Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ : ಚಿದಾನಂದ ಸವದಿ


ಅಥಣಿ: ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳವು ಅತ್ಯಂತ ಪ್ರಸಿದ್ಧವಾದ ಪುಣ್ಯಕ್ಷೇತ್ರ ಅದರ ಹೆಸರನ್ನು ಕೆಡಿಸಲು ಕೆಲವು ವ್ಯಕ್ತಿಗಳು ನಿರಾಧಾರ ಆರೋಪಗಳನ್ನ ಮಾಡುವುದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದು ಅತ್ಯಂತ ಹೇಯ ಕೃತ್ಯ ಅಂತಹ ಅಪರಾಧ ಮನೋಭಾವ ಇರುವ ವ್ಯಕ್ತಿಗಳನ್ನು ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕು ಎಂದು ಯುವ ನಾಯಕ ಚಿದಾನಂದ ಸವದಿ ಹೇಳಿದರು


ಅಥಣಿ ಪಟ್ಟಣದ ತಾಲೂಕ ಕಚೇರಿ ಎದುರು ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆಯಿಂದ ಪ್ರತಿಭಟನೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದೇವಸ್ಥಾನ ಹಾಗೂ ವೀರೇಂದ್ರ ಹೆಗಡೆ ಅವರ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಎಲ್ಲ ಸಾಮೂಹಿಕ ಸಮುದಾಯಗಳ ಮುಖಂಡರಿಂದ ತಹಸೀಲ್ದಾರ್ ಮೂಲಕ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದರು

ಈ ವೇಳೆ ಮಾತನಾಡಿದ ಯುವ ನಾಯಕ ಚಿದಾನಂದ ಸವದಿ ಹಲವು ವರ್ಷಗಳಿಂದ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ , ಸಮೀರ್ ಎಂಡಿ, ಜಯಂತ ಟಿ, ಅಜಯ್ ಅಂಚನ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳ ಮೂಲಕ ದೇವಸ್ಥಾನದ ಹೆಸರು ಕೆಡಿಸಲು ಹಾಗೂ ವೀರೇಂದ್ರ ಹೆಗಡೆ ಅವರ ಕುಟುಂಬಕ್ಕೆ ಕಳಂಕ ತರುವ ಉದ್ದೇಶದಿಂದ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವುದು ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಯಾರೇ ತಪ್ಪು ಮಾಡಿದರೂ ಸಹ ಅವರ ವಿರುದ್ಧ ಕಾನೂನು ಕ್ರಮವನ್ನು ಜರುಗಿಸಬೇಕು ಎಂದು ಹೇಳಿದರು

ಈ ವೇಳೆ ಅರವಿಂದ ದೇಶಪಾಂಡೆ, ಸಂಜು ತಳವಲಕರ, ಅರುಣ ಯಲಗುದ್ರಿ, ಸದಾಶಿವ ಬುಟಳೆ,  ಉಮೇಶರಾವ ಬೊಂಟಡಕರ ಮಾತನಾಡಿದರು

ಈ ಸಂದರ್ಭದಲ್ಲಿ ಅಮರ ದುರ್ಗಣ್ಣವರ, ಅಭಯ ಕೊಪ್ಪ, ಪುಟ್ಟು ಹಿರೇಮಠ, ವಿನೋದ ಶೆಟ್ಟಿ,ನಾರಾಯಣ ಶಟ್ಟಿ,ಶರಥ ಶಟ್ಟಿ,ರಾಘವೇಂದ್ರ ಶೆಟ್ಟಿ,ಸಾಯಿರಾಜ ಶೆಟ್ಟಿ, ಶೇಖರ ಕನಕರೆಡ್ಡಿ, ದೀನೆಶ ಶೆಟ್ಟಿ, ಸಂದೀಪ್ ಶೆಟ್ಟಿ, ಅನಂತ ಪಡನಾಡ, ಪ್ರಕಾಶ ಕೋಳಿ ಸೇರಿದಂತೆ ಎಲ್ಲ ಸಮಾಜದ ಮಹಿಳೆಯರು ಮುಖಂಡರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ