Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳುನಾಡು ನೀಟ್​ ವಿನಾಯಿತಿ ಮಸೂದೆ ತಿರಸ್ಕರಿಸಿದ ಕೇಂದ್ರ; ಸ್ಟಾಲಿನ್‌ ಕೆಂಡಾಮಂಡಲ

ಚೆನ್ನೈ, ತಮಿಳುನಾಡು: ನೀಟ್​​ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ)ಗೆ ವಿನಾಯಿತಿ ಕೋರಿ ರಾಜ್ಯ ಸಲ್ಲಿಸಿದ್ದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕಾರ ಮಾಡಿರುವ ಕ್ರಮವನ್ನು ತಮಿಳುನಾಡು ಎಂ.ಕೆ ಸ್ಟಾಲಿನ್​ ತೀವ್ರವಾಗಿ ಖಂಡಿಸಿದ್ದಾರೆ.


ತಮಿಳುನಾಡು ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವೈದ್ಯಕೀಯ ಶಿಕ್ಷಣದಲ್ಲಿ ಸುದೀರ್ಘಕಾಲದಿಂದ ಅತ್ಯುತ್ತಮ ಪ್ರದರ್ಶನ ಹೊಂದಿದೆ. ಕ್ಲಾಸ್​ 12ರ ಅಂಕಗಳ ಆಧಾರದ ಮೇಲೆ ಎಲ್ಲರನ್ನು ಒಳಗೊಳ್ಳುವ ನ್ಯಾಯಸಮ್ಮತ ಪ್ರವೇಶಾತಿ ಪ್ರಕ್ರಿಯೆ ಜಾರಿ ಮಾಡುವಂತೆ ರಾಜ್ಯ ಸರ್ಕಾರ ಒತ್ತಿ ಹೇಳಿದ್ದು, ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಸಮಾನ ಅವಕಾಶದ ಭರವಸೆ ನೀಡಿದೆ. ಈ ವ್ಯವಸ್ಥೆಯನ್ನು ಮಾಜಿ ಸಿಎಂ ಕೆ ಕರುಣಾನಿಧಿ ಪರಿಚಯಿಸಿದ್ದು, ಇದು ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ವೃತ್ತಿಪರರಾಗಲು ಅವಕಾಶ ನೀಡುವ ಜೊತೆಗೆ ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವೈದ್ಯಕೀಯ ಸೌಲಭ್ಯ ಸಿಗುವ ಭರವಸೆ ನೀಡಿತ್ತು.


ಆದರೆ, ನೀಟ್​ ಸಾಮಾಜಿಕ ಮತ್ತು ಆರ್ಥಿಕವಾಗಿ ಬಳಲುವ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ದುಬಾರಿ ಕೋಚಿಂಗ್​ ಶಾಲೆಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ. ಈ ಪರೀಕ್ಷೆಯು ನಗರ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಸೌಲಭ್ಯಗಳನ್ನು ಹೊಂದಿರುವುದರಿಂದ ಅವರಿಗೆ ಮಾತ್ರ ಹೆಚ್ಚಿನ ಅನುಕೂಲ ಮಾಡಿಕೊಡುತ್ತದೆ. ಆದರೆ, ಸೌಲಭ್ಯವಂಚಿತ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಸಿಗದೇ ಹೋಗುತ್ತಿದೆ ಎಂದು ಸ್ಟಾಲಿನ್​ ಹೇಳಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ