LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಒಂದೇ ಪ್ರಕರಣವನ್ನು ಮೂರು ಸಂಸ್ಥೆಗಳು ತನಿಖೆ: ಮುಖ್ಯಮಂತ್ರಿ ಸಿದ್ದಾರಾಮಯ್ಯ

ಬೆಂಗಳೂರು: ಕೇಂದ್ರೀಯ ತನಿಖಾ ದಳಗಳಾಗಿರುವ ಸಿಬಿಐ ಮತ್ತು ಸಿಬಿಐ ವಾಲ್ಮೀಕಿ ನಿಗಮ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಬಿ ನಾಗೇಂದ್ರರನ್ನು ಪ್ರಕರಣದಲ್ಲಿ ಸಿಎಂ ಮತ್ತು ಡಿಸಿಎಂ ಶಾಮೀಲಾಗಿದ್ದಾರೆ ಎಂದು ಹೇಳಿಕೆ ನೀಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದಾರಾಮಯ್ಯ ಮತ್ತು ಅವರ ಸಚಿವ ಸಂಪುಟ ಸದಸ್ಯರು ಮತ್ತು ಶಾಸಕರು ವಿಧಾನ ಸೌಧದ ಮಹಾತ್ಮಾ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಿದ್ದರಾಮಯ್ಯ ಪ್ರಕರಣದ ತನಿಖೆಯನ್ನು ಎಸ್ಐಟಿ ಮಾಡುತ್ತಿದ್ದರೂ ಸಿಬಿಐ ಯೂನಿಯನ್ ಬ್ಯಾಂಕ್ ನೀಡಿರುವ ದೂರನಡಿ ಮತ್ತು ಈಡಿ ಸ್ವಯಮಪ್ರೇರಿತವಾಗಿ ತನಿಖೆ ನಡೆಸುತ್ತಿವೆ. ಒಂದೇ ಪ್ರಕರಣವನ್ನು ಮೂರು ಸಂಸ್ಥೆಗಳು ತನಿಖೆ ನಡೆಸುತ್ತಿರುವುದು ಇದೇ ಮೊದಲ ತಾನು ನೋಡುತ್ತಿರೋದು ಎಂದು ಮುಖ್ಯಮಂತ್ರಿ ಹೇಳಿದರು.

ವಾಲ್ಮೀಕಿ ಹಗರಣದಲ್ಲಿ ಅವ್ಯವಹಾರ ನಡೆದಿರೋದು ಬಿಜೆಪಿ ಶಾಸಕರು ಹೇಳುತ್ತಿರುವಂತೆ ₹ 187 ಕೋಟಿ ಅಲ್ಲ, ₹ 89.63 ಕೋಟಿ ಹಣದ ದುರುಪಯೋಗ ನಡೆದಿದೆ ಮತ್ತು ಆ ಮೊತ್ತ ತೆಲಂಗಾಣಕ್ಕೆ ಹೋಗಿದೆ. ಆದರೆ ಎಸ್ಐಟಿ ಅಧಿಕಾರಿಗಳು 12 ಜನರನ್ನು ಬಂಧಿಸಿದ್ದಾರೆ ಮತ್ತು ಶೇಕಡ 90 ರಷ್ಟು ಹಣವನ್ನು ರಿಕವರ್ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್