Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಬಾಲವಿಕಾಸ ನಡಿಗೆ ಪಾಲಕರ ಕಡೆಗೆ".ಅಕಾಡೆಮಿಯಿಂದ ತರಬೇತಿ ಕಾರ್ಯಕ್ರಮ.



ಧಾರವಾಡ,ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಭಿವೃದ್ಧಿ ಯೋಜನೆ ಹುಬ್ಬಳ್ಳಿ–ಧಾರವಾಡ (ಶಹರ) ಇವರ ಸಂಯುಕ್ತಾಶ್ರಯದಲ್ಲಿ “ಬಾಲವಿಕಾಸ ನಡಿಗೆ ಪಾಲಕರ ಕಡೆಗೆ” ಎಂಬ ಒಂದು ದಿನದ ತರಬೇತಿ ಕಾರ್ಯಕ್ರಮವು ಧಾರವಾಡದ ರಂಗಾಯಣದಲ್ಲಿರುವ ಸುವರ್ಣಾ ಸಾಂಸ್ಕೃತಿಕ ಸಮುಚ್ಚಯ ಸಭಾಭವನದಲ್ಲಿ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಅಡಿವೇಶ ಗಿರೆಪ್ಪ ಇಟಗಿ ಉದ್ಘಾಟಿಸಿದರು. ಅಧ್ಯಕ್ಷೀಯ ಸ್ಥಾನವನ್ನು ಜಂಟಿ ನಿರ್ದೇಶಕರಾದ ಶ್ರೀಮತಿ ಅಕ್ಕಮಹಾದೇವಿ ಕೆ.ಹೆಚ್ ವಹಿಸಿದ್ದರು.
ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಶ್ರೀ ಅಡಿವೇಶ ಇಟಗಿ ಅವರು, “ಮಕ್ಕಳು ಉದ್ಯಾನವನದ ಮೊಗ್ಗುಗಳಂತೆ. ಅವರನ್ನು ಪ್ರೀತಿ, ಕಾಳಜಿ ಮತ್ತು ಸಂಸ್ಕಾರದೊಂದಿಗೆ ಪೋಷಿಸಿದರೆ ಉತ್ತಮ ವ್ಯಕ್ತಿತ್ವ ಬೆಳೆಸಬಹುದು” ಎಂದು ಸಂಸ್ಕೃತ ಶ್ಲೋಕಗಳು ಹಾಗೂ ಉದಾಹರಣೆಗಳ ಮೂಲಕ ವಿವರಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀಮತಿ ಅಕ್ಕಮಹಾದೇವಿ ಅವರು, ಈ ಕಾರ್ಯಕ್ರಮವನ್ನು ರಾಜ್ಯದ ಆರು ಜಿಲ್ಲೆಗಳಲ್ಲಿ ಹಮ್ಮಿಕೊಂಡಿದ್ದು, ಇದರ ಗುರಿ ಹಾಗೂ ಉದ್ದೇಶಗಳನ್ನು ವಿವರಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಡಾ. ಹೆಚ್.ಹೆಚ್ ಕುಕನೂರ ಅವರು ಮಾತನಾಡಿ, ಪೋಕ್ಷೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ, ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ “ಅಕ್ಕಪಡೆ” ಕಾರ್ಯನಿರ್ವಹಿಸುತ್ತಿರುವ ಕುರಿತು ಮಾಹಿತಿ ನೀಡಿದರು. ಸಂಕಷ್ಟದಲ್ಲಿರುವವರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಎಸ್.ಎಸ್ ಕೆಳದಿಮಠ ಅವರು ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳ ಪೋಷಣೆಯಲ್ಲಿ ಪಾಲಕರ ಜವಾಬ್ದಾರಿಗಳ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಡಾ. ಕಮಲವ್ವ ಬೈಲೂರ, ಶ್ರೀ ರಾಮಕೃಷ್ಣ ಸದಲಗಿ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಡಾ. ಸುರೇಶ ಕುಲಕರ್ಣಿ, ಡಾ. ಸ್ವಪ್ನಾ ಪಾಂಡುರಂಗಿ, ಶ್ರೀ ಭರತಕುಮಾರ ಚಂದನಕರ ಮತ್ತು ಶ್ರೀ ನಂದಪ್ಪಗೌರ ದ್ಯಾಪೂರ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಸುನೀತಾ ಪಾಟೀಲ (ಹುಬ್ಬಳ್ಳಿ–ಧಾರವಾಡ ಶಹರ) ಹಾಗೂ ಶ್ರೀ ಮಂಜುನಾಥ ಕುಂಬಾರ (ಧಾರವಾಡ ಗ್ರಾಮೀಣ) ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ