Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳ ತಿನಿಸುಗಳಲ್ಲಿ ರಾಸಾಯನಿಕ ಬಳಕೆ; ಟೆಸ್ಟ್‌ಗೆ ಸರ್ಕಾರ ಕ್ರಮ

ಬೆಂಗಳೂರು, ಮೇ 06: ಚಾಕೊಲೇಟ, ಪೆಪ್ಪರಮೆಂಟ್​​, ಜೇಮ್ಸ್ ಮತ್ತು ಜೆಲ್ಲಿಸ್​​ ಮಕ್ಕಳಿಗೆ ಬಲು ಇಷ್ಟ. ಒಂದು ಪಕ್ಷ ಮಕ್ಕಳು ಊಟ ಬೇಕಾದರೂ ಬಿಡುತ್ತಾರೆ, ಇವುಗಳನ್ನು ತಿನ್ನುವುದು ಮಾತ್ರ ಬಿಡುವುದಿಲ್ಲ. ಆದರೆ ಇವುಗಳನ್ನು ಮಕ್ಕಳಿಗೆ ನೀಡುವುದಕ್ಕೂ ಮುಂಚೆ ಆಹಾರ ಇಲಾಖೆ  ಪೋಷಕರಿಗೆ ಎಚ್ಚರಿಕೆ ನೀಡಿದೆ. ಚಾಕೊಲೇಟ್, ಪೆಪ್ಪರಮೆಂಟ್​​, ಜೇಮ್ಸ್ ಮತ್ತು ಜೆಲ್ಲಿಸ್​​ಗಳಲ್ಲಿ ಕೃತಕ ಕಲರ್ ಹಾಗೂ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ ಕೇಳಿಬಂದಿದ್ದು, ಟೆಸ್ಟ್ ಮಾಡಲು ಮುಂದಾಗಿದೆ.

ಮಕ್ಕಳ ಅಚ್ಚುಮೆಚ್ಚಿನ ಚಾಕೊಲೇಟ್, ಪೆಪ್ಪರಮೆಂಟ್​​, ಜೇಮ್ಸ್ ಮತ್ತು ಜೆಲ್ಲಿಸ್​ಗಳಲ್ಲಿ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ ಕೇಳಿಬಂದಿದೆ. ಇವುಗಳ ಸೇವನೆಯಿಂದ ಕ್ಯಾನ್ಸರ್ ಸಹಿತ ಅಪಾಯಕಾರಿ ಕಾಯಿಲೆಗಳಿಗೆ ದಾರಿ ಮಾಡಿಕೊಡುವುದಲ್ಲದೇ, ಮಕ್ಕಳ ಆರೋಗ್ಯಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಈ ಬಗ್ಗೆ ಕೇಂದ್ರ ಎಫ್​​ಎಸ್​ಎಸ್​​ಎಐ ಸೂಚನೆ ಬೆನ್ನಲೆ ರಾಜ್ಯದಲ್ಲಿ ಆಹಾರ ಇಲಾಖೆ ಅಲರ್ಟ್ ಆಗಿದ್ದು, ಸ್ಯಾಂಪಲ್ಸ್ ಪಡೆದು ಆಹಾರ ಇಲಾಖೆಯ ಲ್ಯಾಬ್​ಗಳಲ್ಲಿ ಟೆಸ್ಟ್​​ಗೆ ಒಳಪಡಿಸಲು ಮುಂದಾಗಿದೆ.

ಪೆಪ್ಪರಮೆಂಟ್​​, ಜೇಮ್ಸ್ ಮತ್ತು ಜೆಲ್ಲಿಸ್​​ಗಳಲ್ಲಿ ಕೃತಕ ಕಲರ್ ಬಳಕೆ ಮಾಡುತ್ತಿದ್ದು, ತಯಾರಿಕಾ ಘಟಕಗಳಲ್ಲಿ ಸ್ವಚ್ಛತೆ ಇರಲ್ಲ ಎನ್ನಲಾಗುತ್ತಿದೆ. ಚಾಕೊಲೇಟ್​ಗಳ ತಯಾರಿಕೆಯಲ್ಲಿ ಕೆಲವು ರಾಸಾಯನಿಕಗಳ ಬಳಕೆ ಬಗ್ಗೆ ಕೂಡ ದೂರುಗಳು ಬಂದಿವೆ. ಹೀಗಾಗಿ ಆಹಾರ ಇಲಾಖೆ ರಾಜ್ಯದಲ್ಲಿ ಸ್ಯಾಂಪಲ್ಸ್​ ಪಡೆಯಲು ಮುಂದಾಗಿದೆ.​ ಅಷ್ಟೇ ಅಲ್ಲದೆ ವಿದೇಶದಿಂದ ಆಮದು ಆಗುವ ಪದಾರ್ಥಗಳನ್ನು ಟೆಸ್ಟ್ ಮಾಡಲು ಮುಂದಾಗಿದ್ದು, ಅಸುರಕ್ಷಿತ ಪದಾರ್ಥಗಳ ಮೇಲೂ ಕ್ರಮಕ್ಕೆ ಆಹಾರ ಇಲಾಖೆ ಪ್ಲಾನ್ ಮಾಡಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
" ದೇಶದ ಉನ್ನತ ಹುದ್ದೆಗಳನ್ನು ಏರಲು ಶಿಸ್ತುಬದ್ಧ ಅಧ್ಯಯನ ಹಾಗೂ ದೃಢ ಸಂಕಲ್ಪ ಅಗತ್ಯ" ಮೇ.೨೪ ರಂದು ಕನಕ ಶ್ರೀ ಪ್ರತಿಭಾ ಪುರಸ್ಕಾರ ಸಮಾರಂಭ ವಿಶ್ವಾಸ ಟ್ರೋಪಿ-2026ಗೆ ಅದ್ಧೂರಿ ಚಾಲನೆ : ಅಶ್ವತ್ ವೈದ್ಯರಿಂದ ಉದ್ಘಾಟನೆಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆ’ಯಿಂದ ಎರಡನೇ ಹಂತದ ತೀವ್ರ ಹೋರಾಟ ಆರಂಭಶಿವಾನಂದ ನೀಲಣ್ಣವರ ಈತನ ಶಿವಂ ಅಸೋಸಿಯೇಷನ ಕಛೇರಿಗಳು ಸೀಜ್. ಬಿಜೆಪಿಯಿಂದ ಎರಡು ದಿನಗಳ ಜಿಲ್ಲಾ ಮಟ್ಟದ ಪ್ರಶಿಕ್ಷಣವರ್ಗ ಆಯೋಜನೆಟ್ಯಾಂಕರ್​​ ಗುದ್ದಿದ ಪರಿಣಾಮ ಸೇತುವೆಯಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್​​ಕನಾ೯ಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಸುಧಾರಿತ ವಸ್ತುಗಳ ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆ ಅನಾವರಣಗೊಳಿಸಿದ ಏಕಸ್ ಮತ್ತು ಧಾರವಾಡ ಐಐಟಿಹುಬ್ಬಳ್ಳಿ-ಧಾರವಾಡ ಪಾಲಿಕೆ ನಿವೇಶನಗಳು ಅಕ್ರಮ ಮಾರಾಟ