LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ತಮಿಳುನಾಡು ನೀಟ್​ ವಿನಾಯಿತಿ ಮಸೂದೆ ತಿರಸ್ಕರಿಸಿದ ಕೇಂದ್ರ; ಸ್ಟಾಲಿನ್‌ ಕೆಂಡಾಮಂಡಲ

ಚೆನ್ನೈ, ತಮಿಳುನಾಡು: ನೀಟ್​​ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ)ಗೆ ವಿನಾಯಿತಿ ಕೋರಿ ರಾಜ್ಯ ಸಲ್ಲಿಸಿದ್ದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕಾರ ಮಾಡಿರುವ ಕ್ರಮವನ್ನು ತಮಿಳುನಾಡು ಎಂ.ಕೆ ಸ್ಟಾಲಿನ್​ ತೀವ್ರವಾಗಿ ಖಂಡಿಸಿದ್ದಾರೆ.


ತಮಿಳುನಾಡು ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವೈದ್ಯಕೀಯ ಶಿಕ್ಷಣದಲ್ಲಿ ಸುದೀರ್ಘಕಾಲದಿಂದ ಅತ್ಯುತ್ತಮ ಪ್ರದರ್ಶನ ಹೊಂದಿದೆ. ಕ್ಲಾಸ್​ 12ರ ಅಂಕಗಳ ಆಧಾರದ ಮೇಲೆ ಎಲ್ಲರನ್ನು ಒಳಗೊಳ್ಳುವ ನ್ಯಾಯಸಮ್ಮತ ಪ್ರವೇಶಾತಿ ಪ್ರಕ್ರಿಯೆ ಜಾರಿ ಮಾಡುವಂತೆ ರಾಜ್ಯ ಸರ್ಕಾರ ಒತ್ತಿ ಹೇಳಿದ್ದು, ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಸಮಾನ ಅವಕಾಶದ ಭರವಸೆ ನೀಡಿದೆ. ಈ ವ್ಯವಸ್ಥೆಯನ್ನು ಮಾಜಿ ಸಿಎಂ ಕೆ ಕರುಣಾನಿಧಿ ಪರಿಚಯಿಸಿದ್ದು, ಇದು ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ವೃತ್ತಿಪರರಾಗಲು ಅವಕಾಶ ನೀಡುವ ಜೊತೆಗೆ ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವೈದ್ಯಕೀಯ ಸೌಲಭ್ಯ ಸಿಗುವ ಭರವಸೆ ನೀಡಿತ್ತು.


ಆದರೆ, ನೀಟ್​ ಸಾಮಾಜಿಕ ಮತ್ತು ಆರ್ಥಿಕವಾಗಿ ಬಳಲುವ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ದುಬಾರಿ ಕೋಚಿಂಗ್​ ಶಾಲೆಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ. ಈ ಪರೀಕ್ಷೆಯು ನಗರ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಸೌಲಭ್ಯಗಳನ್ನು ಹೊಂದಿರುವುದರಿಂದ ಅವರಿಗೆ ಮಾತ್ರ ಹೆಚ್ಚಿನ ಅನುಕೂಲ ಮಾಡಿಕೊಡುತ್ತದೆ. ಆದರೆ, ಸೌಲಭ್ಯವಂಚಿತ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಸಿಗದೇ ಹೋಗುತ್ತಿದೆ ಎಂದು ಸ್ಟಾಲಿನ್​ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್