Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ ಹಾಗೂ ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಇಂದು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ ಹಾಗೂ ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು. ಸಾಮಾಜಿಕ‌ ಜಾಲತಾಣಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು, ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಹೇಳಿದರು.

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಫ್ಯಾಕ್ಟ್ ಚೆಕ್ ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮಗಳು ಸತ್ಯಸಂಗತಿ ಜನರಿಗೆ ತಿಳಿಸಿ, ಸುಳ್ಳುಸುದ್ದಿಗೆ ಜನರು ಬಲಿಯಾಗದಂತೆ ತಡೆಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ