Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎನ್‌ಎಸ್‌ಎಸ್ ಯುವಕರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದೆ : ಚರಂತಿಮಠ

ಹುನಗುಂದ; ಎನ್‌ಎಸ್‌ಎಸ್ ಯುವಕರನ್ನು ಸಮಾಜ ಸೇವೆಯತ್ತ ಕರೆದೊಯ್ಯುವುದರ ಮೂಲಕ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದೆ ಎಂದು ವಿ. ಮ.ವಿ.ವ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣಸಿ. ಚರಂತಿಮಠ ಹೇಳಿದರು.

ತಾಲೂಕಿನ ಐಹೊಳೆ ಗ್ರಾಮದಲ್ಲಿ ಹುನಗುಂದದ ವಿ.ಎಂ.ಕೆ.ಎಸ್.ಆರ್.ವಸ್ತ್ರದ ಕಲಾ. ವಿಜ್ಞಾನ ಹಾಗೂ ವಿ.ಎಸ್.ಬೆಳ್ಳಿಹಾಳ ವಾಣಿಜ್ಯ ಮಹಾವಿದ್ಯಾಲಯದ ಎನ್.ಎಸ್. ಎಸ್. ಘಟಕದ ವತಿಯಿಂದ ಆಯೋಜಿಸಿದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಸೇವಾ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ನಮ್ಮ ದೇಶದ ಯುವಕರು ಸಮಾಜದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಆರಂಭಿಸಲಾಗಿದೆ. ಸೇವಾ ಮನೋಭಾವನೆಯಿಂದ ಕೆಲಸ ಮಾಡಿದರೆ ಮಾತ್ರ ಸಮಾಜದಲ್ಲಿ ನಿರೀಕ್ಷಿತ ಬದಲಾವಣೆ ತರಲು ಸಾಧ್ಯ. ಶಿಬಿರದ ಏಳು ದಿನಗಳವರೆಗೆ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮದ ಸ್ವಚ್ಛತೆ, ಪರಿಸರ ಸಂರಕ್ಷಣೆ, ಆರೋಗ್ಯ ಜಾಗೃತಿ, ಆತ್ಮನಿರ್ಬರ ಭಾರತದ ಜಾಗೃತಿ ಮುಂತಾದ ಅಭಿಯಾನಗಳನ್ನು ಆಯೋಜಿಸಿ ಜನರಲ್ಲಿ ದೇಶದ ಪ್ರಗತಿಯ ಅರಿವನ್ನು ಮೂಡಿಸಿದ್ದಾರೆ ಎಂದರು.

ವಿ.ಮ.ವಿ.ವ. ಸಂಘದ ಗೌರವ ಕಾರ್ಯದರ್ಶಿ ಡಾ. ಮಹಾಂತೇಶ ಕಡಪಟ್ಟಿಯವರು ಮಾತನಾಡಿ ವಿದ್ಯಾರ್ಥಿಗಳು ಜ್ಞಾನ ಪಡೆದರೆ ಸಾಲದು, ಪಡೆದ ಜ್ಞಾನ ಸಮಾಜಕ್ಕೆ ಸ್ಪಂದಿಸುವಂತಿರಬೇಕು. ದೇಶವನ್ನು ಕಟ್ಟಲು ಬೇಕಾದ ಅರಿವನ್ನು ಈ ಎನ್.ಎಸ್.ಎಸ್ ಕಲಿಸುತ್ತದೆ.
ಕಾಳಿದಾಸ ಸಹಕಾರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಿ.ಸಿ.ಆಂಟರತಾನಿ ಯುವಶಕ್ತಿ ರಾಷ್ಟ್ರದ ಶಕ್ತಿ ಎಂಬುದನ್ನು ತಾವು ಮಾಡುವ ಕೆಲಸ ಕಾರ್ಯಗಳಿಂದ ಎನ್.ಎಸ್.ಎಸ್. ಶಿಬಿರಾರ್ಥಿಗಳು ನಮ್ಮ ಗ್ರಾಮದ ಜನರಲ್ಲಿ ಅರಿವನ್ನುಂಟು ಮಾಡಿದ್ದಾರೆ ಎಂದರು. ಸಂಘದ ಹಿರಿಯ ನಿರ್ದೇಶಕ ಬಿ.ಎಸ್.ಕೆಂದೂರ, ಪ್ರೌಢಶಾಲೆ ಮುಖ್ಯೋಪಾಧ್ಯಾಯ ವಾಯ್.ಕೆ.ವಾಲಿಕಾರ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ. ಎಸ್.ಆರ್. ನಾಗಣ್ಣವರ ಉಪಸ್ಥಿತರಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ