Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನರೇಗಾ ಕೂಲಿ ಹೆಚ್ಚಳ: ಏಪ್ರಿಲ್ 1ರಿಂದ ಜಾರಿಗೆ ಕೇಂದ್ರ ಆದೇಶ

ನವದೆಹಲಿ,ಮಾ.29:  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಅಡಿಯಲ್ಲಿ ಕೌಶಲ್ಯರಹಿತ ಕಾರ್ಮಿಕರಿಗೆ ಪ್ರಸಕ್ತ ಹಣಕಾಸು ವರ್ಷದ ಕೂಲಿಯನ್ನು ಹೆಚ್ಚು ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಸಚಿವಾಲಯವು ಸೂಚಿಸಿರುವ ಹೊಸ ಕೂಲಿಯು ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ.

ಕರ್ನಾಟಕದಲ್ಲಿ ಕೂಲಿ ಶೇ. 10.44ರಷ್ಟು ಪ್ರಮಾಣದಲ್ಲಿರುತ್ತದೆ, ಈಗಿರುವ ದೈನಂದಿನ 316 ರೂ. ಕೂಲಿಯು ಏಪ್ರಿಲ್ 1 ರಿಂದ ಇದು 349ರೂ. ಗೆ ಏರಿಕೆಯಾಗಲಿದೆ. ಅಧಿಸೂಚನೆಯ ಪ್ರಕಾರ, ಹರಿಯಾಣಕ್ಕೆ ಗರಿಷ್ಠ ಕೂಲಿ (ದಿನಕ್ಕೆ 374 ರೂ.) ನಿಗದಿಪಡಿಸಲಾಗಿದೆ, ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ಗೆ ಕನಿಷ್ಠ ಕೂಲಿ (ದಿನಕ್ಕೆ 234 ರೂ.) ಗೊತ್ತುಪಡಿಸಲಾಗಿದೆ.

ಶೇ. 10. 56% ಏರಿಕೆ ಮೂಲಕ ಶೇಕಡವಾರು ಕೂಲಿ ಅಧಿಕದಲ್ಲಿ ಗೋವಾ ನಂ.1 ಸ್ಥಾನದಲ್ಲಿದೆ. ಆದರೆ, ಉತ್ತರಪ್ರದೇಶ ಮತ್ತು ಉತ್ತರಾಖಂಡದಲ್ಲಿ ಶೇ. 3.04ರಷ್ಟು ಮಾತ್ರ ಶೇಕಡವಾರು ಹೆಚ್ಚಾಗಿದೆ.

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ದಿನಕ್ಕೆ 300 ರೂ.ಗೆ ನಿಗದಿಪಡಿಸಲಾಗಿದೆ. ಇದು ಪ್ರಸಕ್ತ ಹಣಕಾಸು ವರ್ಷಕ್ಕೆ 272 ರೂ.ಗೆ ಶೇ.10.29 ಇರುತ್ತದೆ. ಮಧ್ಯಪ್ರದೇಶ ಮತ್ತು ಛತ್ತೀಸಗದಲ್ಲಿ ಶೇ. 10ರಷ್ಟು ಏರಿಕೆಯಾಗಿದೆ. ಉತ್ತರಪ್ರದೇಶ ಮತ್ತು ಉತ್ತರಾಖಂಡಗಳಲ್ಲಿ 230 ರೂ. ಇದ್ದದ್ದು ೨೩೭ ರೂ. ಆಗಲಿದೆ. ಹರಿಯಾಣ, ಅಸ್ಸಾಂ, ಮಣಿಪುರ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ರಾಜಸ್ಥಾನ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಶೇ.5ಕ್ಕಿಂತ ಕಡಿಮೆಯಿದೆ. ಎಲ್ಲ ರಾಜ್ಯಗಳನ್ನು ಪರಿಗಣಿಸಿ ಲೆಕ್ಕ ಹಾಕಿದರೆ ಸರಾಸರಿ ಕೂಲಿ ಶೇ. 7ರಷ್ಟಾಗಿದೆ.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*