Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಯಾ ಸೂಪರ್ ಫುಡ್-ಪರ್ಯಾಯ ಬೆಳೆ


ನೇಸರಗಿ: ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ, ಮತ್ತಿಕೊಪ್ಪದಲ್ಲಿ ಚಿಯಾ ಬೆಳೆಯ ಬೇಸಾಯ ತಂತ್ರಜ್ಞಾನಗಳ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ದಿನಾಂಕ ೦೮.೧೦.೨೦೨೫ ರಂದು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಚಚಡಿ ಗ್ರಾಮದ ಪ್ರಗತಿಪರ ರೈತರಾದ ಶ್ರೀ ನಾಗರಾಜ ದೇಸಾಯಿ ನೆರೆವೇರಿಸಿದರು. ಕೇಂದ್ರದ ಮುಖ್ಯಸ್ಥ ಡಾ. ಮಂಜುನಾಥ ಚೌರಡ್ಡಿ ಇವರು ಇವರು ಚಿಯಾ ಒಂದು ಸೂಪರ್ ಫುಡ್ ಬೆಳೆಯಾಗಿದ್ದು, ವಾತಾವರಣ ವೈಪರೀತ್ಯಗೆ ಒಂದು ಪರ್ಯಾಯ ಬೆಳೆಯಾಗಿ ಬೆಳೆಯಬಹುದು ಹಾಗೂ ನೂತನ ಮತ್ತು ಔಷಧೀಯ ಗುಣಗಳನ್ನು ಹೊಂದಿದ ಬೆಳೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಬೆಳೆಸಲು, ಹಿಂಗಾರು ಹಂಗಾಮಿನಲ್ಲಿ ಅಂತರ್ ಬೆಳೆಯಾಗಿ ಬೆಳೆಯಲು ಸಲಹೆ ನೀಡಿದರು.


ಕಾರ್ಯಕ್ರಮದ ಪರಿಚಯದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಎಸ್. ಎಸ್. ಹಿರೇಮಠ ಕಾರ್ಯಕ್ರದಲ್ಲಿ ಪಾಲ್ಗೊಂಡ ಎಲ್ಲ ಗಣ್ಯರನ್ನು ಸ್ವಾಗತಿಸಿದರು ಮತ್ತು ಪ್ರಾಸ್ತಾವಿಕ ನುಡಿಯಲ್ಲಿ ಚಿಯಾ ಬೆಳೆಯನ್ನು ಮೊದಲ ಬಾರಿಗೆ ಕರ್ನಾಟಕದಲ್ಲಿ ಸಿಫ್‌ಟಿಆರ್‌ಆಯ್, ಮೈಸೂರು ಸಂಸ್ಥೆಯಿಂದ ೨೦೧೪ ರಲ್ಲಿ ಈ ಬೆಳೆಯನ್ನು ಬೆಳೆಯಲು ಮೈಸೂರು ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಬೆಳೆಸಲು ಪ್ರೋತ್ಸಾಹಿಸಿದ್ದರು.  ಈ ಬೆಳೆಯನ್ನು ಬೆಳೆಯಲು ರೈತರನ್ನು ಪ್ರೋತ್ಸಾಹಿಸಲು ಮಾರುಕಟ್ಟೆ ವ್ಯವಸ್ಥೆ ಮತ್ತು ಬೆಳೆಯುವ ತಂತ್ರಜ್ಞಾನಗಳನ್ನು ತಿಳಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ರೈತರ ಆದಾಯ ದ್ವಿಗುಣಗೊಳಿಸಲು ಚಿಯಾ ಬೆಳೆಯ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಕೆವಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಚಿಯಾ ಬೆಳೆಯ ಬೇಸಾಯ ಕ್ರಮಗಳನ್ನು ಕುರಿತು ಸವಿಸ್ತಾರವಾಗಿ ತಿಳಿಸಿದರು.  ಜಿ. ಬಿ. ವಿಶ್ವನಾಥ ವಿಜ್ಞಾನಿ (ಬೇಸಾಯ ಶಾಸ್ತ್ರ) ಇವರು ಚಿಯಾ ಬೆಳೆಯಲ್ಲಿ ಬಳಸಬಹುದಾದ ರಸಾವರಿ ಗೊಬ್ಬರಗಳ ಬಳಕೆ ಕುರಿತು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಗುಜರಾತನ ವೆನ್ ಇನ್‌ಕಾರ್ಪೋರೆಟೆಡ್ ಕಂಪನಿ ಲಿ. ವ್ಯವಸ್ಥಾಪಕ ನಿರ್ದೇಶಕ ಹಿತೇಶ ಫರೀಖ ಹಾಗೂ ಬೆಳಗಾವಿ ಉದ್ಯಮಿಗಳಾದ ಜೀತೇಂದ್ರ ಪುರೋಹಿತ, ಜೀತೆಂದ್ರ ಗೌರ್ ಇವರು ರೈತರೊಂದಿಗೆ ಚಿಯಾ ಬೆಳೆಯ ಗುಣಧರ್ಮ, ಶ್ರೇಣೀಕರಣ, ಮಾರುಕಟ್ಟೆ ಮತ್ತು ರಫ್ತು ಕುರಿತು ಸುದೀರ್ಘವಾಗಿ ಮುಖಾಮುಖಿ ಚರ್ಚೆ ನಡೆಸಿದರು. ಕಾರ್ಯಕ್ರಮದಲ್ಲಿ ಕೇಂದ್ರದ ವಿಜ್ಞಾನಿಗಳಾದ ಎಸ್. ಎಮ್. ವಾರದ, ಡಾ. ಭಾವಿನಿ ಪಾಟೀಲ ಹಾಗೂ ಡಾ. ಗುರುರಾಜ ಕೌಜಲಗಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ ಕೇಂದ್ರದ ವಿಜ್ಞಾನಿ ಜಿ. ಬಿ. ವಿಶ್ವನಾಥ ಇವರು ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ