ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಪ್ರಮೋದಾ ದೇವಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೊಸ ಕಾಯ್ದೆಯ ಸೆಕ್ಷನ್ 16 ಪ್ರಾಧಿಕಾರದ ಅಧ್ಯಕ್ಷರಾದ ಮುಖ್ಯಮಂತ್ರಿಗಳಿಗೆ ಸಭೆಯನ್ನು ನಡೆಸದೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಅಧಿಕಾರ ನೀಡುತ್ತದೆ. ಇದನ್ನು ಪ್ರಮೋದಾ ದೇವಿ ಪ್ರಶ್ನಿಸಿದ್ದಾರೆ.
ಅಂತೆಯೇ, ಸೆಕ್ಷನ್ 17 ರ ಅಡಿಯಲ್ಲಿ ಅಧ್ಯಕ್ಷರು ಸಭೆಯನ್ನು ನಡೆಸದೆ ಅಥವಾ ಸದಸ್ಯರ ನಡುವೆ ವಿಷಯವನ್ನು ಚರ್ಚಿಸದೆ ತುರ್ತು ಸಂದರ್ಭಗಳಲ್ಲಿ ಆದೇಶಗಳನ್ನು ಹೊರಡಿಸಲು ಅಧಿಕಾರವನ್ನು ನೀಡುತ್ತದೆ. ಇಂಥ ಪರಿಸ್ಥಿತಿಯಲ್ಲಿ ಪ್ರಾಧಿಕಾರದ ಸಭೆಯಲ್ಲಿ ಅಂತಹ ಆದೇಶಗಳನ್ನು ಮಂಡಿಸಿ ವಾಸ್ತವಿಕ ಅನುಮೋದನೆ ಪಡೆದುಕೊಳ್ಳಲಾಗುತ್ತದೆ.