Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳ ತಿನಿಸುಗಳಲ್ಲಿ ರಾಸಾಯನಿಕ ಬಳಕೆ; ಟೆಸ್ಟ್‌ಗೆ ಸರ್ಕಾರ ಕ್ರಮ

ಬೆಂಗಳೂರು, ಮೇ 06: ಚಾಕೊಲೇಟ, ಪೆಪ್ಪರಮೆಂಟ್​​, ಜೇಮ್ಸ್ ಮತ್ತು ಜೆಲ್ಲಿಸ್​​ ಮಕ್ಕಳಿಗೆ ಬಲು ಇಷ್ಟ. ಒಂದು ಪಕ್ಷ ಮಕ್ಕಳು ಊಟ ಬೇಕಾದರೂ ಬಿಡುತ್ತಾರೆ, ಇವುಗಳನ್ನು ತಿನ್ನುವುದು ಮಾತ್ರ ಬಿಡುವುದಿಲ್ಲ. ಆದರೆ ಇವುಗಳನ್ನು ಮಕ್ಕಳಿಗೆ ನೀಡುವುದಕ್ಕೂ ಮುಂಚೆ ಆಹಾರ ಇಲಾಖೆ  ಪೋಷಕರಿಗೆ ಎಚ್ಚರಿಕೆ ನೀಡಿದೆ. ಚಾಕೊಲೇಟ್, ಪೆಪ್ಪರಮೆಂಟ್​​, ಜೇಮ್ಸ್ ಮತ್ತು ಜೆಲ್ಲಿಸ್​​ಗಳಲ್ಲಿ ಕೃತಕ ಕಲರ್ ಹಾಗೂ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ ಕೇಳಿಬಂದಿದ್ದು, ಟೆಸ್ಟ್ ಮಾಡಲು ಮುಂದಾಗಿದೆ.

ಮಕ್ಕಳ ಅಚ್ಚುಮೆಚ್ಚಿನ ಚಾಕೊಲೇಟ್, ಪೆಪ್ಪರಮೆಂಟ್​​, ಜೇಮ್ಸ್ ಮತ್ತು ಜೆಲ್ಲಿಸ್​ಗಳಲ್ಲಿ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ ಕೇಳಿಬಂದಿದೆ. ಇವುಗಳ ಸೇವನೆಯಿಂದ ಕ್ಯಾನ್ಸರ್ ಸಹಿತ ಅಪಾಯಕಾರಿ ಕಾಯಿಲೆಗಳಿಗೆ ದಾರಿ ಮಾಡಿಕೊಡುವುದಲ್ಲದೇ, ಮಕ್ಕಳ ಆರೋಗ್ಯಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಈ ಬಗ್ಗೆ ಕೇಂದ್ರ ಎಫ್​​ಎಸ್​ಎಸ್​​ಎಐ ಸೂಚನೆ ಬೆನ್ನಲೆ ರಾಜ್ಯದಲ್ಲಿ ಆಹಾರ ಇಲಾಖೆ ಅಲರ್ಟ್ ಆಗಿದ್ದು, ಸ್ಯಾಂಪಲ್ಸ್ ಪಡೆದು ಆಹಾರ ಇಲಾಖೆಯ ಲ್ಯಾಬ್​ಗಳಲ್ಲಿ ಟೆಸ್ಟ್​​ಗೆ ಒಳಪಡಿಸಲು ಮುಂದಾಗಿದೆ.

ಪೆಪ್ಪರಮೆಂಟ್​​, ಜೇಮ್ಸ್ ಮತ್ತು ಜೆಲ್ಲಿಸ್​​ಗಳಲ್ಲಿ ಕೃತಕ ಕಲರ್ ಬಳಕೆ ಮಾಡುತ್ತಿದ್ದು, ತಯಾರಿಕಾ ಘಟಕಗಳಲ್ಲಿ ಸ್ವಚ್ಛತೆ ಇರಲ್ಲ ಎನ್ನಲಾಗುತ್ತಿದೆ. ಚಾಕೊಲೇಟ್​ಗಳ ತಯಾರಿಕೆಯಲ್ಲಿ ಕೆಲವು ರಾಸಾಯನಿಕಗಳ ಬಳಕೆ ಬಗ್ಗೆ ಕೂಡ ದೂರುಗಳು ಬಂದಿವೆ. ಹೀಗಾಗಿ ಆಹಾರ ಇಲಾಖೆ ರಾಜ್ಯದಲ್ಲಿ ಸ್ಯಾಂಪಲ್ಸ್​ ಪಡೆಯಲು ಮುಂದಾಗಿದೆ.​ ಅಷ್ಟೇ ಅಲ್ಲದೆ ವಿದೇಶದಿಂದ ಆಮದು ಆಗುವ ಪದಾರ್ಥಗಳನ್ನು ಟೆಸ್ಟ್ ಮಾಡಲು ಮುಂದಾಗಿದ್ದು, ಅಸುರಕ್ಷಿತ ಪದಾರ್ಥಗಳ ಮೇಲೂ ಕ್ರಮಕ್ಕೆ ಆಹಾರ ಇಲಾಖೆ ಪ್ಲಾನ್ ಮಾಡಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ