LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಭಾರತ ಮತ್ತು ಚೀನಾ ನಡುವಿನ ಗಡಿ ವಿಚಾರ: ಮೋದಿ ಅಭಿಪ್ರಾಯ ಸ್ವಾಗತಿಸಿದ ಚೀನಾ

ಬೀಜಿಂಗ್, ಏಪ್ರಿಲ್ 11: ಚೀನಾ ಜೊತೆಗಿನ ಸಂಬಂಧ ಮುಖ್ಯವಾಗಿದ್ದು, ಗಡಿ ಸಮಸ್ಯೆಗಳಿಂದ ಆದಷ್ಟೂ ಬೇಗ ದೂರ ಮಾಡಬೇಕು ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ನೀಡಿದ್ದ ಹೇಳಿಕೆಗೆ ಚೀನಾ ಸಹಮತ ವ್ಯಕ್ತಪಡಿಸಿದೆ. ಭಾರತ ಮತ್ತು ಚೀನಾ ಮಧ್ಯೆ ಆರೋಗ್ಯಯುತ ಮತ್ತು ಸ್ಥಿರ ಸಂಬಂಧ ಇದ್ದರೆ ಎರಡೂ ದೇಶಗಳ ಹಿತಾಸಕ್ತಿಗೆ ಅನುಕೂಲವಾಗುತ್ತದೆ ಎಂದು ಚೀನಾದ ವಿದೇಶಾಂಗ ಇಲಾಖೆಯ ವಕ್ತಾರೆ ಮಾವೋ ನಿಂಗ್ ಹೇಳಿದ್ದಾರೆ.

ಪ್ರಧಾನಿಗಳು ನೀಡಿದ ಹೇಳಿಕೆಯನ್ನು ಚೀನಾ ಗಮನಿಸಿದೆ. ಭಾರತ ಮತ್ತು ಚೀನಾ ನಡುವೆ ಗಟ್ಟಿ ಸಂಬಂಧ ಇದ್ದರೆ ಎರಡೂ ದೇಶಗಳಿಗೆ ಸಹಾಯವಾಗುತ್ತದೆ. ಈ ಪ್ರದೇಶ ಹಾಗೂ ಅದರಾಚೆ ಶಾಂತಿ ಮತ್ತು ಅಭಿವೃದ್ಧಿ ಸಾಧ್ಯ ಮಾಡಿಕೊಡುತ್ತದೆ,’ ಎಂದು ಚೀನಾದ ಈ ವಕ್ತಾರೆ ಅಭಿಪ್ರಾಯಪಟ್ಟಿದ್ದಾರೆ.

ಅಮೆರಿಕದ ನ್ಯೂಸ್​ವೀಕ್ ಮ್ಯಾಗಝಿನ್​ಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಚೀನಾ ಸಂಬಂಧದ ಮಹತ್ವದ ಬಗ್ಗೆ ಮಾತನಾಡಿದ್ದರು. ಚೀನಾದೊಂದಿಗೆ ಉತ್ತಮ ಸಂಬಂಧ ಹೊಂದಿರುವುದು ಭಾರತಕ್ಕೆ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ನಮ್ಮ ಗಡಿಭಾಗದಲ್ಲಿ ದೀರ್ಘಕಾಲದಿಂದ ಇರುವ ಸಮಸ್ಯೆಗಳನ್ನು ಆದಷ್ಟೂ ಬೇಗ ನಿವಾರಿಸುವ ಅವಶ್ಯಕತೆ ಇದೆ ಎನ್ನುವುದು ನನ್ನ ಭಾವನೆ. ಇದರಿಂದ ನಮ್ಮೆರಡು ದೇಶಗಳ ದ್ವಿಪಕ್ಷೀಯ ವ್ಯವಹಾರದಲ್ಲಿನ ಅಸ್ವಾಭಾವಿಕತೆಯನ್ನು ನೀಗಿಸಬಹುದು.ಭಾರತ ಮತ್ತು ಚೀನಾ ಮಧ್ಯೆ ಸ್ಥಿರ ಮತ್ತು ಶಾಂತಿಯು ಸಂಬಂಧವು ಕೇವಲ ನಮ್ಮೆರಡು ದೇಶಗಳಿಗೆ ಮಾತ್ರವಲ್ಲ, ಇಡೀ ಪ್ರದೇಶ ಮತ್ತು ವಿಶ್ವಕ್ಕೂ ಮುಖ್ಯವಾಗಿದೆ,’ ಎಂದು ನರೇಂದ್ರ ಮೋದಿ ಆ ಸಂದರ್ಶನದಲ್ಲಿ ಹೇಳಿದ್ದಾರೆ.

ಗಡಿವಿಚಾರವು ಭಾರತ ಮತ್ತು ಚೀನಾದ ಇಡೀ ಸಂಬಂಧವನ್ನು ಪ್ರತಿನಿಧಿಸುವುದಿಲ್ಲ. ದ್ವಿಪಕ್ಷೀಯ ಸಂಬಂಧದಲ್ಲಿ ಸೂಕ್ತ ಜಾಗದಲ್ಲಿ ಈ ಗಡಿ ವಿಚಾರವನ್ನು ಇರಿಸಬೇಕು. ಅದನ್ನು ಸರಿಯಾಗಿ ನಿರ್ವಹಿಸಬೇಕು. ಚೀನಾದ ದಾರಿಯಲ್ಲೇ ಭಾರತವೂ ಸಾಗಿ ಬರುತ್ತದೆ ಎಂದು ಆಶಿಸುತ್ತೇನೆ. ದೀರ್ಘಕಾಲೀನ ದೃಷ್ಟಿಕೋನ, ಪರಸ್ಪರ ನಂಬಿಕೆ, ಮಾತುಕತೆ ಮತ್ತು ಸಹಕಾರ, ವೈಭಿನ್ಯತೆಯ ನಿರವಹಣೆ, ಸರಿಯಾದ ಮಾರ್ಗದಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಮುಂದಕ್ಕೆ ಕೊಂಡೊಯ್ಯುವುದು, ಇದು ಸರಿಯಾಗಿ ನಡೆಯಲಿ ಎಂಬುದು ನಮ್ಮ ನಿರೀಕ್ಷೆ, ಎಂದು ಮಾವೋ ನಿಂಗ್ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್