LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ - ಮುಖ್ಯಮಂತ್ರಿ ಸಿದ್ದರಾಮಯ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಪೂರ್ಣ ಅನುದಾನ

ಬೆಂಗಳೂರು, ಅಕ್ಟೋಬರ್ 15: ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಇಂದು ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನದ ಕೊರತೆಯಾಗಬಾರದೆಂದು ಕೋರುತ್ತಾ, ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದನ್ನು ಬಗ್ಗೆಯೂ ಸಭೆಯ ಗಮನವನ್ನು ಸೆಳೆದಿರುವುದಾಗಿ ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಪೂರ್ಣ ಅನುದಾನ

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು ವಸೂಲು ಮಾಡಿಕೊಡುವುದಾಗಿ ಎಸ್ ಐ ಟಿ ತಿಳಿಸಿದೆ. ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿ, ಮುಂಬರುವ ತೀರ್ಪಿನಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಉಪಚುನಾವಣೆ ಎದುರಿಸಲು ಸಿದ್ಧ

ರಾಜ್ಯದಲ್ಲಿ ನಡೆಯುವ ಉಪಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ದವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಚುನಾವಣೆಯನ್ನು ಸಮರ್ಥವಾಗಿ ಎದುರಿಸಲಿದ್ದೇವೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ