Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧ್ಯಕ್ಷರಾಗಿ ಚನ್ನರಾಜ ಹಟ್ಟಿಹೊಳಿ ಅವಿರೋಧ ಆಯ್ಕೆ





ಬೆಳಗಾವಿ:  ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಉಪಾಧ್ಯಕ್ಷರಾಗಿ ಶಿವನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.

          ಗುರುವಾರ ಕಾರ್ಖಾನೆ ಕಾರ್ಯಾಲಯದಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ ಎರಡೂ ಸ್ಥಾನಕ್ಕೆ ಒಂದೊಂದು ನಾಮಪತ್ರಗಳು ಮಾತ್ರ ಸಲ್ಲಿಕೆಯಾಗಿದ್ದರಿಂದ, ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಗಳಾಗಿ ಪ್ರಭಾವತಿ ಫಕ್ಕೀರಪುರ ಕಾರ್ಯನಿರ್ವಹಿಸಿದರು. ಕಳೆದ ಸೆ.೨೮ರಂದು ಕಾರ್ಖಾನೆ ಆಡಳಿತ ಮಂಡಳಿ ನಿರ್ದೇಶಕರ ೧೫ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ನೇತೃತ್ವದ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಪುನಶ್ಚೇತನ ಪೆನಲ್ ಎಲ್ಲ ೧೫ ಜನ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.

       ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಕಾರ್ಖಾನೆ ನೂತನ ಅಧ್ಯಕ್ಷ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ನಷ್ಟದಲ್ಲಿರುವ ಕಾರ್ಖಾನೆ ಪುನಶ್ಚೇತನ ಮಾಡುವುದೊಂದೆ ನಮ್ಮ ಗುರಿ. ಪ್ರಸಕ್ತ ಸಾಲಿನ ಹಂಗಾಮಿನಲ್ಲಿ ೪ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿ, ಕಾರ್ಖಾನೆ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಈಗಾಗಲೇ ೨೫೦ ಕಬ್ಬು ಕಟಾವು ತಂಡಗಳನ್ನು ಕಾಯ್ದಿರಿಸಿದ್ದೇವೆ. ರೈತರು ಪೂರೈಸುವ ಕಬ್ಬಿಗೆ ಸಮಯಕ್ಕೆ ಸರಿಯಾಗಿ ಯೋಗ್ಯದರ ನೀಡುತ್ತೇವೆಂದು ಭರವಸೆ ನೀಡಿದರು.


ನಮ್ಮ ಮೇಲೆ ಸವಾಲುಗಳ ಗುಡ್ಡವೇ ಇದೆ. ಎಲ್ಲ ೧೫ ಜನ ನಿರ್ದೇಶಕರು ಸಮಾನರಾಗಿ ಶ್ರಮಿಸುತ್ತೇವೆ. ದೀಪಾವಳಿಗೆ ಕಾರ್ಖಾನೆ ಹಂಗಾಮು ಆರಂಭಿಸುತ್ತೇವೆ. ಕಾರ್ಖಾನೆ ಸಿದ್ಧಗೊಳಿಸಲು ಕಾರ್ಮಿಕರೆಲ್ಲ ಶ್ರಮಿಸುತ್ತಿದ್ದಾರೆಂದರು.


ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಾಸಕರಾದ ಬಾಬಾಸಾಹೇಬ ಪಾಟೀಲ, ವಿಠ್ಠಲ ಹಲಗೇಕರ್ ಮಾರ್ಗದರ್ಶನದಲ್ಲಿ ಕಾರ್ಖಾನೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತೇವೆಂದರು.

       ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿ, ಕಾರ್ಖಾನೆ ಉಳಿಸಿ-ಬೆಳೆಸುತ್ತಾರೆಂಬ ನಂಬಿಕೆಯಿಂದ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಪುನಶ್ಚೇತನ ಪೆನಲ್‌ಗೆ ರೈತರು ಬೆಂಬಲಿಸಿ, ಎಲ್ಲ ೧೫ ಜನರನ್ನು ಆರಿಸಿ ತಂದಿದ್ದಾರೆ. ರೈತರು ಇಟ್ಟ ನಂಬಿಕೆಗೆ ದ್ರೋಹ ಆಗದಂತೆ ಕಾರ್ಖಾನೆ ಅಭಿವೃದ್ಧಿ ಪಡಿಸುವ ಜವಾಬ್ದಾರಿ ಎಲ್ಲ ೧೫ ಜನ ನಿರ್ದೇಶಕರ ಮೇಲಿದೆ. ಕಾರ್ಖಾನೆ ಅಭಿವೃದ್ಧಿ ಕನಸು ಹೊತ್ತು ಬಂದವರು ಇವರು. ಪಾರದರ್ಶಕ ಆಡಳಿತದ ಮೂಲಕ ನೂತನ ದಿಗ್ದರ್ಶಕ ಮಂಡಳಿ ಕಾರ್ಖಾನೆಗೆ ಮೊದಲಿನ ಗತವೈಭವ ಮರಳಿಸಲಿದೆ ಎಂದರು.

          ಕಾರ್ಖಾನೆ ಉಪಾಧ್ಯಕ್ಷ ಶಿವನಗೌಡ ಪಾಟೀಲ, ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಮೋಹನ ಹಿರೇಮಠ ಮಾತನಾಡಿದರು. ನಿರ್ದೇಶಕರಾದ ಫಕ್ಕೀರಪ್ಪ ಸಕ್ರೆಣ್ಣವರ, ಶಂಕರೆಪ್ಪ ಹೊಳಿ, ಶ್ರೀಕಾಂತ ಇಟಗಿ, ಶಂಕರ ಕಿಲ್ಲೇದಾರ, ಶ್ರೀಶೈಲ ತುರಮರಿ, ರಾಮನಗೌಡ ಪಾಟೀಲ, ರಘು ಪಾಟೀಲ, ಶಿವಪುತ್ರಪ್ಪ ಮರಡಿ, ಸುರೇಶ ಹುಲಿಕಟ್ಟಿ, ಲಲಿತಾ ಪಾಟೀಲ, ಸುನೀತಾ ಲಂಗೋಟಿ, ಬಳಪ್ಪ ಪೂಜಾರ, ಭರಮಪ್ಪ ಶಿಗೆಹಳ್ಳಿ ಹಾಗೂ ರೈತರು, ಕಾರ್ಮಿಕರು, ಅಭಿಮಾನಿಗಳು ಇದ್ದರು.

ದಿಗ್ದರ್ಶಕ ಮಂಡಳಿಯ ಎಲ್ಲರನ್ನೂ ವೇದಿಕೆಯಲ್ಲಿ ಸನ್ಮಾನಿಸಲಾಯಿತು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ