Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎನ್‌ಎಸ್‌ಎಸ್ ಯುವಕರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದೆ : ಚರಂತಿಮಠ

ಹುನಗುಂದ; ಎನ್‌ಎಸ್‌ಎಸ್ ಯುವಕರನ್ನು ಸಮಾಜ ಸೇವೆಯತ್ತ ಕರೆದೊಯ್ಯುವುದರ ಮೂಲಕ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದೆ ಎಂದು ವಿ. ಮ.ವಿ.ವ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣಸಿ. ಚರಂತಿಮಠ ಹೇಳಿದರು.

ತಾಲೂಕಿನ ಐಹೊಳೆ ಗ್ರಾಮದಲ್ಲಿ ಹುನಗುಂದದ ವಿ.ಎಂ.ಕೆ.ಎಸ್.ಆರ್.ವಸ್ತ್ರದ ಕಲಾ. ವಿಜ್ಞಾನ ಹಾಗೂ ವಿ.ಎಸ್.ಬೆಳ್ಳಿಹಾಳ ವಾಣಿಜ್ಯ ಮಹಾವಿದ್ಯಾಲಯದ ಎನ್.ಎಸ್. ಎಸ್. ಘಟಕದ ವತಿಯಿಂದ ಆಯೋಜಿಸಿದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಸೇವಾ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ನಮ್ಮ ದೇಶದ ಯುವಕರು ಸಮಾಜದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಆರಂಭಿಸಲಾಗಿದೆ. ಸೇವಾ ಮನೋಭಾವನೆಯಿಂದ ಕೆಲಸ ಮಾಡಿದರೆ ಮಾತ್ರ ಸಮಾಜದಲ್ಲಿ ನಿರೀಕ್ಷಿತ ಬದಲಾವಣೆ ತರಲು ಸಾಧ್ಯ. ಶಿಬಿರದ ಏಳು ದಿನಗಳವರೆಗೆ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮದ ಸ್ವಚ್ಛತೆ, ಪರಿಸರ ಸಂರಕ್ಷಣೆ, ಆರೋಗ್ಯ ಜಾಗೃತಿ, ಆತ್ಮನಿರ್ಬರ ಭಾರತದ ಜಾಗೃತಿ ಮುಂತಾದ ಅಭಿಯಾನಗಳನ್ನು ಆಯೋಜಿಸಿ ಜನರಲ್ಲಿ ದೇಶದ ಪ್ರಗತಿಯ ಅರಿವನ್ನು ಮೂಡಿಸಿದ್ದಾರೆ ಎಂದರು.

ವಿ.ಮ.ವಿ.ವ. ಸಂಘದ ಗೌರವ ಕಾರ್ಯದರ್ಶಿ ಡಾ. ಮಹಾಂತೇಶ ಕಡಪಟ್ಟಿಯವರು ಮಾತನಾಡಿ ವಿದ್ಯಾರ್ಥಿಗಳು ಜ್ಞಾನ ಪಡೆದರೆ ಸಾಲದು, ಪಡೆದ ಜ್ಞಾನ ಸಮಾಜಕ್ಕೆ ಸ್ಪಂದಿಸುವಂತಿರಬೇಕು. ದೇಶವನ್ನು ಕಟ್ಟಲು ಬೇಕಾದ ಅರಿವನ್ನು ಈ ಎನ್.ಎಸ್.ಎಸ್ ಕಲಿಸುತ್ತದೆ.
ಕಾಳಿದಾಸ ಸಹಕಾರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಿ.ಸಿ.ಆಂಟರತಾನಿ ಯುವಶಕ್ತಿ ರಾಷ್ಟ್ರದ ಶಕ್ತಿ ಎಂಬುದನ್ನು ತಾವು ಮಾಡುವ ಕೆಲಸ ಕಾರ್ಯಗಳಿಂದ ಎನ್.ಎಸ್.ಎಸ್. ಶಿಬಿರಾರ್ಥಿಗಳು ನಮ್ಮ ಗ್ರಾಮದ ಜನರಲ್ಲಿ ಅರಿವನ್ನುಂಟು ಮಾಡಿದ್ದಾರೆ ಎಂದರು. ಸಂಘದ ಹಿರಿಯ ನಿರ್ದೇಶಕ ಬಿ.ಎಸ್.ಕೆಂದೂರ, ಪ್ರೌಢಶಾಲೆ ಮುಖ್ಯೋಪಾಧ್ಯಾಯ ವಾಯ್.ಕೆ.ವಾಲಿಕಾರ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ. ಎಸ್.ಆರ್. ನಾಗಣ್ಣವರ ಉಪಸ್ಥಿತರಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ