Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ಮತ್ತು ಚೀನಾ ನಡುವಿನ ಗಡಿ ವಿಚಾರ: ಮೋದಿ ಅಭಿಪ್ರಾಯ ಸ್ವಾಗತಿಸಿದ ಚೀನಾ

ಬೀಜಿಂಗ್, ಏಪ್ರಿಲ್ 11: ಚೀನಾ ಜೊತೆಗಿನ ಸಂಬಂಧ ಮುಖ್ಯವಾಗಿದ್ದು, ಗಡಿ ಸಮಸ್ಯೆಗಳಿಂದ ಆದಷ್ಟೂ ಬೇಗ ದೂರ ಮಾಡಬೇಕು ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ನೀಡಿದ್ದ ಹೇಳಿಕೆಗೆ ಚೀನಾ ಸಹಮತ ವ್ಯಕ್ತಪಡಿಸಿದೆ. ಭಾರತ ಮತ್ತು ಚೀನಾ ಮಧ್ಯೆ ಆರೋಗ್ಯಯುತ ಮತ್ತು ಸ್ಥಿರ ಸಂಬಂಧ ಇದ್ದರೆ ಎರಡೂ ದೇಶಗಳ ಹಿತಾಸಕ್ತಿಗೆ ಅನುಕೂಲವಾಗುತ್ತದೆ ಎಂದು ಚೀನಾದ ವಿದೇಶಾಂಗ ಇಲಾಖೆಯ ವಕ್ತಾರೆ ಮಾವೋ ನಿಂಗ್ ಹೇಳಿದ್ದಾರೆ.

ಪ್ರಧಾನಿಗಳು ನೀಡಿದ ಹೇಳಿಕೆಯನ್ನು ಚೀನಾ ಗಮನಿಸಿದೆ. ಭಾರತ ಮತ್ತು ಚೀನಾ ನಡುವೆ ಗಟ್ಟಿ ಸಂಬಂಧ ಇದ್ದರೆ ಎರಡೂ ದೇಶಗಳಿಗೆ ಸಹಾಯವಾಗುತ್ತದೆ. ಈ ಪ್ರದೇಶ ಹಾಗೂ ಅದರಾಚೆ ಶಾಂತಿ ಮತ್ತು ಅಭಿವೃದ್ಧಿ ಸಾಧ್ಯ ಮಾಡಿಕೊಡುತ್ತದೆ,’ ಎಂದು ಚೀನಾದ ಈ ವಕ್ತಾರೆ ಅಭಿಪ್ರಾಯಪಟ್ಟಿದ್ದಾರೆ.

ಅಮೆರಿಕದ ನ್ಯೂಸ್​ವೀಕ್ ಮ್ಯಾಗಝಿನ್​ಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಚೀನಾ ಸಂಬಂಧದ ಮಹತ್ವದ ಬಗ್ಗೆ ಮಾತನಾಡಿದ್ದರು. ಚೀನಾದೊಂದಿಗೆ ಉತ್ತಮ ಸಂಬಂಧ ಹೊಂದಿರುವುದು ಭಾರತಕ್ಕೆ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ನಮ್ಮ ಗಡಿಭಾಗದಲ್ಲಿ ದೀರ್ಘಕಾಲದಿಂದ ಇರುವ ಸಮಸ್ಯೆಗಳನ್ನು ಆದಷ್ಟೂ ಬೇಗ ನಿವಾರಿಸುವ ಅವಶ್ಯಕತೆ ಇದೆ ಎನ್ನುವುದು ನನ್ನ ಭಾವನೆ. ಇದರಿಂದ ನಮ್ಮೆರಡು ದೇಶಗಳ ದ್ವಿಪಕ್ಷೀಯ ವ್ಯವಹಾರದಲ್ಲಿನ ಅಸ್ವಾಭಾವಿಕತೆಯನ್ನು ನೀಗಿಸಬಹುದು.ಭಾರತ ಮತ್ತು ಚೀನಾ ಮಧ್ಯೆ ಸ್ಥಿರ ಮತ್ತು ಶಾಂತಿಯು ಸಂಬಂಧವು ಕೇವಲ ನಮ್ಮೆರಡು ದೇಶಗಳಿಗೆ ಮಾತ್ರವಲ್ಲ, ಇಡೀ ಪ್ರದೇಶ ಮತ್ತು ವಿಶ್ವಕ್ಕೂ ಮುಖ್ಯವಾಗಿದೆ,’ ಎಂದು ನರೇಂದ್ರ ಮೋದಿ ಆ ಸಂದರ್ಶನದಲ್ಲಿ ಹೇಳಿದ್ದಾರೆ.

ಗಡಿವಿಚಾರವು ಭಾರತ ಮತ್ತು ಚೀನಾದ ಇಡೀ ಸಂಬಂಧವನ್ನು ಪ್ರತಿನಿಧಿಸುವುದಿಲ್ಲ. ದ್ವಿಪಕ್ಷೀಯ ಸಂಬಂಧದಲ್ಲಿ ಸೂಕ್ತ ಜಾಗದಲ್ಲಿ ಈ ಗಡಿ ವಿಚಾರವನ್ನು ಇರಿಸಬೇಕು. ಅದನ್ನು ಸರಿಯಾಗಿ ನಿರ್ವಹಿಸಬೇಕು. ಚೀನಾದ ದಾರಿಯಲ್ಲೇ ಭಾರತವೂ ಸಾಗಿ ಬರುತ್ತದೆ ಎಂದು ಆಶಿಸುತ್ತೇನೆ. ದೀರ್ಘಕಾಲೀನ ದೃಷ್ಟಿಕೋನ, ಪರಸ್ಪರ ನಂಬಿಕೆ, ಮಾತುಕತೆ ಮತ್ತು ಸಹಕಾರ, ವೈಭಿನ್ಯತೆಯ ನಿರವಹಣೆ, ಸರಿಯಾದ ಮಾರ್ಗದಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಮುಂದಕ್ಕೆ ಕೊಂಡೊಯ್ಯುವುದು, ಇದು ಸರಿಯಾಗಿ ನಡೆಯಲಿ ಎಂಬುದು ನಮ್ಮ ನಿರೀಕ್ಷೆ, ಎಂದು ಮಾವೋ ನಿಂಗ್ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ