಾಖೆ ಹಾಗೂ ಇಂದಿರಾ ನಗರ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ 2026-27 ರಲ್ಲಿ ಬಾಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಅತಿಥಿಗಳು ಅಭಿನಂದಿಸಿ, ಪ್ರಮಾಣಪತ್ರ ಹಾಗೂ ಪದಕಗಳನ್ನು ನೀಡಿ ಗೌರವಿಸಲಾಯಿತು.
ಶ್ರೀ ವಾಸವಿ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ವಿಠ್ಠ ಕೃಷ್ಣಕುಮಾರ್, ಕಾರ್ಯದರ್ಶಿಗಳಾದ ಪಿ.ಎನ್. ಸುರೇಶ್ ಮುಖ್ಯೋಪಾಧ್ಯಾಯರಾದ ವಿರೇಶ್ ಯು., ಸಿಬ್ಬಂಧಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
8ನೇ ತರಗತಿ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆಯನ್ನು ಸಲ್ಲಿಸಿದರು. ಎ. ಸಿ. ಸಿಂಚನ ಸ್ವಾಗತಿಸಿದರು, ಕಾರ್ತಿಕಾ ವಂದನಾರ್ಪಾಣೆಯನ್ನು ನೆರವೇರಿಸಿದರು ಮನಸ್ವಿನಿ ಕಾರ್ಯಕ್ರಮದ ನಿರೂಪಣೆಯನ್ನು ನಿರ್ವಹಿಸಿದರು.
ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಸಾಮಾಜಿಕ ಜವಾಬ್ದಾರಿ ಹಾಗೂ ಪರಿಸರ ಸ್ನೇಹಿ ಹಬ್ಬಗಳ ಆಚರಣೆಯ ಕುರಿತು ಜಾಗೃತಿ ಮೂಡಿಸುವ ಸಾಂಸ್ಕೃತಿಕ ನೃತ್ಯಗಳನ್ನು ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು .