LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಿರ್ಮಾಣ ಹಂತದ 1.30 ಲಕ್ಷ ಮನೆ ಪೂರ್ಣಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿ ಈಗಾಗಲೇ ಪ್ರಾರಂಭವಾಗಿರುವ ಮನೆಗಳ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.


ಕೃಷ್ಣಾದಲ್ಲಿ ಬುಧವಾರ ವಸತಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಕೊಳಚೆ ನಿರ್ಮೂಲನೆ ಮಂಡಳಿ ಅಡಿಯಲ್ಲಿ 82 ಸಾವಿರ ಮನೆಗಳು, ರಾಜೀವ್‌ ಗಾಂಧಿ ವಸತಿ ನಿಗಮ ಅಡಿಯಲ್ಲಿ 47,800 ಮನೆಗಳು ಸೇರಿ ಒಟ್ಟು 1.30 ಲಕ್ಷ ಮನೆ ನಿರ್ಮಾಣದ ವಿವಿಧ ಹಂತಗಳಲ್ಲಿದ್ದು, ಅವುಗಳ ನಿರ್ಮಾಣ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ತಿಳಿಸಿದರು.


 ಪ್ರತಿ ಮನೆಯ ನಿರ್ಮಾಣದ ಘಟಕ ವೆಚ್ಚ 6 ರಿಂದ 7.5 ಲಕ್ಷಗಳಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯ ಧನವನ್ನು ಹೊರತುಪಡಿಸಿ, ಬಾಕಿ ಸುಮಾರು 4 ರಿಂದ 5 ಲಕ್ಷ ರೂಪಾಯಿಗಳ ವಂತಿಗೆ ಮೊತ್ತವನ್ನು ಫಲಾನುಭವಿಗಳೇ ಭರಿಸಬೇಕಾಗಿತ್ತು. ಈ ಮೊತ್ತವನ್ನು ಆರ್ಥಿಕವಾಗಿ ಅಶಕ್ತರಾಗಿರುವ ಕೊಳಗೇರಿ ನಿವಾಸಿಗಳು ಪಾವತಿಸಲು ಕಷ್ಟಕರವಾಗಿದ್ದು ಮನೆಗಳ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದವು. ಆದ್ದರಿಂದ, ಫಲಾನುಭವಿಗಳ ಮೇಲಿನ ಹೊರೆಯನ್ನು ಕಡಿಮೆ ಮಾಡಿ, ಒಂದು ಲಕ್ಷಕ್ಕೆ ನಿಗದಿಗೊಳಿಸಿ, ಪ್ರತಿ ಫಲಾನುಭವಿಗೆ ಬಾಕಿ 4 ಲಕ್ಷಗಳಂತೆ ಸರ್ಕಾರದಿಂದಲೇ ಭರಿಸಲು ಅನುಮೋದನೆ ನೀಡಲಾಗಿದೆ. ಇದಕ್ಕೆ ಪ್ರಥಮ ಹಂತದಲ್ಲಿ 500 ಕೋಟಿ ಮಂಜೂರು ಮಾಡಲಾಗಿದೆ. ಹೆಚ್ಚುವರಿ ಅನುದಾನದ ಬಗ್ಗೆ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಸಿಎಂ ಸೂಚನೆ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್