LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Health & Fitness

ಮಕ್ಕಳ ತಿನಿಸುಗಳಲ್ಲಿ ರಾಸಾಯನಿಕ ಬಳಕೆ; ಟೆಸ್ಟ್‌ಗೆ ಸರ್ಕಾರ ಕ್ರಮ

ಬೆಂಗಳೂರು, ಮೇ 06: ಚಾಕೊಲೇಟ, ಪೆಪ್ಪರಮೆಂಟ್​​, ಜೇಮ್ಸ್ ಮತ್ತು ಜೆಲ್ಲಿಸ್​​ ಮಕ್ಕಳಿಗೆ ಬಲು ಇಷ್ಟ. ಒಂದು ಪಕ್ಷ ಮಕ್ಕಳು ಊಟ ಬೇಕಾದರೂ ಬಿಡುತ್ತಾರೆ, ಇವುಗಳನ್ನು ತಿನ್ನುವುದು ಮಾತ್ರ ಬಿಡುವುದಿಲ್ಲ. ಆದರೆ ಇವುಗಳನ್ನು ಮಕ್ಕಳಿಗೆ ನೀಡುವುದಕ್ಕೂ ಮುಂಚೆ ಆಹಾರ ಇಲಾಖೆ  ಪೋಷಕರಿಗೆ ಎಚ್ಚರಿಕೆ ನೀಡಿದೆ. ಚಾಕೊಲೇಟ್, ಪೆಪ್ಪರಮೆಂಟ್​​, ಜೇಮ್ಸ್ ಮತ್ತು ಜೆಲ್ಲಿಸ್​​ಗಳಲ್ಲಿ ಕೃತಕ ಕಲರ್ ಹಾಗೂ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ ಕೇಳಿಬಂದಿದ್ದು, ಟೆಸ್ಟ್ ಮಾಡಲು ಮುಂದಾಗಿದೆ.

ಮಕ್ಕಳ ಅಚ್ಚುಮೆಚ್ಚಿನ ಚಾಕೊಲೇಟ್, ಪೆಪ್ಪರಮೆಂಟ್​​, ಜೇಮ್ಸ್ ಮತ್ತು ಜೆಲ್ಲಿಸ್​ಗಳಲ್ಲಿ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ ಕೇಳಿಬಂದಿದೆ. ಇವುಗಳ ಸೇವನೆಯಿಂದ ಕ್ಯಾನ್ಸರ್ ಸಹಿತ ಅಪಾಯಕಾರಿ ಕಾಯಿಲೆಗಳಿಗೆ ದಾರಿ ಮಾಡಿಕೊಡುವುದಲ್ಲದೇ, ಮಕ್ಕಳ ಆರೋಗ್ಯಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಈ ಬಗ್ಗೆ ಕೇಂದ್ರ ಎಫ್​​ಎಸ್​ಎಸ್​​ಎಐ ಸೂಚನೆ ಬೆನ್ನಲೆ ರಾಜ್ಯದಲ್ಲಿ ಆಹಾರ ಇಲಾಖೆ ಅಲರ್ಟ್ ಆಗಿದ್ದು, ಸ್ಯಾಂಪಲ್ಸ್ ಪಡೆದು ಆಹಾರ ಇಲಾಖೆಯ ಲ್ಯಾಬ್​ಗಳಲ್ಲಿ ಟೆಸ್ಟ್​​ಗೆ ಒಳಪಡಿಸಲು ಮುಂದಾಗಿದೆ.

ಪೆಪ್ಪರಮೆಂಟ್​​, ಜೇಮ್ಸ್ ಮತ್ತು ಜೆಲ್ಲಿಸ್​​ಗಳಲ್ಲಿ ಕೃತಕ ಕಲರ್ ಬಳಕೆ ಮಾಡುತ್ತಿದ್ದು, ತಯಾರಿಕಾ ಘಟಕಗಳಲ್ಲಿ ಸ್ವಚ್ಛತೆ ಇರಲ್ಲ ಎನ್ನಲಾಗುತ್ತಿದೆ. ಚಾಕೊಲೇಟ್​ಗಳ ತಯಾರಿಕೆಯಲ್ಲಿ ಕೆಲವು ರಾಸಾಯನಿಕಗಳ ಬಳಕೆ ಬಗ್ಗೆ ಕೂಡ ದೂರುಗಳು ಬಂದಿವೆ. ಹೀಗಾಗಿ ಆಹಾರ ಇಲಾಖೆ ರಾಜ್ಯದಲ್ಲಿ ಸ್ಯಾಂಪಲ್ಸ್​ ಪಡೆಯಲು ಮುಂದಾಗಿದೆ.​ ಅಷ್ಟೇ ಅಲ್ಲದೆ ವಿದೇಶದಿಂದ ಆಮದು ಆಗುವ ಪದಾರ್ಥಗಳನ್ನು ಟೆಸ್ಟ್ ಮಾಡಲು ಮುಂದಾಗಿದ್ದು, ಅಸುರಕ್ಷಿತ ಪದಾರ್ಥಗಳ ಮೇಲೂ ಕ್ರಮಕ್ಕೆ ಆಹಾರ ಇಲಾಖೆ ಪ್ಲಾನ್ ಮಾಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉತ್ತರ ಕರ್ನಾಟಕದಿಂದಲೇ ಸರ್ಕಾರಕ್ಕೆ ತಕ್ಕ ಉತ್ತರ ಕೊಡುತ್ತೇವೆ : ಭೀಮಪ್ಪ ಗಡಾದ ಧರ್ಮಸ್ಥಳ ಗ್ರಾಮೀಣ ಸಂಘದಿಂದ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಇಂಡಿ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ: ಝಳಕಿ ಹೆದ್ದಾರಿಯಲ್ಲಿ ರೈತರ ಬೃಹತ್ ಪ್ರತಿಭಟನೆಸೆ.೬ರಂದು ಶ್ರೀ ಉಳವೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವಶ್ರೀ ಎಚ್.ಎಸ್. ಪಾಟೀಲ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಐನಾಪುರ: ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಕರ ಸಂಘದಿಂದ ಬೃಹತ್ ರಕ್ತದಾನ ಶಿಬಿರಶಾಸಕ ಬಾಬಾಸಾಹೇಬ ಪಾಟೀಲ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಭೆಹೂವು–ಬೊಕ್ಕೆ ಬದಲು ರಕ್ತದಾನ: ಕಿತ್ತೂರಿನಲ್ಲಿ ವಿಭಿನ್ನ ಶಿಕ್ಷಕರ ದಿನಾಚರಣೆರಾಮದುರ್ಗ: ಅಕ್ರಮ ಗೋಹತ್ಯೆ ತಡೆಗೆ ಆಗ್ರಹಿಸಿ ವಿಎಚ್‌ಪಿ, ಭಜರಂಗದಳದಿಂದ ಮನವಿ89 ಗ್ರಾಮಗಳ ದಾಖಲೆಗಳ ಇಂಡೆಕ್ಸ್, ಕ್ಯಾಟಲಾಗ್ ಸಿದ್ಧತೆ; 80 ಸರ್ವೇಯರ್‌ಗಳಿಂದ ಮೂರು ದಿನಗಳ ಕಾರ್ಯಾಚರಣೆ, ರೈತರಿಗೆ 24 ಗಂಟೆಯೊಳಗೆ ಭೂ ದಾಖಲೆ ಪೂರೈಸುವ ಗುರಿ