Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಗಣತಿ ಅಭಿಯಾನ: ಜಿಲ್ಲಾ ನ್ಯಾಯಾಧೀಶೆ ಕೆ.ಜಿ. ಶಾಂತಿ ಅವರಿಂದ ಸ್ವಯಂ ಗಣತಿ





ಬಳ್ಳಾರಿ,ಏ.10 ಭಾರತ ಸರ್ಕಾರದ ಮಹತ್ವದ ಯೋಜನೆಯಾದ ‘ಜನಗಣತಿ' ಪ್ರಕ್ರಿಯೆಯು ಅತ್ಯಂತ ಯಶಸ್ವಿಯಾಗಿ ಆರಂಭಗೊAಡಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು, ಬುಧವಾರ ಜಿಲ್ಲಾ ನ್ಯಾಯಾಲಯದ ತಮ್ಮ ಕಚೇರಿಯಲ್ಲಿ ‘ಸ್ವಯಂ ಗಣತಿ' ಮಾಡುವ ಮೂಲಕ ಸಾರ್ವಜನಿಕರಿಗೆ ಮಾದರಿಯಾದರು.
ಈ ಬಾರಿಯ ಜನಗಣತಿಯಲ್ಲಿ ಡಿಜಿಟಲ್ ಪದ್ಧತಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ನ್ಯಾಯಾಧೀಶರು ಜನಗಣತಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ತಮ್ಮ ವಿವರಗಳನ್ನು ತಾವೇ ಆನ್‌ಲೈನ್‌ನಲ್ಲಿ ದಾಖಲಿಸಿದರು.
ದೇಶದ ಅಭಿವೃದ್ಧಿ ಮತ್ತು ಭವಿಷ್ಯದ ಯೋಜನೆಗಳ ರೂಪಿಸುವಲ್ಲಿ ಜನಗಣತಿಯು ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬ ನಾಗರಿಕರು ಯಾವುದೇ ತಪ್ಪು ಮಾಹಿತಿಯನ್ನು ನೀಡದೆ, ನಿಖರವಾದ ವಿವರಗಳನ್ನು ಒದಗಿಸುವುದು ಕರ್ತವ್ಯವಾಗಿದೆ ಎಂದು ಹೇಳಿದರು.
ಡಿಜಿಟಲ್ ಗಣತಿಯಿಂದ ಸಮಯ ಉಳಿತಾಯವಾಗುವುದಲ್ಲದೆ, ದತ್ತಾಂಶದ ನಿಖರತೆ ಹೆಚ್ಚುತ್ತದೆ. ಸಾರ್ವಜನಿಕರು ಆನ್‌ಲೈನ್ ಮೂಲಕ ‘ಸ್ವಯಂ ಗಣತಿ' ಮಾಡಿಕೊಳ್ಳಲು ಮುಕ್ತ ಅವಕಾಶವಿದೆ. ಗಣತಿ ಕಾರ್ಯಕ್ಕೆ ಸಾರ್ವಜನಿಕರು ಪೂರ್ಣ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.
ಇದೇ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಸಹ ಸ್ವಯಂ ಗಣತಿ' ಪ್ರಕ್ರಿಯೆಯಲ್ಲಿ ಭಾಗವಹಿಸಿ ಮಾಹಿತಿ ನೋಂದಾಯಿಸಿದರು.






Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*