Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹತ್ತ್ವಾಕಾಂಕ್ಷಿ 'ಕ್ವಿನ್ ಸಿಟಿ' ಯೋಜನೆಗೆ ಮುಖ್ಯಮಂತ್ರಿ ಚಾಲನೆ

ದಾಬಸ್ ಪೇಟೆ- ದೊಡ್ಡಬಳ್ಳಾಪುರ ಮಧ್ಯೆ ತಲೆಎತ್ತಲಿದೆ ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ

ಡಿಸಿಎಂ ಸೇರಿ ಹಲವು ಸಚಿವರು ಭಾಗಿ

ಬೆಂಗಳೂರು: ಸಮೀಪದ ಡಾಬಸಪೇಟೆ ಮತ್ತು ದೊಡ್ಡಬಳ್ಳಾಪುರದ ನಡುವೆ, ಸ್ಯಾಟಲೈಟ್ ಟೌನ್ ರಿಂಗ್ ರಸ್ತೆಯ ಆಸುಪಾಸಿನಲ್ಲಿ ಅಭಿವೃದ್ಧಿಪಡಿಸಲಿರುವ ಕ್ವಿನ್ ಸಿಟಿ (ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ) ಯೋಜನೆಯ ಮೊದಲನೆಯ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಇದರ ಅಂಗವಾಗಿ ಸಮಾರಂಭ ಏರ್ಪಡಿಸಲಾಗಿತ್ತು. ಇದರಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೇರಿದಂತೆ ಸಚಿವ ಸಂಪುಟದ ಹಲವು ಮಂತ್ರಿಗಳು ಮತ್ತು ಹಿರಿಯ ಜನಪ್ರತಿನಿಧಿಗಳು ಹಾಗೂ ಗಣ್ಯ ಉದ್ಯಮಿಗಳು ಉಪಸ್ಥಿತರಿದ್ದರು.

ಯೋಜನೆಗೆ ನಾಂದಿ ಹಾಡಿ ಮಾತನಾಡಿದ ಮುಖ್ಯಮಂತ್ರಿಗಳು, `ಕರ್ನಾಟಕವು ದೇಶದ ಜ್ಞಾನಾಧಾರಿತ ಆರ್ಥಿಕತೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಕ್ವಿನ್ ಸಿಟಿಯು ಕರ್ನಾಟಕ ಮತ್ತು ಭಾರತದ ಪಾಲಿಗೆ ಹೊಸ ಭಾಷ್ಯ ಬರೆಯಲಿದೆ. ಇಲ್ಲಿ ಜಾಗತಿಕ ಮಟ್ಟದ ಸಹಭಾಗಿತ್ವ ಮತ್ತು ನಾವೀನ್ಯತೆಗಳಿಗೆ ಆದ್ಯತೆ ಇರಲಿದ್ದು, `ಸ್ಮಾರ್ಟ್ ಲಿವಿಂಗ್’ ಪರಿಕಲ್ಪನೆಗೆ ಒತ್ತು ಕೊಡಲಾಗುವುದು. ಇಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಂಡು, ಸುಸ್ಥಿರ ಬೆಳವಣಿಗೆ ಸಾಧಿಸಲಾಗುವುದು’ ಎಂದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, `ಬೆಂಗಳೂರಿನ ಕೈಗಾರಿಕಾ ಬೆಳವಣಿಗೆಗೆ ಹೇರಳ ಅವಕಾಶಗಳಿದ್ದು, ಇದನ್ನು ಸಾಧಿಸಲು ಸರಕಾರ ಬದ್ಧವಾಗಿದೆ. ಎರಡು ವಾರಗಳಲ್ಲಿ ಕಾವೇರಿ 5ನೇ ಹಂತದ ಕುಡಿವ ನೀರು ಪೂರೈಕೆ ಆರಂಭವಾಗಲಿದ್ದು, 20 ವರ್ಷಗಳ ಕಾಲ ನೀರಿನ ಕೊರತೆ ಇರುವುದಿಲ್ಲ. ಹಾಗೆಯೇ, ಇಲ್ಲಿ ವಿದ್ಯುತ್ ತೊಂದರೆ ಕೂಡ ಇಲ್ಲ. ಸಂಚಾರ ವ್ಯವಸ್ಥೆಯಲ್ಲಿ ತುಸು ಸಮಸ್ಯೆ ಇರುವುದು ನಿಜ. ಅದನ್ನು ಕ್ಷಿಪ್ರಗತಿಯಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಇಲ್ಲಿರುವಷ್ಟು ಪ್ರತಿಭಾನ್ವಿತ ಮಾನವ ಸಂಪನ್ಮೂಲ ಕೈಗಾರಿಕೆಗಳಿಗೆ ಇನ್ನೆಲ್ಲೂ ಸಿಕ್ಕುವುದಿಲ್ಲ’ ಎಂದರು.

*ವೈಶಿಷ್ಟ್ಯಪೂರ್ಣ ಯೋಜನೆ*

ಸಚಿವ ಎಂ ಬಿ ಪಾಟೀಲ ಮಾತನಾಡಿ, `ಒಟ್ಟು 5,800 ಎಕರೆಯಲ್ಲಿ ಕ್ವಿನ್ ಸಿಟಿಯನ್ನು ಅಭಿವೃದ್ಧಿ ಪಡಿಸುವ ಉದ್ದೇಶವಿದ್ದು, ಮೊದಲ ಹಂತದಲ್ಲಿ 2,000 ಎಕರೆಯಲ್ಲಿ ಇದನ್ನು ಸಾಕಾರಗೊಳಿಸಲಾಗುವುದು. 5 ಲಕ್ಷ ಜನವಸತಿಯ ಗುರಿಯುಳ್ಳ ವಿನೂತನ ನಗರದ ಪರಿಧಿಯಲ್ಲಿ ಶೇ 40ರಷ್ಟು ಜಾಗವನ್ನು ಉದ್ಯಾನಗಳಿಗೆ ಮೀಸಲಿಡಲಾಗಿದೆ. ಜೊತೆಗೆ 0.69 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕಕ್ಕೆ 465 ಎಕರೆ, ವರ್ಷಕ್ಕೆ 7 ಸಾವಿರ ಟನ್ ಹಣ್ಣು-ತರಕಾರಿ ಬೆಳೆಯಲು 200 ಎಕರೆ, ಶೇಕಡ 50ರಿಂದ 70ರಷ್ಟು ಜಲ ಮರುಪೂರಣ ವ್ಯವಸ್ಥೆ ಇರಲಿದೆ’ ಎಂದರು.

ಉದ್ದೇಶಿತ ನಗರದಲ್ಲಿ ಮೊದಲಿಗೆ ಅತ್ಯುತ್ತಮ ಗುಣಮಟ್ಟದ ಶಾಲಾ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅವಕಾಶ ಮಾಡಿಕೊಡಲಾಗುವುದು. ಜತೆಗೆ ಜಗತ್ತಿನ ಅಗ್ರ 500 ವಿ.ವಿ.ಗಳು ತಮ್ಮ ಕ್ಯಾಂಪಸ್ ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಉತ್ಕೃಷ್ಟ ದರ್ಜೆಯ ಆಸ್ಪತ್ರೆಗಳು, ವೈದ್ಯಕೀಯ ಸಂಶೋಧನಾ ಸಂಸ್ಥೆಗಳು ಮತ್ತು ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು. ಒಟ್ಟಿನಲ್ಲಿ 40 ಸಾವಿರ ಕೋಟಿ ರೂ. ಹೂಡಿಕೆಯ ಯೋಜನೆಯಿಂದ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ಯೋಜನೆಯ ವೈಶಿಷ್ಟ್ಯಗಳನ್ನು ವಿವರಿಸಿದರು.

ಕ್ವಿನ್ ಸಿಟಿಯು ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ಮತ್ತು ಶ್ರೇಷ್ಠತೆಗೆ ಮಾನದಂಡವಾಗಿ ಹೊರಹೊಮ್ಮಲಿದೆ. ಬೆಂಗಳೂರಿನಲ್ಲಿರುವ ವಿಜ್ಞಾನ, ತಂತ್ರಜ್ಞಾನ, ಸಂಶೋಧನೆ, ನವೋದ್ಯಮ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯಗಳ ಕಾರ್ಯ ಪರಿಸರವನ್ನು ಇದಕ್ಕೆ ಪೂರಕವಾಗಿ ಬಳಸಿಕೊಳ್ಳಲಾಗುವುದು. ಇಲ್ಲಿ ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆಗಳು ನಾಲ್ಕು ಪ್ರಮುಖ ವಲಯಗಳಾಗಿದ್ದು, ಮುಂಬರುವ ದಿನಗಳ ಸ್ಮಾರ್ಟ್ ಸಿಟಿಗಳಿಗೆ ಮೇಲ್ಪಂಕ್ತಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಎಚ್ ಕೆ ಪಾಟೀಲ, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ಜಮೀರ್ ಅಹಮದ್, ಚೆಲುವರಾಯಸ್ವಾಮಿ, ಡಾ.ಎಂ ಸಿ ಸುಧಾಕರ್, ಲಕ್ಷ್ಮೀ ಹೆಬ್ಬಾಳ್ಕರ್, ಕೆ ಎನ್ ರಾಜಣ್ಣ, ಶರಣಬಸಪ್ಪ ದರ್ಶನಾಪುರ, ಮಂಕಾಳ ವೈದ್ಯ, ಬೋಸರಾಜು, ಶಿವಾನಂದ ಪಾಟೀಲ, ಮಧು ಬಂಗಾರಪ್ಪ, ರಹೀಂ ಖಾನ್ ಮತ್ತು ಆರ್ ಬಿ ತಿಮ್ಮಾಪುರ, ಹಿರಿಯ ಶಾಸಕ ಆರ್ ವಿ ದೇಶಪಾಂಡೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಉದ್ಯಮಿಗಳಾದ ಪ್ರಶಾಂತ್ ಪ್ರಕಾಶ್, ಗೀತಾಂಜಲಿ ಕಿರ್ಲೋಸ್ಕರ್, ರಂಗೇಶ್ ರಾಘವನ್, ವೈದ್ಯ ಡಾ.ವಿವೇಕ ಜವಳಿ ಉಪಸ್ಥಿತಿರಿದ್ದರು.

ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಯೋಜನೆ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಕೆಐಎಡಿಬಿ ಸಿಇಒ ಡಾ,ಮಹೇಶ್ ಉಪಸ್ಥಿತರಿದ್ದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಸ್ವಾಗತಿಸಿದರು. ಕೆಐಎಡಿಬಿ ಸಿಇಒ ಡಾ.ಮಹೇಶ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ